ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ ಕೋರ್ಟ್ ’ ಅಸ್ತು

ನವದೆಹಲಿ: ದೇಶಾದ್ಯಂತ `ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ದೇಶದ ಎಲ್ಲಾ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ಏಕೈಕ ಮಾರ್ಗವೆಂದರೆ ದೇಶಾದ್ಯಂತ ಯುಸಿಸಿ ಜಾರಿಗೆ ತರುವುದು ಎಂದಿದೆ.

ಮುಸ್ಲಿಂ ವೈಯಕ್ತಿಕ ಕಾನೂನು (ಶರಿಯತ್) ಅಡಿಯಲ್ಲಿ ಮಹಿಳೆಯರ ಹಕ್ಕುಗಳ ಉಲ್ಲಂಘನೆಯನ್ನು ಆರೋಪಿಸಿ ಒಂದು ಬ್ಯಾಚ್ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸಿಜೆ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಆರ್ ಮಹದೇವನ್ ಮತ್ತು ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ.

ಮುಸ್ಲಿಂ ಸಮಾಜದ ಒಂದು ದೊಡ್ಡ ವರ್ಗವು ಸಮಾನ ಉತ್ತರಾಧಿಕಾರದ ಹಕ್ಕುಗಳಿಂದ ವಂಚಿತವಾಗಿದೆ ಎಂಬುದು ನಿಜ. ಆದರೆ, ಶರಿಯಾ ಕಾನೂನಿನ ಉತ್ತರಾಧಿಕಾರದ ನಿಬಂಧನೆಯನ್ನು ತೆಗೆದುಹಾಕಿದರೆ, ನಂತರ ಯಾವ ಕಾನೂನು ಉತ್ತರಾಧಿಕಾರವನ್ನು ನಿಯಂತ್ರಿಸಬೇಕು..? ಏಕರೂಪ ನಾಗರಿಕ ಸಂಹಿತೆ ಸರಿಯಾದ ಉತ್ತರವಾಗಿದೆ ಎಂದರು.

ಅರ್ಜಿದಾರರ ಪರ ವಾದಿಸಿದ ವಕೀಲ ಪ್ರಶಾಂತ್ ಭೂಷಣ್, ಧಾರ್ಮಿಕ ಸ್ವಾತಂತ್ರ‍್ಯವನ್ನು ಖಾತರಿಪಡಿಸುವ ಸಂವಿಧಾನದ 25ನೇ ವಿಧಿಯಡಿ ಉತ್ತರಾಧಿಕಾರಕ್ಕೆ ಸಂಬಂಧಿಸಿದ ವೈಯಕ್ತಿಕ ಕಾನೂನನ್ನು ರಕ್ಷಿಸಲಾಗುವುದಿಲ್ಲ. ಮುಸ್ಲಿಂ ಮಹಿಳೆಯರಿಗೆ ಮುಸ್ಲಿಂ ಪುರುಷರಿಗೆ ಇರುವಂತೆ ಸಮಾನವಾದ ಹಕ್ಕುಗಳು ಇರುವುದಿಲ್ಲ ಎಂದು ಹೇಳಿದರು.

ವಾದಗಳನ್ನು ಆಲಿಸಿದ ನ್ಯಾಯಾಲಯವು, ಶರಿಯತ್ ಉತ್ತರಾಧಿಕಾರದ ನಿಬಂಧನೆಗಳನ್ನು ರದ್ದುಗೊಳಿಸಿದರೆ ಪರಿಹಾರಗಳೇನು..? ಎಂಬ ಸಲಹೆಗಳನ್ನು ಸೇರಿಸಲು ಅರ್ಜಿಯನ್ನು ತಿದ್ದುಪಡಿ ಮಾಡಲು ಸೂಚಿಸಿತು. ಭೂಷಣ್ ಅವರು ಅರ್ಜಿಯನ್ನು ತಿದ್ದುಪಡಿ ಮಾಡಲು ಒಪ್ಪಿದ ನಂತರ ಪೀಠವು ಮುಂದಿನ ವಿಚಾರಣೆಯನ್ನು ಮತ್ತೊಂದು ದಿನಾಂಕಕ್ಕೆ ಮುಂದೂಡಿತು.

 

Related Posts

ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ.

ಟಿ. ನರಸೀಪುರದಲ್ಲಿರುವ ಕೆಎಸ್ಐಸಿ ರೇಷ್ಮೆ ನೂಲು ಘಟಕದ ಜಾಗದಲ್ಲಿ ಸ್ಟೇಡಿಯಂ ನಿರ್ಮಿಸುವ ಸರ್ಕಾರದ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷದ ನಾಯಕರು ಮತ್ತು ನೌಕರರ ಹೋರಾಟದ ಫಲವಾಗಿ, ಸರ್ಕಾರ ಈ ಯೋಜನೆಯನ್ನು ಕೈಬಿಟ್ಟು, ಲಾಭದಾಯಕ ಘಟಕವನ್ನು ಉಳಿಸಿ ಅಭಿವೃದ್ಧಿಪಡಿಸುವುದಾಗಿ ಭರವಸೆ…

ಹಾರ್ಮುಜ್ ಜಲಸಂಧಿಯಲ್ಲಿ ನೇವಲ್‌ ಮೈನ್ಸ್‌– ಇರಾನಿನ 16 ಹಡಗುಗಳನ್ನು ನಾಶ ಮಾಡಿರುವುದಾಗಿ ಅಮೆರಿಕದ ತಿಳಿಸಿದೆ.

ವಾಷಿಂಗ್ಟನ್‌: ತನ್ನ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಇರಾನ್‌ ಈಗ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳು ಸಂಚರಿಸದಂತೆ ಸಮುದ್ರದ ಒಳಗಡೆ ಸ್ಫೋಟಕವನ್ನು ಇರಿಸಿದ ವಿಚಾರ ಬೆಳಕಿಗೆ ಬಂದಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರತಿಕ್ರಿಯಿಸಿ, ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಯಾವುದೇ ನೇವಲ್‌ ಮೈನ್ಸ್‌…

You Missed

ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ ಕೋರ್ಟ್ ’ ಅಸ್ತು

ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ ಕೋರ್ಟ್ ’ ಅಸ್ತು

ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ.

ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ.

ಹಾರ್ಮುಜ್ ಜಲಸಂಧಿಯಲ್ಲಿ ನೇವಲ್‌ ಮೈನ್ಸ್‌– ಇರಾನಿನ 16 ಹಡಗುಗಳನ್ನು ನಾಶ ಮಾಡಿರುವುದಾಗಿ ಅಮೆರಿಕದ ತಿಳಿಸಿದೆ.

ಹಾರ್ಮುಜ್ ಜಲಸಂಧಿಯಲ್ಲಿ ನೇವಲ್‌ ಮೈನ್ಸ್‌–  ಇರಾನಿನ 16 ಹಡಗುಗಳನ್ನು ನಾಶ ಮಾಡಿರುವುದಾಗಿ ಅಮೆರಿಕದ ತಿಳಿಸಿದೆ.

ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್!

ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್!

ಬಾಡಿಗೆದಾರರಿಗೆ ಗುಡ್‌ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಬಾಡಿಗೆದಾರರಿಂದ ವಿಪರೀತವಾಗಿ ಹಣ ತೆಗೆದುಕೊಳ್ಳುವುದಕ್ಕೆ ಬ್ರೇಕ್.

ಬಾಡಿಗೆದಾರರಿಗೆ ಗುಡ್‌ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಬಾಡಿಗೆದಾರರಿಂದ ವಿಪರೀತವಾಗಿ ಹಣ ತೆಗೆದುಕೊಳ್ಳುವುದಕ್ಕೆ ಬ್ರೇಕ್.

ಇರಾನ್-ಇಸ್ರೇಲ್ ಯುದ್ಧದ ಬಿಸಿ ಇದೀಗ ನೇರವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಜನಜೀವನದ ಮೇಲೆ ಬೀರುತ್ತಿದೆ!

ಇರಾನ್-ಇಸ್ರೇಲ್ ಯುದ್ಧದ ಬಿಸಿ ಇದೀಗ ನೇರವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಜನಜೀವನದ ಮೇಲೆ ಬೀರುತ್ತಿದೆ!