ರೇಣುಕಾ ಸ್ವಾಮಿ ಪ್ರಕರಣ: ಆರೋಪಿ ಪವನ್ ವಕೀಲರಿಗೆ ದಂಡ !

 

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. ಕಳೆದ ವಿಚಾರಣೆ ವೇಳೆ, ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಪವನ್ ಪರ ವಕೀಲರು, ಪ್ರಕರಣದ ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ್ದರು ಮಾತ್ರವಲ್ಲದೆ, ತನಿಖಾಧಿಕಾರಿಗಳಲ್ಲಿ ಒಬ್ಬರಾಗಿರುವ ಎಸಿಪಿ ಚಂದನ್ ಅವರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಪರಿಗಣಿಸಬೇಕು ಎಂದು ವಾದಿಸಿದ್ದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ಚಾಲ್ತಿಯಲ್ಲಿದ್ದು, ಆರೋಪಿಗಳ ಪರ ವಕೀಲರು ವಾದ ಮಂಡನೆ ಮಾಡುತ್ತಿದ್ದಾರೆ. ಕಳೆದ ವಿಚಾರಣೆ ವೇಳೆ, ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಪವನ್ ಪರ ವಕೀಲರು, ಪ್ರಕರಣದ ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ್ದರು ಮಾತ್ರವಲ್ಲದೆ, ತನಿಖಾಧಿಕಾರಿಗಳಲ್ಲಿ ಒಬ್ಬರಾಗಿರುವ ಎಸಿಪಿ ಚಂದನ್ ಅವರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಪರಿಗಣಿಸಬೇಕು ಎಂದು ವಾದಿಸಿದ್ದರು.

ಬಳಿಕ ನ್ಯಾಯಾಲವು ವಿಚಾರಣೆ ಮುಂದೂಡಿತ್ತು. ಪವನ್ ಪರ ವಕೀಲರ ಅರ್ಜಿ ಕುರಿತು ಆದೇಶ ನೀಡಿರುವ ನ್ಯಾಯಾಲಯವು, ಪವನ್ ಪರ ವಕೀಲರಿಗೆ ದಂಡ ವಿಧಿಸಿದೆ. ಆರೋಪಿಗಳ ಮೊಬೈಲ್ ಗಳನ್ನು ವಶಕ್ಕೆ ಪಡೆಯುವಾಗ ಪೊಲೀಸರು ಫೋಟೋ ತೆಗೆದಿದ್ದರು. ಆ ಫೋಟೊನಲ್ಲಿರುವ ಟೈಲ್ಸ್​​ನ ಬಣ್ಣವನ್ನು ಉಲ್ಲೇಖಿಸಿ, ತನಿಖಾಧಿಕಾರಿಗಳ ವಿರುದ್ಧ ಸುಳ್ಳು ಸಾಕ್ಷ್ಯ ಸೃಷ್ಟಿ, ಸಾಕ್ಷ್ಯ ತಿದ್ದಿದ ಆರೋಪಗಳನ್ನು ಪವನ್ ಪರ ವಕೀಲರು ಮಾಡಿದ್ದರು. ಆದರೆ ನ್ಯಾಯಾಲವು ಅರ್ಜಿಯನ್ನು ತಿರಸ್ಕರಿಸಿದ್ದು ಮಾತ್ರವೇ ಅಲ್ಲದೆ, ನ್ಯಾಯಾಲಯದ ಸಮಯ ಹಾಳು ಮಾಡಿದ್ದಕ್ಕೆ ವಕೀಲರಿಗೆ ಐದು ಸಾವಿರ ರೂಪಾಯಿ ದಂಡ ಸಹ ಹೇರಿದೆ. ಈ ಹಣವನ್ನು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೀಡಲು ಸೂಚನೆ ನೀಡಿದೆ.

ಕುಟುಂಬ ಸದಸ್ಯರ ಭೇಟಿ ಮಾಡಲು ಕೋರಿ ಆರೋಪಿ ದರ್ಶನ್ ಅರ್ಜಿ ಸಲ್ಲಸಿದ್ದರು. ಈ ಅರ್ಜಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ. ಕುಟುಂಬ ಸದಸ್ಯರು, ಸ್ನೇಹಿತರ ಭೇಟಿಗೆ ಕೋರ್ಟ್ ಅನುಮತಿ ನೀಡಿದೆ. ಜೈಲು ಕೈಪಿಡಿಗನುಗುಣವಾಗಿ ಭೇಟಿಗೆ ಅವಕಾಶ ನೀಡಲು ನ್ಯಾಯಾಲಯವು ಆದೇಶ ನೀಡಿದೆ. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ನ್ಯಾಯಾಲಯವು ನಿರ್ದೇಶನವನ್ನು ನೀಡಿದೆ. ದರ್ಶನ್ ಸೆಲೆಬ್ರಿಟಿ ಎಂಬ ಕಾರಣಕ್ಕೆ ಆರೋಪಿಯ ಭೇಟಿಯ ಕುರಿತು ಕೆಲವು ನಿಯಮಗಳನ್ನು ಜೈಲು ಅಧಿಕಾರಿಗಳು ಹೇರಿದ್ದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣ ನಡೆದು ಎರಡು ವರ್ಷವಾಗುತ್ತಾ ಬಂದಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವು ಆರೋಪಿಗಳು ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ದರ್ಶನ್, ಜೈಲು ಸೇರಿ ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಆದರೆ ಸುಪ್ರೀಂಕೋರ್ಟ್ ಮತ್ತೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇದೀಗ ದರ್ಶನ್ ಸೇರಿದಂತೆ ಹಲವು ಆರೋಪಿಗಳು ಪರಪ್ಪನ ಅಗ್ರಹಾರ ಸೇರಿದಂತೆ ಇತರೆ ಕೆಲವು ಜೈಲುಗಳಲ್ಲಿ ಇದ್ದಾರೆ. ದರ್ಶನ್ ಪರ ವಕೀಲರು ಮತ್ತೆ ಜಾಮೀನಿಗೆ ಅರ್ಜಿ ಹಾಕಿಲ್ಲ ಆದರೆ ವಿಚಾರಣೆಯನ್ನು ಬೇಗನೆ ನಡೆಸುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿದ್ದಾರೆ. ಆದರೆ ಎಸ್​​ಪಿಪಿ ಅವರು ಸತತ ವಿಚಾರಣೆ ಅಥವಾ ತ್ವರಿತ ವಿಚಾರಣೆಗೆ ಒಪ್ಪಿಲ್ಲ.

Related Posts

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ಮಠ-ಮಾನ್ಯಗಳು ಮತ್ತು ಸಂಸ್ಥೆಗಳ ಆಡಳಿತದಲ್ಲಿ ಆರ್ಥಿಕ ಪಾರದರ್ಶಕತೆ ಅತ್ಯಗತ್ಯವೆಂದು ಪ್ರತಿಪಾದಿಸಿದ್ದಾರೆ. ಆಯೋಧ್ಯೆಯ ರಾಮಮಂದಿರದ ಹುಂಡಿ ಕಳ್ಳತನದ ಕುರಿತು ಪ್ರತಿಕ್ರಿಯಿಸಿದ ಶ್ರೀಗಳು, ಈ ಪ್ರಕರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಹಾಗೂ ನ್ಯಾಯಾಲಯದಲ್ಲಿ ತನಿಖೆ…

You Missed

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!