ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್!

ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ ಆಗಿರುವುದು ಪವನ್ ಕಲ್ಯಾಣ್ ಅವರ ಆಪ್ತ ನಿರ್ದೇಶಕರೊಬ್ಬರ ಟ್ವೀಟ್. ಬಿಡುಗಡೆ ಆಗಲಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ನಿರ್ದೇಶಕ ಮಾಡಿರುವ ಟ್ವೀಟ್​​ನಿಂದಾಗಿ ಮಹೇಶ್ ಬಾಬು ಅಭಿಮಾನಿಗಳು ಬೇಸರಗೊಂಡಿದ್ದಾರೆ.

ತೆಲುಗು ರಾಜ್ಯಗಳಲ್ಲಿ ಫ್ಯಾನ್ಸ್ ವಾರ್​​ಗಳು ಸಾಮಾನ್ಯ. ಕರ್ನಾಟಕಕ್ಕೆ ಹೋಲಿಸಿದರೆ ತುಸು ಹೆಚ್ಚೇ ಎನ್ನಬಹುದು. ಮೆಗಾಸ್ಟಾರ್ ಅಭಿಮಾನಿಗಳು ಮತ್ತು ನಂದಮೂರಿ ಅಭಿಮಾನಿಗಳ ನಡುವಿನ ಫ್ಯಾನ್ಸ್ ವಾರ್​​ಗೆ ದಶಕಗಳ ಇತಿಹಾಸವಿದೆ. ಇವುಗಳ ನಡುವೆ ಜೂ ಎನ್​​ಟಿಆರ್ vs ಪವನ್ ಕಲ್ಯಾಣ್, ಪವನ್ ಕಲ್ಯಾಣ್ vs ಮಹೇಶ್ ಬಾಬು ಹೀಗೆ ಬೇರೆ ಬೇರೆ ಫ್ಯಾನ್ಸ್ ವಾರ್​​ಗಳು ಆಗಾಗ್ಗೆ ನಡೆಯುತ್ತಲೇ ಇರುತ್ತವೆ. ಇದೀಗ ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ ಆಗಿರುವುದು ಪವನ್ ಕಲ್ಯಾಣ್ ಅವರ ಆಪ್ತ ನಿರ್ದೇಶಕರೊಬ್ಬರ ಟ್ವೀಟ್.

ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬಿಡುಗಡೆ ಆಗುತ್ತಿದೆ. ಮಾರ್ಚ್ 19 ರಂದು ‘ಧುರಂಧರ್ 2’ ಸಿನಿಮಾದ ಎದುರು ಅದು ರಿಲೀಸ್ ಆಗುತ್ತಿದೆ. ಈ ಸಿನಿಮಾವನ್ನು ಹರೀಶ್ ಶಂಕರ್ ನಿರ್ದೇಶನ ಮಾಡಿದ್ದು, ಪವನ್ ಕಲ್ಯಾಣ್​​ರ ಆಪ್ತ ನಿರ್ದೇಶಕರುಗಳಲ್ಲಿ ಇವರೂ ಒಬ್ಬರಾಗಿದ್ದಾರೆ. ಸಹಜವಾಗಿಯೇ ಪವನ್ ಕಲ್ಯಾಣ್ ಅಭಿಮಾನಿಗಳು ಸಿನಿಮಾ ನೋಡಲು ಉತ್ಸುಕರಾಗಿದ್ದಾರೆ.

ಇತ್ತೀಚೆಗೆ ಪವನ್ ಕಲ್ಯಾಣ್ ಅಭಿಮಾನಿಯೊಬ್ಬ ಟ್ವೀಟ್ ಮಾಡಿ, ಮಹೇಶ್ ಬಾಬು ಸಿನಿಮಾಗಳ ರೆಕಾರ್ಡ್ ಅನ್ನು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬ್ರೇಕ್ ಮಾಡಬೇಕು ಎಂದಿದ್ದ. ಮಹೇಶ್ ಬಾಬು ಎಂದು ನೇರವಾಗಿ ಹೆಸರು ಬಳಸುವ ಬದಲಿಗೆ ಮಹೇಶ್ ಬಾಬು ಅಡ್ಡ ಹೆಸರಾದ ‘ಬಾಬ್’ ಎಂದು ಬರೆದಿದ್ದ. ಆ ಟ್ವೀಟ್​​ಗೆ ಪ್ರತಿಕ್ರಿಯೆ ನೀಡಿದ್ದ ಹರೀಶ್ ಶಂಕರ್ ‘ತಥಾಸ್ತು’ ಎಂದಿದ್ದರು. ಆ ಮೂಲಕ ಮಹೇಶ್ ಬಾಬು ರೆಕಾರ್ಡ್​​ಗಳನ್ನು ಬ್ರೇಕ್ ಮಾಡುತ್ತೇನೆ ಎಂದಿದ್ದರು. ಹರೀಶ್ ಶಂಕರ್ ಅವರ ಈ ಟ್ವೀಟ್ ಮಹೇಶ್ ಅಭಿಮಾನಿಗಳನ್ನು ಕೆರಳಿಸಿದೆ.

ಆದರೆ ಶೀಘ್ರವೇ ತಮ್ಮ ತಪ್ಪು ತಿಳಿದುಕೊಂಡ ಹರೀಶ್ ಶಂಕರ್ ಕೂಡಲೇ ತಮ್ಮ ‘ತಥಾಸ್ತು’ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಲ್ಲದೆ, ತಾವು ಟ್ವೀಟ್​​ ಅನ್ನು ಪೂರ್ಣವಾಗಿ ಓದದೆ ಹಾಗೂ ಸರಿಯಾಗಿ ಅರ್ಥೈಸಿಕೊಳ್ಳದೆ ಪ್ರತಿಕ್ರಿಯೆ ನೀಡಿದ್ದಾಗಿ ಹೇಳಿದ್ದಾರೆ. ಅಲ್ಲದೆ ತಮ್ಮ ಟ್ವೀಟ್​​ನಿಂದ ಮಹೇಶ್ ಬಾಬು ಅಭಿಮಾನಿಗಳಿಗೆ ಬೇಸರ ಉಂಟಾಗಿದ್ದರೆ ಕ್ಷಮೆ ಕೇಳುವುದಾಗಿ ಸಹ ಹರೀಶ್ ಶಂಕರ್ ಹೇಳಿದ್ದಾರೆ.

ಟಾಲಿವುಡ್ ಖ್ಯಾತ ನಿರ್ದೇಶಕ ಹರೀಶ್ ಶಂಕರ್ ಅವರು ತಮ್ಮ ಮುಂಬರುವ ಚಿತ್ರ ‘ಉಸ್ತಾದ್ ಭಗತ್ ಸಿಂಗ್’ (ಪವನ್ ಕಲ್ಯಾಣ್ ನಟನೆಯ ಸಿನಿಮಾ) ಪ್ರಚಾರದ ಸಂದರ್ಭದಲ್ಲಿ ಮಾಡಿದ್ದ ಒಂದು ಟ್ವೀಟ್ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಕೊನೆಗೆ ಅವರು ಮಹೇಶ್ ಬಾಬು ಮತ್ತು ಅವರ ಅಭಿಮಾನಿಗಳಿಗೆ ಬೇಷರತ್ ಕ್ಷಮೆಯಾಚಿಸುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಟ್ವೀಟ್ ಮಾಡಿರುವ ಹರೀಶ್ ಶಂಕರ್, ‘ಸೆನ್ಸಾರ್ ಮಂಡಳಿ ಅಧಿಕಾರಿಗಳ ಭೇಟಿ, ಪೆದ್ದಮ್ಮ ದೇವಸ್ಥಾನದ ದರ್ಶನ ಮತ್ತು ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತಾನು ತುಂಬಾ ಬ್ಯುಸಿಯಾಗಿದ್ದೆ. ಆ ಹಡಬಡಿಕೆಯಲ್ಲಿ ಅಭಿಮಾನಿಗಳ ಶುಭಾಶಯಗಳಿಗೆ ಪ್ರತಿಕ್ರಿಯಿಸುವಾಗ, ಟ್ವೀಟ್ ಅನ್ನು ಪೂರ್ತಿಯಾಗಿ ಓದದೆ ಕೇವಲ ಮೊದಲ ಅರ್ಧ ಭಾಗವನ್ನು ನೋಡಿ ‘ತಥಾಸ್ತು’ ಎಂದು ಉತ್ತರಿಸಿದ್ದೆ. ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಮೇಲೆ ನನಗೆ ಅಪಾರ ಗೌರವವಿದೆ. ರಾಜಮೌಳಿ-ಮಹೇಶ್ ಬಾಬು ಅವರ ‘ವಾರಣಾಸಿ’ ಸಿನಿಮಾ ದೊಡ್ಡ ದಾಖಲೆ ಬರೆಯಲಿದೆ ಎಂಬ ನಂಬಿಕೆ ನನಗಿದೆ. ಯಾರ ಮನಸ್ಸನ್ನೂ ನೋಯಿಸುವ ಉದ್ದೇಶ ನನಗಿಲ್ಲ. ಸಿನಿಮಾ ಬಿಡುಗಡೆಗೆ ಕೇವಲ 10 ದಿನಗಳಿರುವಾಗ ಉದ್ದೇಶಪೂರ್ವಕವಾಗಿ ಇಂತಹ ತಪ್ಪು ಮಾಡುವಷ್ಟು ಅಜ್ಞಾನಿ ನಾನಲ್ಲ. ತಿಳಿಯದೇ ಮಾಡಿದ ಈ ತಪ್ಪಿಗೆ ಕ್ಷಮೆಯಿರಲಿ ಎಂದು ಕೇಳಿಕೊಂಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !