ಈ ಬಾರಿ ಸುಲಭವಿಲ್ಲ ಎಂದು ಬಿಗ್ ವಾರ್ನಿಂಗ್ ಕೊಟ್ಟ ಕಿಂಗ್ ಕೊಹ್ಲಿ!

ಬೆಂಗಳೂರು, ಮಾರ್ಚ್ 21: ಐಪಿಎಲ್ 2026 ಸೀಸನ್ ಆರಂಭಕ್ಕೂ ಮುನ್ನವೇ ಆರ್‌ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಂಡದ ಆಟಗಾರರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ತಂಡದ ತರಬೇತಿ ಶಿಬಿರದಲ್ಲಿ ಮಾತನಾಡಿದ ಕೊಹ್ಲಿ, ಈ ಸೀಸನ್ ಇನ್ನಷ್ಟು ಕಠಿಣವಾಗಲಿದೆ ಎಂದು ತಿಳಿಸಿದ್ದಾರೆ.ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ 2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈ ಹಿನ್ನೆಲೆ ಈಗಾಗಲೇ ತಂಡ ತಯಾರಿ ಆರಂಭಿಸಿದ್ದು, ಕೊಹ್ಲಿಯ ಭರ್ಜರಿ ಬ್ಯಾಟಿಂಗ್ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಈ ಸೀಸನ್ ಇನ್ನಷ್ಟು ಕಠಿಣ: ತಂಡದ ಸಹ ಆಟಗಾರರೊಂದಿಗೆ ಮಾತನಾಡಿದ ಕೊಹ್ಲಿ, ಕಳೆದ 2-3 ಸೀಸನ್‌ಗಳಲ್ಲಿ ನಾವು ತುಂಬಾ ಕಷ್ಟಪಟ್ಟಿದ್ದೇವೆ. ಕಳೆದ ವರ್ಷ ಸಾಧನೆ ಮಾಡಿದ್ದೇವೆ. ಆದರೆ ಈಗ ಇನ್ನಷ್ಟು ಕಷ್ಟವಾಗಲಿದೆ. ಇತರ ತಂಡಗಳು ನಮ್ಮ ವಿರುದ್ಧ ಇನ್ನಷ್ಟು ಆಕ್ರಮಣಕಾರಿ ಆಟ ಆಡಲಿವೆ ಎಂದು ಹೇಳಿದ್ದಾರೆ.ಒಂದು ನಿಮಿಷವೂ ವ್ಯರ್ಥ ಮಾಡಬಾರದು. ಪ್ರತಿಯೊಂದು ಸೆಷನ್‌ಗೂ 120 ಪರ್ಸೆಂಟ್ ಕೊಡುಗೆ ನೀಡಬೇಕು. ಈ ಎರಡೂವರೆ ತಿಂಗಳು ನಮ್ಮ ಪಾಲಿಗೆ ಬಹಳ ಮುಖ್ಯ ಎಂದು ತಂಡವನ್ನು ಕೊಹ್ಲಿ ಹುರಿದುಂಬಿಸಿದ್ದಾರೆ.

ಚಾಂಪಿಯನ್ ಆಗಿ ಹೊಸ ಸವಾಲು: ಆರ್‌ಸಿಬಿ ಕಳೆದ ಸೀಸನ್‌ನಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿತ್ತು. ಈಗ ಚಾಂಪಿಯನ್ ತಂಡವಾಗಿ ಕಣಕ್ಕಿಳಿಯುತ್ತಿರುವುದರಿಂದ ಒತ್ತಡ ಹೆಚ್ಚಾಗಲಿದೆ. ಈ ಕಾರಣಕ್ಕೇ ಸಹ ಆಟಗಾರರಿಗೆ ಕೊಹ್ಲಿ ಕಿವಿಮಾತು ಹೇಳಿದ್ದಾರೆ.ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಕೂಡ ಹೊಸ ಆಟಗಾರರ ಸೇರ್ಪಡೆಯಿಂದ ತಂಡ ಮತ್ತಷ್ಟು ಬಲವಾಗಿದೆಯೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, 2026 ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡಲು ಆರ್​​ಸಿಬಿ ಅಣಿಯಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೊಹ್ಲಿಗೆ ಮತ್ತೊಂದು ಮೈಲುಗಲ್ಲು: ಐಪಿಎಲ್ ಇತಿಹಾಸದಲ್ಲಿ ಈಗಾಗಲೇ 8,661 ರನ್ ಗಳಿಸಿರುವ ಕೊಹ್ಲಿ, ಈ ಸೀಸನ್‌ನಲ್ಲಿ 9,000 ರನ್ ಗಡಿ ದಾಟುವ ಮೊದಲ ಆಟಗಾರನಾಗುವ ಸಾಧ್ಯತೆಯೂ ಇದೆ. ಒಟ್ಟಿನಲ್ಲಿ, ಚಾಂಪಿಯನ್ ಆರ್‌ಸಿಬಿ ಈ ಬಾರಿ ಮತ್ತಷ್ಟು ಬಲಿಷ್ಠವಾಗಿ ಕಣಕ್ಕಿಳಿಯಲಿದ್ದು, ಕೊಹ್ಲಿಯ ಪ್ರೋತ್ಸಾಹದ ಹಾಗೂ ಎಚ್ಚರಿಕೆಯ ಮಾತುಗಳು ತಂಡಕ್ಕೆ ಹೊಸ ಉತ್ಸಾಹ ತುಂಬಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!