ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ!

 

ಒಡಿಶಾದ ಕಟಕ್​ನ ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಐಸಿಯುವೊಂದರಲ್ಲಿ ಅಗ್ನಿ ಅವಘಡ ಘಟನೆ ಸಂಭವಿಸಿದೆ. ಇದರಲ್ಲಿ 10 ರೋಗಿಗಳು ಬಲಿಯಾಗಿದ್ದಾರೆ. ಇನ್ನೂ ಹಲವು ರೋಗಿಗಳಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ರಕ್ಷಿಸಲು ಯತ್ನಿಸಿದ ಕೆಲ ಆಸ್ಪತ್ರೆ ಸಿಬ್ಬಂದಿಗೂ ಗಾಯಗಳಾಗಿವೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಮೃತರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಒಡಿಶಾದ ಕಟಕ್ ನಗರದಲ್ಲಿರುವ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡವೊಂದು ಸಂಭವಿಸಿದ್ದು, 10 ರೋಗಿಗಳು ಬಲಿಯಾಗಿದ್ದಾರೆ. 11ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿರುವುದು ವರದಿಯಾಗಿದೆ. ಮಧ್ಯರಾತ್ರಿಯ ನಂತರ 2:30ರಿಂದ 3 ಗಂಟೆಯ ಸಮಯದಲ್ಲಿ ಈ ಅಗ್ನಿ ಅಪಘಾತವಾಗಿರುವುದು ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿರಬಹುದು ಎಂದು ಸದ್ಯ ಶಂಕಿಸಲಾಗಿದೆ.

ಆಸ್ಪತ್ರೆಯ ಟ್ರಾಮಾ ಕೇರ್ ವಿಭಾಗದ ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಗಂಭೀರವಾಗಿ ಗಾಯಗೊಂಡಿರುವ ರೋಗಿಗಳು ಈ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಘಟನೆಯಲ್ಲಿ ಐಸಿಯುನಲ್ಲಿದ್ದ 10 ರೋಗಿಗಳು ಬಲಿಯಾಗಿದ್ದಾರೆ. ಅವರನ್ನು ರಕ್ಷಿಸಲು ಯತ್ನಿಸಿದ ಸಿಬ್ಬಂದಿ ಪೈಕಿ 11 ಮಂದಿಗೆ ಗಾಯಗಳಾಗಿವೆ.ಬೆಂಕಿ ಅವಘಡ ಸಂಭವಿಸಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಕೂಡ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಐಸಿಯುನಲ್ಲಿದ್ದ ಇತರ ರೋಗಿಗಳನ್ನು ಆಸ್ಪತ್ರೆಯ ಬೇರೆ ವಾರ್ಡ್​ಗಳಿಗೆ ಶಿಫ್ಟ್ ಮಾಡಲಾಗಿದೆ. ಒಟ್ಟು 23 ರೋಗಿಗಳನ್ನು ಬೇರೆಡೆ ವರ್ಗಾಯಿಸಲಾಗಿದೆ. ಹೀಗೆ ಬೇರೆಡೆ ಸಾಗಿಸುವ ಹಂತದಲ್ಲಿ 7 ಮಂದಿ ರೋಗಿಗಳು ಅಸುನೀಗಿದ್ದಾರೆ. ಮೂರು ರೋಗಿಗಳು ನಂತರ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ಘೋಷಣೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಆರೋಗ್ಯ ಸಚಿವ ಮುಕೇಶ್ ಮಹಾಲಿಂಗ್ ಅವರು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಮೃತಪಟ್ಟಿರುವ ರೋಗಿಗಳ ಸಂಬಂಧಿಕರಿಗೆ 25 ಲಕ್ಷ ರೂ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ. ಹಾಗೆಯೇ, ಗಾಯಗೊಂಡಿರುವ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!