ಬೆಂಗಳೂರಿನಲ್ಲಿ ಮಂತ್ರಿ ಡೆವಲಪರ್ಸ್​ ಮೇಲೆ ಇಡಿ ದಾಳಿ!

 

ಮಂತ್ರಿ ಡೆವಲಪರ್ಸ್ ಕಚೇರಿ ಮತ್ತು ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳ ಮೇಲೆ ED ದಾಳಿ. ಅಕ್ರಮ ಹಣ ವರ್ಗಾವಣೆ ಆರೋಪದಡಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಹಿಂದೆ 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿತ್ತು. ಗ್ರಾಹಕರ ಹಣವನ್ನು ವಿದೇಶದಲ್ಲಿ ಹೂಡಿಕೆ ಮಾಡಿದ ಆರೋಪವನ್ನೂ ಎದುರಿಸುತ್ತಿರುವ ಸಂಸ್ಥೆಯ ಹಣಕಾಸು ವ್ಯವಹಾರಗಳನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಬೆಂಗಳೂರು ನಗರದ ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆಯಾದ ಮಂತ್ರಿ ಡೆವೆಲಪರ್ಸ್​ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆ ED ಅಧಿಕಾರಿಗಳು ಸಂಸ್ಥೆಯ ಕಚೇರಿ ಹಾಗೂ ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳಲ್ಲಿ ಶೋಧ ನಡೆಸಿದ್ದಾರೆ.

ದೆಹಲಿಯಿಂದ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ
1999ರಲ್ಲಿ ಸ್ಥಾಪನೆಯಾದ ಮಂತ್ರಿ ಡೆವಲಪರ್ಸ್ ಸಂಸ್ಥೆ ಬೆಂಗಳೂರು ಕೇಂದ್ರ ಕಚೇರಿಯೊಂದಿಗೆ ಚೆನ್ನೈ, ಹೈದರಾಬಾದ್ ಮತ್ತು ಪುಣೆ ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ವಸತಿ, ವಾಣಿಜ್ಯ, ರಿಟೇಲ್ ಹಾಗೂ ಇತರೆ ಕ್ಷೇತ್ರಗಳಲ್ಲಿ ಹಲವು ಯೋಜನೆಗಳನ್ನು ಸಂಸ್ಥೆ ಕೈಗೊಂಡಿದೆ. ಇದೀಗ ಬೆಂಗಳೂರಿನ ವಿಠ್ಠಲ ಮಲ್ಯ ರಸ್ತೆಯಲ್ಲಿರುವ ಕಚೇರಿ ಹಾಗೂ ಸಂಸ್ಥಾಪಕರ ಮನೆ ಮೇಲೂ ದಾಳಿ ನಡೆಸಿದೆ.

ಬೆಳಗ್ಗೆ ದೆಹಲಿ ಕಚೇರಿಯಿಂದ ಬಂದ ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳು ಆರು ವಾಹನಗಳಲ್ಲಿ ಆಗಮಿಸಿ ಕಚೇರಿ ಹಾಗೂ ಸಂಬಂಧಿತ ಸ್ಥಳಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಇಡಿ ತಂಡ, ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದೆ.

ಇದೇ ರೀತಿ ಹಣಕಾಸಿನ ಪ್ರಕರಣದಲ್ಲಿ ಇಡಿಯು ಈಗಾಗಲೇ 2022ರಲ್ಲಿ ದಾಳಿ ನಡೆಸಿದ್ದು, 2023ರಲ್ಲಿ ಸುಮಾರು 300 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು. ಅಲ್ಲದೇ ಗ್ರಾಹಕರಿಂದ ಅಪಾರ್ಟ್ಮೆಂಟ್‌ಗಾಗಿ ಹಣ ಪಡೆದು ಅದನ್ನು ವಿದೇಶಗಳಲ್ಲಿ ಹೂಡಿಕೆ ಮಾಡಿರುವ ಆರೋಪವೂ ಕೇಳಿಬಂದಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ದಾಳಿ ನಡೆಸಿ ಅಧಿಕಾರಿಗಳು ದಾಖಲೆಗಳನ್ನು ಪರಿ

Related Posts

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್ ನೀಡಿದ ಸರ್ಕಾರ!

  2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಇದೇ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಸಜ್ಜಾಗುತ್ತಿದ್ದಾರೆ. ಇನ್ನು ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆಎಸ್​​ಆರ್​​ಟಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪರೀಕ್ಷಾ…

ಇದೆಂಥಾ ಕಾಲ ಬಂತಪ್ಪಾ… ಹೋಟೆಲ್​ಗಳ ಬಿಲ್​ನಲ್ಲಿ ಗ್ಯಾಸ್ ಶುಲ್ಕ!

  ಬೆಂಗಳೂರು ಮತ್ತು ಚೆನ್ನೈ ಹೋಟೆಲ್‌ಗಳಲ್ಲಿ ಈಗ ತಿಂಡಿ ಬಿಲ್‌ನೊಂದಿಗೆ ಹೊಸ ‘ಗ್ಯಾಸ್ ಶುಲ್ಕ’ ಸೇರಿಸಲಾಗುತ್ತಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆ ಕೊರತೆ ಮತ್ತು ಹೆಚ್ಚಿದ ಬೇಡಿಕೆಯಿಂದಾಗಿ ಹೋಟೆಲ್ ಮಾಲೀಕರು ಈ ಹೊರೆಯನ್ನು ಗ್ರಾಹಕರ ಮೇಲೆ ಹಾಕುತ್ತಿದ್ದಾರೆ.…

You Missed

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್ ನೀಡಿದ ಸರ್ಕಾರ!

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್ ನೀಡಿದ ಸರ್ಕಾರ!

ನಾವು ಕೇಳಿದರೂ ಇರಾನ್ ಒಪ್ಪಂದಕ್ಕೆ ಸಿದ್ಧವಿಲ್ಲ :ಯುದ್ಧದ ಬಗ್ಗೆ ಟ್ರಂಪ್ ಪ್ರತಿಕ್ರಿಯೆ!

ನಾವು ಕೇಳಿದರೂ ಇರಾನ್ ಒಪ್ಪಂದಕ್ಕೆ ಸಿದ್ಧವಿಲ್ಲ :ಯುದ್ಧದ ಬಗ್ಗೆ ಟ್ರಂಪ್ ಪ್ರತಿಕ್ರಿಯೆ!

ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ!

ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ!

ಬೆಂಗಳೂರಿನಲ್ಲಿ ಮಂತ್ರಿ ಡೆವಲಪರ್ಸ್​ ಮೇಲೆ ಇಡಿ ದಾಳಿ!

ಬೆಂಗಳೂರಿನಲ್ಲಿ ಮಂತ್ರಿ ಡೆವಲಪರ್ಸ್​ ಮೇಲೆ ಇಡಿ ದಾಳಿ!

ಇದೆಂಥಾ ಕಾಲ ಬಂತಪ್ಪಾ… ಹೋಟೆಲ್​ಗಳ ಬಿಲ್​ನಲ್ಲಿ ಗ್ಯಾಸ್ ಶುಲ್ಕ!

ಇದೆಂಥಾ ಕಾಲ ಬಂತಪ್ಪಾ… ಹೋಟೆಲ್​ಗಳ ಬಿಲ್​ನಲ್ಲಿ ಗ್ಯಾಸ್ ಶುಲ್ಕ!

ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್​ ಸಿಬ್ಬಂದಿ!

ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್​ ಸಿಬ್ಬಂದಿ!