ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ!

 

ಒಡಿಶಾದ ಕಟಕ್​ನ ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಐಸಿಯುವೊಂದರಲ್ಲಿ ಅಗ್ನಿ ಅವಘಡ ಘಟನೆ ಸಂಭವಿಸಿದೆ. ಇದರಲ್ಲಿ 10 ರೋಗಿಗಳು ಬಲಿಯಾಗಿದ್ದಾರೆ. ಇನ್ನೂ ಹಲವು ರೋಗಿಗಳಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ರಕ್ಷಿಸಲು ಯತ್ನಿಸಿದ ಕೆಲ ಆಸ್ಪತ್ರೆ ಸಿಬ್ಬಂದಿಗೂ ಗಾಯಗಳಾಗಿವೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಮೃತರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಒಡಿಶಾದ ಕಟಕ್ ನಗರದಲ್ಲಿರುವ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡವೊಂದು ಸಂಭವಿಸಿದ್ದು, 10 ರೋಗಿಗಳು ಬಲಿಯಾಗಿದ್ದಾರೆ. 11ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿರುವುದು ವರದಿಯಾಗಿದೆ. ಮಧ್ಯರಾತ್ರಿಯ ನಂತರ 2:30ರಿಂದ 3 ಗಂಟೆಯ ಸಮಯದಲ್ಲಿ ಈ ಅಗ್ನಿ ಅಪಘಾತವಾಗಿರುವುದು ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿರಬಹುದು ಎಂದು ಸದ್ಯ ಶಂಕಿಸಲಾಗಿದೆ.

ಆಸ್ಪತ್ರೆಯ ಟ್ರಾಮಾ ಕೇರ್ ವಿಭಾಗದ ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಗಂಭೀರವಾಗಿ ಗಾಯಗೊಂಡಿರುವ ರೋಗಿಗಳು ಈ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಘಟನೆಯಲ್ಲಿ ಐಸಿಯುನಲ್ಲಿದ್ದ 10 ರೋಗಿಗಳು ಬಲಿಯಾಗಿದ್ದಾರೆ. ಅವರನ್ನು ರಕ್ಷಿಸಲು ಯತ್ನಿಸಿದ ಸಿಬ್ಬಂದಿ ಪೈಕಿ 11 ಮಂದಿಗೆ ಗಾಯಗಳಾಗಿವೆ.ಬೆಂಕಿ ಅವಘಡ ಸಂಭವಿಸಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಕೂಡ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಐಸಿಯುನಲ್ಲಿದ್ದ ಇತರ ರೋಗಿಗಳನ್ನು ಆಸ್ಪತ್ರೆಯ ಬೇರೆ ವಾರ್ಡ್​ಗಳಿಗೆ ಶಿಫ್ಟ್ ಮಾಡಲಾಗಿದೆ. ಒಟ್ಟು 23 ರೋಗಿಗಳನ್ನು ಬೇರೆಡೆ ವರ್ಗಾಯಿಸಲಾಗಿದೆ. ಹೀಗೆ ಬೇರೆಡೆ ಸಾಗಿಸುವ ಹಂತದಲ್ಲಿ 7 ಮಂದಿ ರೋಗಿಗಳು ಅಸುನೀಗಿದ್ದಾರೆ. ಮೂರು ರೋಗಿಗಳು ನಂತರ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ಘೋಷಣೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಆರೋಗ್ಯ ಸಚಿವ ಮುಕೇಶ್ ಮಹಾಲಿಂಗ್ ಅವರು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಮೃತಪಟ್ಟಿರುವ ರೋಗಿಗಳ ಸಂಬಂಧಿಕರಿಗೆ 25 ಲಕ್ಷ ರೂ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ. ಹಾಗೆಯೇ, ಗಾಯಗೊಂಡಿರುವ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ಅಗತ್ಯ ವಸ್ತುಗಳು ಹಾಗೂ ಇಂಧನ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಂದು ಆರ್ಥಿಕ ಹೊರೆ ನೀಡಿದೆ. ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (PUCC) ಪಡೆಯಲು ಪಾವತಿಸಬೇಕಾದ ಶುಲ್ಕವನ್ನು ಸಾರಿಗೆ ಇಲಾಖೆಯು ಪರಿಷ್ಕರಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!