ಗ್ಯಾಸ್ ಸಿಲಿಂಡರ್​​ಗಾಗಿ ಹೈಕೋರ್ಟ್​​ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್!

 

ರಾಜ್ಯದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವದಿಂದ ಬೆಂಗಳೂರು ಹೋಟೆಲ್ ಉದ್ಯಮ ನಷ್ಟ ಅನುಭವಿಸುತ್ತಿದೆ. ಹಲವು ಹೋಟೆಲ್‌ಗಳು ಬಂದ್ ಆಗಿದ್ದರೆ, ಕೆಲವು ಮೆನು ಕಡಿತಗೊಳಿಸಿವೆ. ಈ ಬಿಕ್ಕಟ್ಟಿಗೆ ಪರಿಹಾರ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ. 40 ಸಾವಿರ ಹೋಟೆಲ್‌ಗಳು ಮತ್ತು 6 ಲಕ್ಷ ಕಾರ್ಮಿಕರ ಭವಿಷ್ಯ ಅತಂತ್ರವಾಗಿದ್ದು, ಸಿಲಿಂಡರ್ ಪೂರೈಕೆಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದೆ.
ರಾಜ್ಯದಲ್ಲಿ ಕಮರ್ಷಿಯಲ್​​ ಸಿಲಿಂಡರ್​​ಗಳ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರೋದು ಹೋಟೆಲ್​​ ಉದ್ಯಮವನ್ನು ನಷ್ಟದ ಕೂಪಕ್ಕೆ ತಳ್ಳುತ್ತಿದೆ. ಈಗಾಗಲೇ ಹಲವು ಹೋಟೆಲ್​​ಗಳು ಬಂದ್​​ ಆಗಿದ್ದರೆ, ಇನ್ನೊಂದಿಷ್ಟು ಮೆನುವಿನಲ್ಲಿ ಭಾರೀ ಕಡಿತದ ಜೊತೆ ಗ್ರಾಹಕರಿಗೆ ಸೇವೆ ನೀಡುತ್ತಿವೆ. ಸ್ಥಿತಿ ಹೀಗೆಯೇ ಮುಂದುವರಿದರೆ ಅವುಗಳೂ ಕ್ಲೋಸ್​​ ಆಗುವ ಆತಂಕ ಎದುರಾಗಿದೆ. ಈ ಬೆನ್ನಲ್ಲೇ ಬೆಂಗಳೂರು ಹೋಟೆಲ್ ಅಸೋಸಿಯೇಷನ್, ವಾಣಿಜ್ಯ ಬಳಕೆಯ ಸಿಲಿಂಡರ್​​ಗಳಿಗಾಗಿ ಹೈಕೋರ್ಟ್​​ ಕದ ತಟ್ಟಿದೆ.

ಹೈಕೋರ್ಟ್​ಗೆ ರಿಟ್ ಅರ್ಜಿ,ಹೋಟೆಲ್​ಗಳಿಗೆ ಗ್ಯಾಸ್ ಸಿಲಿಂಡರ್ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳನ್ನು ಪ್ರತಿವಾದಿಯನ್ನಾಗಿಸಿ ಅರ್ಜಿ ಸಲ್ಲಿಸಲಾಗಿದ್ದು, ಹೋಟೆಲ್ ಮುಚ್ಚಿರುವುದರಿಂದ ಹಾಲು ಮತ್ತು ತರಕಾರಿ ಮಾರಾಟಗಾರರಿಗೂ ತೊಂದರೆ ಆಗಿದೆ. 40 ಸಾವಿರ ಹೋಟೆಲ್, 6 ಲಕ್ಷ ಕಾರ್ಮಿಕರಿಗೆ ಸಮಸ್ಯೆಯಾಗಿದೆ. ಹೀಗಾಗಿ ಗ್ಯಾಸ್ ಸಿಲಿಂಡರ್ ಪೂರೈಕೆಗೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಅಸೋಸಿಯೇಷನ್ ಪರ ವಕೀಲ ಕೆ.ಸತೀಶ್ ಭಟ್ ಅರ್ಜಿ ಸಲ್ಲಿಸಿದ್ದಾರೆ.

ಹೋಟೆಲ್ ಉದ್ಯಮಕ್ಕೆ 1 ಸಾವಿರ ಸಿಲಿಂಡರ್​ಗಳನ್ನು ಪೂರೈಸುವುದಾಗಿ ಸಚಿವ ಮುನಿಯಪ್ಪ ಹೇಳಿದ್ದರೂ, ಸಚಿವರ ಭರವಸೆ ಬಗ್ಗೆ ಬೆಂಗಳೂರಿನ ಹೋಟೆಲ್ ಮಾಲೀಕರು ಅಸಮಾಧಾನ ಹೊರಹಾಕಿದ್ದಾರೆ. 40 ಸಾವಿರ ಹೋಟೆಲ್​​ಗಳಿಗೆ ಒಂದು ಸಾವಿರ ಸಿಲಿಂಡರ್ ಕೊಡುವ ಬದಲು, ಕೊಡದೆ ಇರುವುದೇ ಒಳ್ಳೆಯದು. ಹೋಟೆಲ್​​ಗಳ ಮಾಲಕರು ಮಾತ್ರವಲ್ಲದೆ ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರು ಮತ್ತು ಅವರ ಕುಟುಂಬದ ಬಗ್ಗೆಯೂ ಸರ್ಕಾರ ಗಮನ ಹರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ. ಬೆಂಗಳೂರಿನಲ್ಲಿ ಸರಿ ಸುಮಾರು 40 ಸಾವಿರಕ್ಕೂ ಹೆಚ್ಚು ಹೋಟೆಲ್​ಗಳಿದ್ದು, ಈ ಪೈಕಿ 4,500 ಹೋಟೆಲ್​​ಗಳು ರಿಜಿಸ್ಟರ್​​ ಆಗಿವೆ. ಇವೆಲ್ಲವೂ ಕೂಡ ಈಗ ವಾಣಿಜ್ಯ ಗ್ಯಾಸ್ ಸಿಲಿಂಡರ್ ಅಭಾವದ ಸಮಸ್ಯೆಗೆ ಸಿಲುಕಿದ್ದು, ನಷ್ಟ ಅನುಭವಿಸುತ್ತಿವೆ. ಹಲವೆಡೆ ರೆಸ್ಟೋರೆಂಟ್​​ಗಳು ಬಂದ್​​ ಆಗಿದ್ದರೆ, ಇನ್ನು ಕೆಲ ಹೋಟೆಲ್​​ಗಳು ನಷ್ಟದಲ್ಲಿಯೇ ಗ್ರಾಹಕರಿಗೆ ಸೇವೆ ಒದಗಿಸುತ್ತಿರುವ ಪರಿಣಾಮ ರಾಜ್ಯ ರಾಜಧಾನಿ ಬೆಂಗಳೂರೊಂದರಲ್ಲೇ ನೂರಾರು ಕೋಟಿ ರೂಪಾಯಿ ಹೋಟೆಲ್​​ ಉದ್ಯಮಕ್ಕೆ ನಷ್ಟ ಉಂಟಾಗಿದೆ ಎನ್ನಲಾಗಿದೆ.

 

Related Posts

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ಮಠ-ಮಾನ್ಯಗಳು ಮತ್ತು ಸಂಸ್ಥೆಗಳ ಆಡಳಿತದಲ್ಲಿ ಆರ್ಥಿಕ ಪಾರದರ್ಶಕತೆ ಅತ್ಯಗತ್ಯವೆಂದು ಪ್ರತಿಪಾದಿಸಿದ್ದಾರೆ. ಆಯೋಧ್ಯೆಯ ರಾಮಮಂದಿರದ ಹುಂಡಿ ಕಳ್ಳತನದ ಕುರಿತು ಪ್ರತಿಕ್ರಿಯಿಸಿದ ಶ್ರೀಗಳು, ಈ ಪ್ರಕರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಹಾಗೂ ನ್ಯಾಯಾಲಯದಲ್ಲಿ ತನಿಖೆ…

You Missed

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!