ನಾವು ಕೇಳಿದರೂ ಇರಾನ್ ಒಪ್ಪಂದಕ್ಕೆ ಸಿದ್ಧವಿಲ್ಲ :ಯುದ್ಧದ ಬಗ್ಗೆ ಟ್ರಂಪ್ ಪ್ರತಿಕ್ರಿಯೆ!

 

ಇರಾನ್ ಹಾಗೂ ಇಸ್ರೇಲ್-ಅಮೆರಿಕದ ನಡುವಿನ ಯುದ್ಧ ಕೇವಲ ಆ 3 ದೇಶಗಳ ನಡುವಿನ ಸಂಘರ್ಷವಾಗಿ ಉಳಿದಿಲ್ಲ. ಜಗತ್ತಿನಾದ್ಯಂತ ಹಲವು ದೇಶಗಳು ಈ ಯುದ್ಧದ ಪರಿಣಾಮವನ್ನು ಎದುರಿಸುತ್ತಿವೆ. ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ನಂತರವಂತೂ ಅನೇಕ ದೇಶಗಳಲ್ಲಿ ಇಂಧನ, ಗ್ಯಾಸ್ ಮುಂತಾದ ಮೂಲಭೂತ ಅಗತ್ಯ ವಸ್ತುಗಳ ಬಿಕ್ಕಟ್ಟು ಎದುರಾಗಿದೆ. ಈ ಯುದ್ಧ ಯಾವಾಗ ನಿಲ್ಲುತ್ತದೆ ಎಂದು ಜನರು ಕಾಯುತ್ತಿದ್ದಾರೆ.

ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದು, ಯುದ್ಧ ನಿಲ್ಲಿಸಲು ಇರಾನ್ ನಮ್ಮೊಡನೆ ಒಪ್ಪಂದಕ್ಕೆ ಒಪ್ಪುತ್ತಿಲ್ಲ ಎಂದಿದ್ದಾರೆಇರಾನ್ ಜೊತೆಗಿನ ಸಂಘರ್ಷದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇರಾನ್ ಮೇಲೆ ದಾಳಿ ನಡೆಸಲು ಇನ್ನೇನೂ ಉಳಿದಿಲ್ಲ, ಎಲ್ಲವನ್ನೂ ಧ್ವಂಸಗೊಳಿಸಲಾಗಿದೆ ಎಂದಿದ್ದ ಟ್ರಂಪ್ ಇರಾನ್ ಕದನವಿರಾಮಕ್ಕೆ ರೆಡಿ ಇದ್ದರೂ ನಾವು ಸಿದ್ಧರಿಲ್ಲ ಎಂದಿದ್ದರು. ಆದರೆ, ನಿನ್ನೆ ಬೇರೆ ರೀತಿಯದ್ದೇ ಹೇಳಿಕೆ ನೀಡಿರುವ ಅವರು ನಾವು ಇರಾನ್ ಜೊತೆ ಯುದ್ಧ ನಿಲ್ಲಿಸುವ ಬಗ್ಗೆ ಮಾತುಕತೆ ನಡೆಸಿದ್ದರೂ ಇರಾನ್ ಒಪ್ಪಂದಕ್ಕೆ ಸಿದ್ಧವಿಲ್ಲ ಎಂದು ಹೇಳಿದ್ದಾರೆ.

ಇರಾನ್- ಇಸ್ರೇಲ್, ಅಮೆರಿಕದ ನಡುವಿನ ಯುದ್ಧ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಟ್ರಂಪ್, ಅಮೆರಿಕ ಇರಾನ್ ಜೊತೆ ಚರ್ಚೆ ನಡೆಸುತ್ತಿದೆ. ಆದರೆ ಯುದ್ಧವನ್ನು ಕೊನೆಗೊಳಿಸಲು ಇರಾನ್ ಒಪ್ಪಂದಕ್ಕೆ ಸಿದ್ಧವಾಗಿಲ್ಲ ಎಂದು ಹೇಳಿದ್ದಾರೆ.

ಭಾನುವಾರ ಏರ್ ಫೋರ್ಸ್ ಒನ್‌ನಲ್ಲಿ ವರದಿಗಾರರ ಜೊತೆ ಮಾತನಾಡಿದ ಟ್ರಂಪ್, “ಹೌದು, ನಾವು ಇರಾನ್ ಜೊತೆ ಮಾತನಾಡುತ್ತಿದ್ದೇವೆ” ಎಂದಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಹರಡಿರುವ ಮತ್ತು ಜಾಗತಿಕ ಮಾರುಕಟ್ಟೆಗಳನ್ನು ತಲ್ಲಣಗೊಳಿಸಿರುವ ಸಂಘರ್ಷವನ್ನು ಕೊನೆಗೊಳಿಸಲು ಯಾವುದಾದರೂ ರಾಜತಾಂತ್ರಿಕತೆ ನಡೆಯುತ್ತಿದೆಯೇ ಎಂದು ಕೇಳಿದಾಗ ಅದಕ್ಕೆ ಉತ್ತರಿಸಿದ ಟ್ರಂಪ್, “ನಾವು ಮಾತುಕತೆ ನಡೆಸುತ್ತಿದ್ದೇವೆ. ಆದರೆ ಅವರು ಯುದ್ಧ ನಿಲ್ಲಿಸಲು ಸಿದ್ಧರಾಗಿದ್ದಾರೆಂದು ನನಗೆ ಅನಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಇರಾನ್‌ನ ವಿದೇಶಾಂಗ ಸಚಿವರು ಅಮೆರಿಕದ ಜೊತೆ ಯಾವುದೇ ಮಾತುಕತೆಗಳು ನಡೆಯುತ್ತಿಲ್ಲ ಎಂದು ಹೇಳಿಕೆ ನೀಡಿದ್ದರು. ಫೆಬ್ರವರಿ 28ರಂದು, ಇರಾನ್‌ನ ಸುಪ್ರೀಂ ನಾಯಕ ಅಲಿ ಖಮೇನಿ ಮತ್ತು ಡಜನ್​ಗಟ್ಟಲೆ ಇರಾನಿನ ಹಿರಿಯ ಅಧಿಕಾರಿಗಳು ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯ ಮೊದಲ ದಿನದಂದೇ ಪ್ರಾಣ ಕಳೆದುಕೊಂಡರು. ಇದಾದ ನಂತರ ಇರಾನ್ ಕೂಡ ಪ್ರತೀಕಾರದ ದಾಳಿ ನಡೆಸಿ ಗಲ್ಫ್ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳು ಮತ್ತು ಇಸ್ರೇಲ್ ಮೇಲೆ ದಾಳಿ ನಡೆಸಿತ್ತು.

 

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ರಾಜೀನಾಮೆ ನೀಡಿದ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್

ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬ್ರಿಟಿಷ್ ರಾಜಕೀಯದಲ್ಲಿ ನಾಟಕೀಯ ತಿರುವು ನೀಡಿದೆ. ತೀವ್ರ ರಾಜಕೀಯ ಆರ್ಥಿಕ ಬಿಕ್ಕಟ್ಟು, ಜೀವನ ವೆಚ್ಚ ಏರಿಕೆ ಹಾಗೂ ಪಕ್ಷದೊಳಗಿನ ಒತ್ತಡ ಇದಕ್ಕೆ ಪ್ರಮುಖ ಕಾರಣ. ಆಂಡಿ ಬರ್ನ್‌ಹ್ಯಾಮ್ ಸವಾಲು ಮತ್ತು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!