ವಿದ್ಯುತ್ ಶಾಕ್​​ಗೆ ಹೆಣ್ಣು ಹುಲಿ ಬಲಿ; ಅರಣ್ಯಾಧಿಕಾರಿಗಳ ಕಳ್ಳಾಟಕ್ಕೆ ರೊಚ್ಚಿಗೆದ್ದ ರೈತರು !

 

ಜಮೀನಿನ ಬೇಲಿಯಿಂದ ವಿದ್ಯುತ್ ಪ್ರವಹಿಸಿ 5 ವರ್ಷದ ಹೆಣ್ಣು ಹುಲಿ ಸಾವನ್ನಪ್ಪಿರುವಂತಹ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ಇದೇ ಹುಲಿ ಮೂರು ಹಸುಗಳನ್ನು ಕೊಂದಿತ್ತು. ಜಾನುವಾರು ಸತ್ತಾಗ ಸ್ಪಂದಿಸದ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಗಡಿನಾಡು ಚಾಮರಾಜನಗರದಲ್ಲಿ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷ ಮತ್ತೆ ಮುಂದುವರೆದಿದೆ. ಕಳೆದ ವಾರ ಮೂರು ಹಸುವನ್ನ ಕೊಂದು ತಿಂದಿದ್ದ 5 ವರ್ಷದ ಹೆಣ್ಣು ಹುಲಿ ವಿದ್ಯುತ್ ಶಾಕ್​​ಗೆ ಬಲಿಯಾಗಿರುವಂತಹ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ಜಾನುವಾರು ಸತ್ತಾಗ ಬಾರದ ಅರಣ್ಯ ಸಿಬ್ಬಂದಿ ಇದೀಗ ಹುಲಿ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಓಡೋಡಿ ಬಂದಿದ್ದ ಅರಣ್ಯಾಧಿಕಾರಿಗಳಿಗೆ ರೈತರು ಚಳಿ ಕೂಡ ಬಿಡಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗೆ ಘೇರಾವ್ ಹಾಕಿದ ಅನ್ನದಾತರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಜಮೀನು ಒಂದಕ್ಕೆ ನೀಡಿದ್ದ ವಿದ್ಯುತ್ ಸಂಪರ್ಕದಿಂದ 5 ವರ್ಷ ಪ್ರಾಯದ ಹೆಣ್ಣು ಹುಲಿ ಸಾವನ್ನಪ್ಪಿದೆ. ಈ ಹಿನ್ನಲೆ ಸ್ಥಳಕ್ಕೆ ಬಂದ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿಗೆ ಘೇರಾವ್ ಹಾಕಿ ಅನ್ನದಾತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಇನ್ನು ಕಳೆದ 15 ದಿನಗಳಲ್ಲಿ ರವಿಚಂದ್ರ ಎಂಬುವವರ ಜಮೀನಿನಲ್ಲಿ ಮೇಯುತ್ತಿದ್ದ ಮೂರು ಜಾನುವಾರುಗಳ ಮೇಲೆ ವ್ಯಾಘ್ರ ದಾಳಿ ಮಾಡಿತ್ತು. ಮೂರು ಹಸುವನ್ನ ಕೊಂದು ತಿಂದು ತೇಗಿತ್ತು. ಆಗ ಬಂಡೀಪುರ ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದರೆ ಸ್ಥಳಕ್ಕೆ ಬಾರದೆ ಉಡಾಫೆ ತೋರಿದ್ದರು. ಆದರೆ ಇಂದು ಹುಲಿ ಸತ್ತ ವಿಚಾರ ತಿಳಿದ ತಕ್ಷಣ ಇಡೀ ಬಂಡೀಪುರ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದರು. ಇದರಿಂದ ರೊಚ್ಚಿಗೆದ್ದ ರೈತ ವರ್ಗ ಅರಣ್ಯ ಸಿಬ್ಬಂದಿಗೆ ಘೇರಾವ್ ಹಾಕಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.ಹುಲಿಯ ಕಾಟಕ್ಕೆ ಈ ಭಾಗದ ರೈತರು ರೋಸಿಹೋಗಿದ್ದಾರೆ. ಆಗಲೇ ಅರಣ್ಯ ಸಿಬ್ಬಂದಿ ಬೋನಿಟ್ಟು ಹುಲಿಯನ್ನ ಹಿಡಿದಿದ್ದರೆ ಇಂದು ಹುಲಿ ಬಲಿಯಾಗುತ್ತಿರಲಿಲ್ಲ ಎಂದು ರೈತ ದಿನೇಶ್​ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

 

ಜಮೀನಿನಲ್ಲಿ ವಿದ್ಯುತ್ ಕೊಟ್ಟು ಹುಲಿ ಸಾವಿಗೆ ಕಾರಣವಾದವರ ಮೇಲೆ ಎಫ್​ಐಆರ್ ಮಾಡಿ ಕಾನೂನು ಕ್ರಮ ತೆಗೆದುಕೊಳ್ಳಿ, ಆದರೆ ಕರ್ತವ್ಯ ಲೋಪ ಎಸಗಿದ ಅರಣ್ಯ ಇಲಾಖೆಯ ಸಿಎಫ್ ಪ್ರಭಾಕರನ್ ಮೇಲೆ ಎಫ್ ಐ ಆರ್ ಮಾಡಿದರೆ ಮಾತ್ರ ರೈತನ ಮೇಲೆ ಎಫ್​ಐಆರ್ ಮಾಡಬೇಕು. ಇಲ್ಲದೆ ಹೋದರೆ ಯಾವುದೇ ಕಾರಣಕ್ಕೂ ಪ್ರಕರಣ ದಾಖಲು ಮಾಡುವುದಕ್ಕೆ ಬಿಡಲ್ಲವೆಂದು ರೈತರು ಪಟ್ಟುಹಿಡಿದರು. ರೈತರ ಉಗ್ರ ರೂಪಕ್ಕೆ ಬೆದರಿದ ಬಂಡೀಪುರ ಸಿಎಫ್ ಪ್ರಭಾಕರನ್, ಪೊಲೀಸ್ ರಕ್ಷಣೆ ಜೊತೆ ಸ್ಥಳಕ್ಕೆ ಬಂದಿದ್ದು ಹಾಸ್ಯಸ್ಪದವಾಗಿತ್ತು.

 

Related Posts

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಈರುಳ್ಳಿ ಅಭಾವ ಮತ್ತು ಬೆಲೆ ಏರಿಕೆ ಭೀತಿ

ಈರುಳ್ಳಿ ಅಭಾವ ಮತ್ತು ಬೆಲೆ ಏರಿಕೆ ಭೀತಿ

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!