ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ ಕೋರ್ಟ್ ’ ಅಸ್ತು

ನವದೆಹಲಿ: ದೇಶಾದ್ಯಂತ `ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ದೇಶದ ಎಲ್ಲಾ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ಏಕೈಕ ಮಾರ್ಗವೆಂದರೆ ದೇಶಾದ್ಯಂತ ಯುಸಿಸಿ ಜಾರಿಗೆ ತರುವುದು ಎಂದಿದೆ.

ಮುಸ್ಲಿಂ ವೈಯಕ್ತಿಕ ಕಾನೂನು (ಶರಿಯತ್) ಅಡಿಯಲ್ಲಿ ಮಹಿಳೆಯರ ಹಕ್ಕುಗಳ ಉಲ್ಲಂಘನೆಯನ್ನು ಆರೋಪಿಸಿ ಒಂದು ಬ್ಯಾಚ್ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸಿಜೆ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಆರ್ ಮಹದೇವನ್ ಮತ್ತು ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ.

ಮುಸ್ಲಿಂ ಸಮಾಜದ ಒಂದು ದೊಡ್ಡ ವರ್ಗವು ಸಮಾನ ಉತ್ತರಾಧಿಕಾರದ ಹಕ್ಕುಗಳಿಂದ ವಂಚಿತವಾಗಿದೆ ಎಂಬುದು ನಿಜ. ಆದರೆ, ಶರಿಯಾ ಕಾನೂನಿನ ಉತ್ತರಾಧಿಕಾರದ ನಿಬಂಧನೆಯನ್ನು ತೆಗೆದುಹಾಕಿದರೆ, ನಂತರ ಯಾವ ಕಾನೂನು ಉತ್ತರಾಧಿಕಾರವನ್ನು ನಿಯಂತ್ರಿಸಬೇಕು..? ಏಕರೂಪ ನಾಗರಿಕ ಸಂಹಿತೆ ಸರಿಯಾದ ಉತ್ತರವಾಗಿದೆ ಎಂದರು.

ಅರ್ಜಿದಾರರ ಪರ ವಾದಿಸಿದ ವಕೀಲ ಪ್ರಶಾಂತ್ ಭೂಷಣ್, ಧಾರ್ಮಿಕ ಸ್ವಾತಂತ್ರ‍್ಯವನ್ನು ಖಾತರಿಪಡಿಸುವ ಸಂವಿಧಾನದ 25ನೇ ವಿಧಿಯಡಿ ಉತ್ತರಾಧಿಕಾರಕ್ಕೆ ಸಂಬಂಧಿಸಿದ ವೈಯಕ್ತಿಕ ಕಾನೂನನ್ನು ರಕ್ಷಿಸಲಾಗುವುದಿಲ್ಲ. ಮುಸ್ಲಿಂ ಮಹಿಳೆಯರಿಗೆ ಮುಸ್ಲಿಂ ಪುರುಷರಿಗೆ ಇರುವಂತೆ ಸಮಾನವಾದ ಹಕ್ಕುಗಳು ಇರುವುದಿಲ್ಲ ಎಂದು ಹೇಳಿದರು.

ವಾದಗಳನ್ನು ಆಲಿಸಿದ ನ್ಯಾಯಾಲಯವು, ಶರಿಯತ್ ಉತ್ತರಾಧಿಕಾರದ ನಿಬಂಧನೆಗಳನ್ನು ರದ್ದುಗೊಳಿಸಿದರೆ ಪರಿಹಾರಗಳೇನು..? ಎಂಬ ಸಲಹೆಗಳನ್ನು ಸೇರಿಸಲು ಅರ್ಜಿಯನ್ನು ತಿದ್ದುಪಡಿ ಮಾಡಲು ಸೂಚಿಸಿತು. ಭೂಷಣ್ ಅವರು ಅರ್ಜಿಯನ್ನು ತಿದ್ದುಪಡಿ ಮಾಡಲು ಒಪ್ಪಿದ ನಂತರ ಪೀಠವು ಮುಂದಿನ ವಿಚಾರಣೆಯನ್ನು ಮತ್ತೊಂದು ದಿನಾಂಕಕ್ಕೆ ಮುಂದೂಡಿತು.

 

Related Posts

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

  E20 ಜನತಾ ಪಕ್ಷವು ಶೇ.20 ಎಥೆನಾಲ್ ಮಿಶ್ರಿತ ಪೆಟ್ರೋಲ್ ಬದಲಿಗೆ ಶೇ. 100 ಶುದ್ಧ ಪೆಟ್ರೋಲ್ ನೀಡಲು ಆಗ್ರಹಿಸುತ್ತಿದೆ. E20 ಇಂಧನದಿಂದ ವಾಹನಗಳ ಮೈಲೇಜ್ ಕಡಿಮೆಯಾಗಿ, ಎಂಜಿನ್ ಸಮಸ್ಯೆಗಳು ಹೆಚ್ಚುತ್ತಿವೆ ಎಂಬುದು ಅವರ ಆರೋಪ. ಸಚಿವ ನಿತಿನ್ ಗಡ್ಕರಿ ರಾಜೀನಾಮೆಗೆ…

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿ ಮುಖ್ಯ ಎಂದ ಅಮಿತ್ ಶಾ, ಭವಿಷ್ಯದಲ್ಲಿ ಪರೀಕ್ಷಾ ಅಕ್ರಮ ತಡೆಯಲು ಕಠಿಣ ಸುಧಾರಣೆ ತರುವ ಭರವಸೆ ನೀಡಿದ್ದಾರೆ. ಸರ್ಕಾರದ ಈ…

You Missed

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !