ಗ್ಯಾಸ್ ಸಿಲಿಂಡರ್​​ಗಾಗಿ ಹೈಕೋರ್ಟ್​​ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್!

 

ರಾಜ್ಯದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವದಿಂದ ಬೆಂಗಳೂರು ಹೋಟೆಲ್ ಉದ್ಯಮ ನಷ್ಟ ಅನುಭವಿಸುತ್ತಿದೆ. ಹಲವು ಹೋಟೆಲ್‌ಗಳು ಬಂದ್ ಆಗಿದ್ದರೆ, ಕೆಲವು ಮೆನು ಕಡಿತಗೊಳಿಸಿವೆ. ಈ ಬಿಕ್ಕಟ್ಟಿಗೆ ಪರಿಹಾರ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ. 40 ಸಾವಿರ ಹೋಟೆಲ್‌ಗಳು ಮತ್ತು 6 ಲಕ್ಷ ಕಾರ್ಮಿಕರ ಭವಿಷ್ಯ ಅತಂತ್ರವಾಗಿದ್ದು, ಸಿಲಿಂಡರ್ ಪೂರೈಕೆಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದೆ.
ರಾಜ್ಯದಲ್ಲಿ ಕಮರ್ಷಿಯಲ್​​ ಸಿಲಿಂಡರ್​​ಗಳ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರೋದು ಹೋಟೆಲ್​​ ಉದ್ಯಮವನ್ನು ನಷ್ಟದ ಕೂಪಕ್ಕೆ ತಳ್ಳುತ್ತಿದೆ. ಈಗಾಗಲೇ ಹಲವು ಹೋಟೆಲ್​​ಗಳು ಬಂದ್​​ ಆಗಿದ್ದರೆ, ಇನ್ನೊಂದಿಷ್ಟು ಮೆನುವಿನಲ್ಲಿ ಭಾರೀ ಕಡಿತದ ಜೊತೆ ಗ್ರಾಹಕರಿಗೆ ಸೇವೆ ನೀಡುತ್ತಿವೆ. ಸ್ಥಿತಿ ಹೀಗೆಯೇ ಮುಂದುವರಿದರೆ ಅವುಗಳೂ ಕ್ಲೋಸ್​​ ಆಗುವ ಆತಂಕ ಎದುರಾಗಿದೆ. ಈ ಬೆನ್ನಲ್ಲೇ ಬೆಂಗಳೂರು ಹೋಟೆಲ್ ಅಸೋಸಿಯೇಷನ್, ವಾಣಿಜ್ಯ ಬಳಕೆಯ ಸಿಲಿಂಡರ್​​ಗಳಿಗಾಗಿ ಹೈಕೋರ್ಟ್​​ ಕದ ತಟ್ಟಿದೆ.

ಹೈಕೋರ್ಟ್​ಗೆ ರಿಟ್ ಅರ್ಜಿ,ಹೋಟೆಲ್​ಗಳಿಗೆ ಗ್ಯಾಸ್ ಸಿಲಿಂಡರ್ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳನ್ನು ಪ್ರತಿವಾದಿಯನ್ನಾಗಿಸಿ ಅರ್ಜಿ ಸಲ್ಲಿಸಲಾಗಿದ್ದು, ಹೋಟೆಲ್ ಮುಚ್ಚಿರುವುದರಿಂದ ಹಾಲು ಮತ್ತು ತರಕಾರಿ ಮಾರಾಟಗಾರರಿಗೂ ತೊಂದರೆ ಆಗಿದೆ. 40 ಸಾವಿರ ಹೋಟೆಲ್, 6 ಲಕ್ಷ ಕಾರ್ಮಿಕರಿಗೆ ಸಮಸ್ಯೆಯಾಗಿದೆ. ಹೀಗಾಗಿ ಗ್ಯಾಸ್ ಸಿಲಿಂಡರ್ ಪೂರೈಕೆಗೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಅಸೋಸಿಯೇಷನ್ ಪರ ವಕೀಲ ಕೆ.ಸತೀಶ್ ಭಟ್ ಅರ್ಜಿ ಸಲ್ಲಿಸಿದ್ದಾರೆ.

ಹೋಟೆಲ್ ಉದ್ಯಮಕ್ಕೆ 1 ಸಾವಿರ ಸಿಲಿಂಡರ್​ಗಳನ್ನು ಪೂರೈಸುವುದಾಗಿ ಸಚಿವ ಮುನಿಯಪ್ಪ ಹೇಳಿದ್ದರೂ, ಸಚಿವರ ಭರವಸೆ ಬಗ್ಗೆ ಬೆಂಗಳೂರಿನ ಹೋಟೆಲ್ ಮಾಲೀಕರು ಅಸಮಾಧಾನ ಹೊರಹಾಕಿದ್ದಾರೆ. 40 ಸಾವಿರ ಹೋಟೆಲ್​​ಗಳಿಗೆ ಒಂದು ಸಾವಿರ ಸಿಲಿಂಡರ್ ಕೊಡುವ ಬದಲು, ಕೊಡದೆ ಇರುವುದೇ ಒಳ್ಳೆಯದು. ಹೋಟೆಲ್​​ಗಳ ಮಾಲಕರು ಮಾತ್ರವಲ್ಲದೆ ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರು ಮತ್ತು ಅವರ ಕುಟುಂಬದ ಬಗ್ಗೆಯೂ ಸರ್ಕಾರ ಗಮನ ಹರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ. ಬೆಂಗಳೂರಿನಲ್ಲಿ ಸರಿ ಸುಮಾರು 40 ಸಾವಿರಕ್ಕೂ ಹೆಚ್ಚು ಹೋಟೆಲ್​ಗಳಿದ್ದು, ಈ ಪೈಕಿ 4,500 ಹೋಟೆಲ್​​ಗಳು ರಿಜಿಸ್ಟರ್​​ ಆಗಿವೆ. ಇವೆಲ್ಲವೂ ಕೂಡ ಈಗ ವಾಣಿಜ್ಯ ಗ್ಯಾಸ್ ಸಿಲಿಂಡರ್ ಅಭಾವದ ಸಮಸ್ಯೆಗೆ ಸಿಲುಕಿದ್ದು, ನಷ್ಟ ಅನುಭವಿಸುತ್ತಿವೆ. ಹಲವೆಡೆ ರೆಸ್ಟೋರೆಂಟ್​​ಗಳು ಬಂದ್​​ ಆಗಿದ್ದರೆ, ಇನ್ನು ಕೆಲ ಹೋಟೆಲ್​​ಗಳು ನಷ್ಟದಲ್ಲಿಯೇ ಗ್ರಾಹಕರಿಗೆ ಸೇವೆ ಒದಗಿಸುತ್ತಿರುವ ಪರಿಣಾಮ ರಾಜ್ಯ ರಾಜಧಾನಿ ಬೆಂಗಳೂರೊಂದರಲ್ಲೇ ನೂರಾರು ಕೋಟಿ ರೂಪಾಯಿ ಹೋಟೆಲ್​​ ಉದ್ಯಮಕ್ಕೆ ನಷ್ಟ ಉಂಟಾಗಿದೆ ಎನ್ನಲಾಗಿದೆ.

 

Related Posts

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ

ಒಟ್ಟು ಎರಡು ಭಾಗಗಳಲ್ಲಿ ‘ರಾಮಾಯಣ’ ಸಿನಿಮಾ ಮೂಡಿಬರುತ್ತಿದೆ. ಈ ವರ್ಷದ ದೀಪಾವಳಿಗೆ ಮೊದಲ ಪಾರ್ಟ್ ಬಿಡುಗಡೆ ಆಗಲಿದೆ. ರಿಲೀಸ್​ಗೂ ಮುನ್ನ ದೇಶಾದ್ಯಂತ ವಿವಿಧ ರೀತಿಯ ಪ್ರಚಾರಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಗಳಲ್ಲಿ ಕೂಡ ‘ರಾಮಾಯಣ’ ಚಿತ್ರವನ್ನು ಪ್ರಚಾರ ಮಾಡಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿಭಾರತೀಯ…

You Missed

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ

ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ

ಮೈಸೂರು ಮಹಾನಗರ ಪಾಲಿಕೆಗೆ ಹೊಸ ಆಯುಕ್ತರ ನೇಮಕ

ಮೈಸೂರು ಮಹಾನಗರ ಪಾಲಿಕೆಗೆ ಹೊಸ ಆಯುಕ್ತರ ನೇಮಕ

ಡೀಲ್​ ಕೊಟ್ಟವರಿಗಾಗಿ ಪೊಲೀಸರ ಹುಡುಕಾಟ

ಡೀಲ್​ ಕೊಟ್ಟವರಿಗಾಗಿ ಪೊಲೀಸರ ಹುಡುಕಾಟ

ಸಖತ್ ಬೋಲ್ಡ್ ಅವತಾರದಲ್ಲಿ ಯಶ್​-ಕಿಯಾರಾ ‘ತಬಾಹಿ’

ಸಖತ್ ಬೋಲ್ಡ್ ಅವತಾರದಲ್ಲಿ ಯಶ್​-ಕಿಯಾರಾ ‘ತಬಾಹಿ’