ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್​ ಸಿಬ್ಬಂದಿ!

 

ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಕರ್ನಾಟಕದ ಮೇಲೂ ಬೀರಿದ್ದು, LPG ಸಿಲಿಂಡರ್ ಪೂರೈಕೆ ವ್ಯತ್ಯಯ ಉಂಟಾಗಿದೆ. ಇತ್ತ ಕಲಬುರಗಿಯಲ್ಲೂ ಸಿಲಿಂಡರ್ ಕೊರತೆಯಾಗಿದ್ದು ಜನ, ಹೋಟೆಲ್ ಉದ್ಯಮದಾರರು ಪರದಾಡುತ್ತಿದ್ದಾರೆ. ಹೀಗಾಗಿ ಎಲ್ಲರೂ ಸೌದೆ ಒಲೆಯತ್ತ ಮುಖ ಮಾಡಿದ್ದು, ಇಂದಿರಾ ಕ್ಯಾಂಟಿನ್​​​ಗಳಲ್ಲಿ ಸೌದೆ ಒಲೆ ಮೇಲೆ ಅಡುಗೆ ಮಾಡಲಾಗಿದೆ.

ಕಲಬುರಗಿ, ಇಸ್ರೇಲ್ ಮತ್ತು ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ ನಮ್ಮ ರಾಜ್ಯಕ್ಕೂ ಅದರ ಪರಿಣಾಮ ನೇರವಾಗಿ ತಟ್ಟಿದೆ. ಸಿಲಿಂಡರ್​ಗಳ (LPG cylinder) ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದೆ. ಇತ್ತ ಕಲಬುರಗಿಯಲ್ಲಿ ಇಂದಿರಾ ಕ್ಯಾಂಟಿನ್ ಅಡುಗೆ ಮಾಡುವುದಕ್ಕೆ ಸೌದೆ ಒಲೆಯೇ ಗತಿ ಎನ್ನುವಂತಾಗಿದೆ.

ಕಳೆದ ಹತ್ತು ದಿನಗಳಿಂದ ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಬಿಸಿ ಭಾರತಕ್ಕೂ ತಟ್ಟಿದೆ. ಅದು ಎಲ್​ಲಿಜಿ ಸಿಲಿಂಡರ್​ಗಳ ಮೇಲೆ ನೇರ ಪರಿಣಾಮ ಬೀರಿದ. ಇರಾನ್ – ಇಸ್ರೇಲ್ ಯುದ್ದದಿಂದ ಕಲಬುರಗಿಯಲ್ಲಿಯೂ ನಿನ್ನೆಯಿಂದಲೇ ಕಮರ್ಷಿಯಲ್ ಸಿಲಿಂಡರ್ ಕೊರತೆಯಾಗಿದ್ದು ಜನ, ಹೋಟೆಲ್ ಉದ್ಯಮದಾರರು ಪರದಾಡುತ್ತಿದ್ದಾರೆ.

ಇಂದಿರಾ ಕ್ಯಾಂಟಿನ್​​ಗೂ ಸಿಲಿಂಡರ್ ಸಪ್ಲೈ ಬಂದ್ ಆದ ಹಿನ್ನಲೆ ಸಿಬ್ಬಂದಿ ಸೌದೆ ಒಲೆ ಮೊರೆ ಹೋಗಿದ್ದಾರೆ. ಕಲಬುರಗಿ ನಗರದ ಎಂಟು ಇಂದಿರಾ ಕ್ಯಾಂಟಿನ್​​ಗಳಿಗೂ ಸೌದೆ ಒಲೆ ಮೇಲೆಯೇ ಅಡುಗೆ ಮಾಡಲಾಗಿದೆ. ಏಕೆಂದರೆ ನಿನ್ನೆಯವರೆಗೂ ತಮ್ಮ ಬಳಿ ಇದ್ದ ಸಿಲಿಂಡರ್​​ಗಳ ಮೂಲಕ ಸಿಬ್ಬಂದಿ ಅಡುಗೆ ಮಾಡಿದ್ದಾರೆ. ಆದರೆ ಸಿಲಿಂಡರ್ ಸಿಗದ ಕಾರಣ, ಬೆಳಿಗ್ಗೆ ತಿಂಡಿ ಹಾಗೂ ಮಧ್ಯಾಹ್ನ ಮತ್ತು ರಾತ್ರಿ ಊಟವನ್ನ ಸೌದೆ ಒಲೆಯಲ್ಲಿಯೇ ಮಾಡಿದ್ದಾರೆ.

ಅಷ್ಟೆ ಅಲ್ಲದೇ ಚಪಾತಿಯನ್ನ ಹೊರಗಡೆಯಿಂದ ಖರೀದಿ ಮಾಡಿ ಜನರಿಗೆ ನೀಡಿದ್ದಾರೆ. ಇನ್ನು ಆಸ್ಪತ್ರೆಗಳ ಪಕ್ಕ ಇರುವ ಇಂದಿರಾ ಕ್ಯಾಂಟಿನ್​ನಲ್ಲಿ ಇಡ್ಲಿ, ಸಾಂಬರ್​ಗೆ ಹೆಚ್ಚಿನ ಬೇಡಿಕೆಯಿದೆ. ಆದರೆ ಸಿಲಿಂಡರ್ ಇಲ್ಲದ ಪರಿಣಾಮ ಕೇವಲ ಉಪ್ಪಿಟ್ಟು, ಅವಲಕ್ಕಿ ಮಾಡಲಾಗುತ್ತಿದೆಯಂತೆ. ಸೌದೆ ಒಲೆ ಮೇಲೆ ಅಡುಗೆ ಮಾಡುವುದಕ್ಕೆ ಕೆಲಸಗಾರರು ಮುಂದೆ ಬರ್ತಿಲ್ಲ, ಆದರೆ ಬಡವರು ಉಪವಾಸ ಇರಬಾರದು ಎನ್ನುವ ಕಾರಣಕ್ಕೆ ನಾವೇ ಅಡುಗೆ ಮಾಡುತ್ತಿದ್ದೇವೆ ಎಂದು ಸಿಬ್ಬಂದಿ ಬಸವರಾಜ್​​ ಹೇಳುತ್ತಾರೆ.

ರಾಜ್ಯದಲ್ಲಿ ಯಾವಾಗ ಸಿಲಿಂಡರ್​​ಗಳ ಸಮಸ್ಯೆ ಉದ್ಭವವಾಯ್ತೋ, ಅಲ್ಲಿಗೆ ಹೋಟೆಲ್, ಢಾಬಾ ಹಾಗೂ ಮದುವೆ ಕಾರ್ಯಕ್ರಮಗಳಿಗೆ ಕೇಟರಿಂಗ್​​ನವರು ಸೌದೆ ಒಲೆಯತ್ತ ಮುಖ ಮಾಡಿದ್ದಾರೆ. ಅದಕ್ಕಾಗಿ ನಗರದಲ್ಲಿ ಕಟ್ಟಿಗೆ ಅಡ್ಡೆಗಳಲ್ಲಿ ಸೌದೆ ಖರೀದಿ ಮಾಡುವುದಕ್ಕೆ ಮುಗಿಬಿದ್ದಿದ್ದಾರೆ. ವಿವಿಧ ಕಾರ್ಯಕ್ರಮಗಳಿಗೆ ಅಡುಗೆ ಗುತ್ತಿಗೆ ಹಿಡಿದಿರುವ ಕೇಟರಿಂಗ್​​ನವರಿಗೆ ಗ್ಯಾಸ್ ಟ್ರಬಲ್ ಎದುರಾಗಿದೆ. ಹೀಗಾಗಿ ಸೌದೆ ಒಲೆಯಲ್ಲೇ ಅಡುಗೆ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ.

ಒಟ್ಟಿನಲ್ಲಿ ಸದ್ಯ ಕಲಬುರಗಿಯಲ್ಲಿಯೂ ಸಿಲಿಂಡರ್ ಹಾಹಾಕಾರ ಶುರುವಾಗಿದೆ. ಮುಂದೆ ಅದ್ಯಾವ ಮಟ್ಟಕ್ಕೆ ಹೋಗುತ್ತೋ ಕಾದುನೋಡಬೇಕು. ಏಕೆಂದರೆ ಸಿಲಿಂಡರ್​​ ಸಿಗದಿದ್ದರೆ ಮತ್ತಷ್ಟು ಸಂಕಷ್ಟ ಎದುರಾಗೋದು ಕಟ್ಟಿಟ್ಟ ಬುತ್ತಿ.

 

Related Posts

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ