ಹಾರ್ಮುಜ್ ಜಲಸಂಧಿಯಲ್ಲಿ ನೇವಲ್‌ ಮೈನ್ಸ್‌– ಇರಾನಿನ 16 ಹಡಗುಗಳನ್ನು ನಾಶ ಮಾಡಿರುವುದಾಗಿ ಅಮೆರಿಕದ ತಿಳಿಸಿದೆ.

ವಾಷಿಂಗ್ಟನ್‌: ತನ್ನ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಇರಾನ್‌ ಈಗ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳು ಸಂಚರಿಸದಂತೆ ಸಮುದ್ರದ ಒಳಗಡೆ ಸ್ಫೋಟಕವನ್ನು ಇರಿಸಿದ ವಿಚಾರ ಬೆಳಕಿಗೆ ಬಂದಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರತಿಕ್ರಿಯಿಸಿ, ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಯಾವುದೇ ನೇವಲ್‌ ಮೈನ್ಸ್‌ ಹಾಕಿದ್ದರೆ ತಕ್ಷಣವೇ ತೆಗೆದು ಹಾಕಬೇಕು. ಒಂದು ವೇಳೆ ತೆಗೆಯದೇ ಇದ್ದರೆ ಹಿಂದೆಂದು ಕಾಣದ ರೀತಿಯಲ್ಲಿ ಇರಾನ್‌ ಮೇಲೆ ಮಿಲಿಟರಿ ದಾಳಿ ನಡೆಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.ಹಾರ್ಮುಜ್ ಜಲಸಂಧಿಯಲ್ಲಿ ನೇವಲ್‌ ಮೈನ್ಸ್‌ ಹಾಕುತ್ತಿದ್ದ ಇರಾನಿನ 16 ಹಡಗುಗಳನ್ನು ತಾನು ನಾಶ ಮಾಡಿರುವುದಾಗಿ ಅಮೆರಿಕದ ತಿಳಿಸಿದೆ

ಏನಿದು ನೇವಲ್‌ ಮೈನ್ಸ್‌?
ನಕ್ಸಲೈಟ್‌ಗಳು, ಉಗ್ರಗಾಮಿಗಳು ಭೂಮಿ ಒಳಗಡೆ ಬಾಂಬ್‌ ಇಡುವುದನ್ನು ನೀವು ಓದಿರಬಹುದು. ಈ ನೆಲಬಾಂಬ್‌ ಹುದುಗಿಸಿದ ಜಾಗದ ಮೇಲೆ ಕಾಲು ಇಟ್ಟಾಗ ಅಥವಾ ವಾಹನಗಳು ಸಂಚರಿಸಿದಾಗ ಒತ್ತಡದಿಂದ ಅದು ಸ್ಫೋಟಗೊಳ್ಳುತ್ತದೆ. ಅದೇ ರೀತಿಯಾಗಿ ನೀರಿನ ಒಳಗಡೆಯೂ ಸ್ಫೋಟಕಗಳನ್ನು ಇರಿಸಿ ಹಡಗುಗಳು, ಜಲಾಂತರ್ಗಾಮಿಗಳನ್ನು ನಾಶ ಮಾಡಲು ನೇವಲ್‌ ಮೈನ್ಸ್‌ ಬಳಕೆ ಮಾಡಲಾಗುತ್ತದೆ. ಹಡಗುಗಳು ಅವುಗಳ ಸಂಪರ್ಕಕ್ಕೆ ಬಂದಾಗ ಅಥವಾ ಅವುಗಳ ಹತ್ತಿರ ಸುಳಿದಾಗ ಸ್ಫೋಟಗೊಳ್ಳುವಂತೆ ವಿನ್ಯಾಸ ಮಾಡಲಾಗಿರುತ್ತದೆ.ಈ ಮೈನ್‌ಗಳನ್ನು ರಕ್ಷಣಾತ್ಮಕವಾಗಿ (ತನ್ನದೇ ಆದ ಹಡಗುಗಳನ್ನು ರಕ್ಷಿಸಲು) ಅಥವಾ ಆಕ್ರಮಣಕಾರಿಯಾಗಿ (ಶತ್ರುಗಳ ಹಡಗುಗಳ ಸಂಚಾರವನ್ನು ತಡೆಯಲು) ಬಳಸಲಾಗುತ್ತದೆ.

ಯಾವ ರೀತಿ ಇರುತ್ತೆ?
ಕೆಲವು ಮೈನ್‌ಗಳನ್ನು ಸಮುದ್ರದ ತಳಕ್ಕೆ ಹಾಕಿದ್ದರೆ, ಇನ್ನು ಕೆಲವು ನೀರಿನಲ್ಲಿ ತೇಲುತ್ತಿರುತ್ತವೆ. ಈ ಸ್ಫೋಟಕಗಳನ್ನು ತಾಗಿದಾಗ ಸ್ಫೋಟಗೊಳ್ಳುತ್ತದೆ. ಹಡಗು ಸಂಚರಿಸುತ್ತಿದ್ದಾಗ ಕಾಂತೀಯ ಕ್ಷೇತ್ರ, ಪ್ರೊಪೆಲ್ಲರ್‌ ಶಬ್ಧ ನೀರಿನ ಒತ್ತಡದಲ್ಲಿನ ಬದಲಾವಣೆಗಳನ್ನು ಪತ್ತೆಹಚ್ಚಿ ಸ್ಫೋಟಗೊಳ್ಳುವಂತೆ ರೂಪಿಸಲಾಗಿರುತ್ತದೆ.

ಇವುಗಳನ್ನು ವಿಶೇಷ ಹಡಗುಗಳು, ಜಲಾಂತರ್ಗಾಮಿಗಳು ಅಥವಾ ವಿಮಾನಗಳ ಮೂಲಕ ಸಮುದ್ರಕ್ಕೆ ಹಾಕಲಾಗುತ್ತದೆ. ಇವುಗಳು ಕ್ಷಿಪಣಿಗಳಿಗಿಂತ ಕಡಿಮೆ ವೆಚ್ಚದಾಯಕವಾಗಿದೆ ಮಾತ್ರವಲ್ಲ ಶತ್ರು ಹಡಗುಗಳಿಗೆ ಭಾರಿ ಹಾನಿ ಉಂಟುಮಾಡುತ್ತದೆ.

ಇರಾನ್‌ ದೇಶೀಯವಾಗಿ ನೇವಲ್‌ ಮೈನ್ಸ್‌ ತಯಾರಿಸುವ ಸಾಮರ್ಥ್ಯ ಹೊಂದಿದೆ. ಕೆಲವು ಸುಧಾರಿತ ವಿನ್ಯಾಸಗಳನ್ನು ರಷ್ಯಾ, ಚೀನಾ ಅಥವಾ ಉತ್ತರ ಕೊರಿಯಾದಲ್ಲಿ ಅಭಿವೃದ್ಧಿಪಡಿಸಿದ ವ್ಯವಸ್ಥೆಗಳಿಂದ ಪಡೆದಿದೆ ಎನ್ನಲಾಗುತ್ತಿದೆ.
ಅಮೆರಿಕ ಸೆಂಟರ್ ಫಾರ್ ಇಂಟರ್ನ್ಯಾಷನಲ್ ಮ್ಯಾರಿಟೈಮ್ ಸೆಕ್ಯುರಿಟಿಯ ಪ್ರಕಾರ ಇರಾನ್ ಸುಮಾರು 2,000 ರಿಂದ 5,000 ನೇವಲ್‌ ಮೈನ್ಸ್‌ ಹೊಂದಿರುವ ಸಾಧ್ಯತೆಯಿದೆ.

Related Posts

ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ ಕೋರ್ಟ್ ’ ಅಸ್ತು

ನವದೆಹಲಿ: ದೇಶಾದ್ಯಂತ `ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ದೇಶದ ಎಲ್ಲಾ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ಏಕೈಕ ಮಾರ್ಗವೆಂದರೆ ದೇಶಾದ್ಯಂತ ಯುಸಿಸಿ ಜಾರಿಗೆ ತರುವುದು ಎಂದಿದೆ. ಮುಸ್ಲಿಂ ವೈಯಕ್ತಿಕ ಕಾನೂನು (ಶರಿಯತ್) ಅಡಿಯಲ್ಲಿ ಮಹಿಳೆಯರ ಹಕ್ಕುಗಳ ಉಲ್ಲಂಘನೆಯನ್ನು…

ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ.

ಟಿ. ನರಸೀಪುರದಲ್ಲಿರುವ ಕೆಎಸ್ಐಸಿ ರೇಷ್ಮೆ ನೂಲು ಘಟಕದ ಜಾಗದಲ್ಲಿ ಸ್ಟೇಡಿಯಂ ನಿರ್ಮಿಸುವ ಸರ್ಕಾರದ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷದ ನಾಯಕರು ಮತ್ತು ನೌಕರರ ಹೋರಾಟದ ಫಲವಾಗಿ, ಸರ್ಕಾರ ಈ ಯೋಜನೆಯನ್ನು ಕೈಬಿಟ್ಟು, ಲಾಭದಾಯಕ ಘಟಕವನ್ನು ಉಳಿಸಿ ಅಭಿವೃದ್ಧಿಪಡಿಸುವುದಾಗಿ ಭರವಸೆ…

You Missed

ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ ಕೋರ್ಟ್ ’ ಅಸ್ತು

ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ ಕೋರ್ಟ್ ’ ಅಸ್ತು

ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ.

ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ.

ಹಾರ್ಮುಜ್ ಜಲಸಂಧಿಯಲ್ಲಿ ನೇವಲ್‌ ಮೈನ್ಸ್‌– ಇರಾನಿನ 16 ಹಡಗುಗಳನ್ನು ನಾಶ ಮಾಡಿರುವುದಾಗಿ ಅಮೆರಿಕದ ತಿಳಿಸಿದೆ.

ಹಾರ್ಮುಜ್ ಜಲಸಂಧಿಯಲ್ಲಿ ನೇವಲ್‌ ಮೈನ್ಸ್‌–  ಇರಾನಿನ 16 ಹಡಗುಗಳನ್ನು ನಾಶ ಮಾಡಿರುವುದಾಗಿ ಅಮೆರಿಕದ ತಿಳಿಸಿದೆ.

ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್!

ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್!

ಬಾಡಿಗೆದಾರರಿಗೆ ಗುಡ್‌ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಬಾಡಿಗೆದಾರರಿಂದ ವಿಪರೀತವಾಗಿ ಹಣ ತೆಗೆದುಕೊಳ್ಳುವುದಕ್ಕೆ ಬ್ರೇಕ್.

ಬಾಡಿಗೆದಾರರಿಗೆ ಗುಡ್‌ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಬಾಡಿಗೆದಾರರಿಂದ ವಿಪರೀತವಾಗಿ ಹಣ ತೆಗೆದುಕೊಳ್ಳುವುದಕ್ಕೆ ಬ್ರೇಕ್.

ಇರಾನ್-ಇಸ್ರೇಲ್ ಯುದ್ಧದ ಬಿಸಿ ಇದೀಗ ನೇರವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಜನಜೀವನದ ಮೇಲೆ ಬೀರುತ್ತಿದೆ!

ಇರಾನ್-ಇಸ್ರೇಲ್ ಯುದ್ಧದ ಬಿಸಿ ಇದೀಗ ನೇರವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಜನಜೀವನದ ಮೇಲೆ ಬೀರುತ್ತಿದೆ!