ಎಲ್‌ಪಿಜಿ ತೂಕ ಕಡಿತ ಇಲ್ಲ: 14.2 ಕೆಜಿ ಸಿಲಿಂಡರ್‌ ಯಥಾಸ್ಥಿತಿ ಎಂದು ಕೇಂದ್ರ.

ನವದೆಹಲಿ: ಮಧ್ಯಪ್ರಾಚ್ಯ ಯುದ್ಧದಿಂದ ದೇಶದಲ್ಲಿ ಎಲ್‌ಪಿಜಿ ಕೊರತೆ ಎದುರಾಗಿರುವ ಕಾರಣ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮನೆಗಳಿಗೆ 14.2 ಕೆಜಿ ಸಿಲಿಂಡರ್‌ಗಳಲ್ಲಿ ಕೇವಲ 10 ಕೆಜಿ ಎಲ್‌ಪಿಜಿ ಪೂರೈಸುವ ಬಗ್ಗೆ ಯೋಚಿಸುತ್ತಿವೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ಇದನ್ನು ಅಲ್ಲಗಳೆದಿದ್ದು, ಯಾವುದೇ ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ ಮಾಡಿದೆ.
ಸಾಮಾನ್ಯವಾಗಿ 14.2 ಕೆಜಿ ತೂಕದ ಸಿಲಿಂಡರ್ 35-40 ದಿನಗಳಿಗೆ ಸಾಕಾಗುತ್ತದೆ. ಅಂದರೆ 10 ಕೆಜಿ ಎಲ್‌ಪಿಜಿಯನ್ನು ಒಂದು ತಿಂಗಳವರೆಗೆ ಬಳಸಿಕೊಳ್ಳಬಹುದು. ಇದರಿಂದ ಗ್ಯಾಸ್‌ನಲ್ಲಿ ಕೊಂಚ ಉಳಿತಾಯವಾಗಿ, ಹೆಚ್ಚು ಮನೆಗಳಿಗೆ ಪೂರೈಸಬಹುದು ಎಂದು ಸರ್ಕಾರ ಚಿಂತನೆ ನಡೆಸಿದೆ ಎಂಬ ಮಾತುಗಳು ಹರಿದಾಡುತ್ತಿವೆ.

ಈ ಬೆನ್ನಲ್ಲೇ ಇದಕ್ಕೆ ಸ್ಪಷ್ಟೀಕರಣ ನೀಡಿರುವ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ, ‘ಇದೆಲ್ಲಾ ಕೇವಲ ಊಹಾಪೋಹ. ಇಂಥ ವದಂತಿಗಳಿಗೆ ಯಾವುದೇ ಹೇಳಿಕೆ ಅಥವಾ ವಿವರಣೆ ಕೊಡಲು ಸಾಧ್ಯವಿಲ್ಲ. ಸುಳ್ಳು ಸುದ್ದಿಗಳನ್ನು ನಂಬಬೇಡಿ’ ಎಂದು ಮನವಿ ಮಾಡಿದ್ದಾರೆ.
ನಮ್ಮ ತೈಲ ಸಂಗ್ರಹ ಮೂರನೇ ಎರಡರಷ್ಟು ಭರ್ತಿ: ಸಚಿವ ಗೋಪಿ
ಮಧ್ಯಪ್ರಾಚ್ಯ ಬಿಕ್ಕಟ್ಟು, ಬೆಲೆ ಏರಿಕೆ ಸೇರಿ ನಾನಾ ಅಡೆತಡೆಗಳ ನಡುವೆಯೂ ದೇಶದಲ್ಲಿ ಮೂರನೇ ಎರಡಷ್ಟು ತೈಲ ನಂಗ್ರಹಗಳು ತುಂಬಿವೆ ಎಂದು ಕೇಂದ್ರ ಸಚಿವ ಸುರೇಶ್‌ ಗೋಪಿ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಮೇಲ್ಮನೆಯಲ್ಲಿ ಲಿಖಿತ ರೂಪದಲ್ಲಿ ಮಾಹಿತಿ ನೀಡಿರುವ ಅವರು, ‘ 9.5 ದಿನಗಳ ಪೂರೈಕೆಗೆ ಅನುಕೂಲವಾಗುವಂತೆ ವಿನ್ಯಾಸ ಮಾಡಲಾದ ತೈಲ ಸಂಗ್ರಹಗಳು ಮೂರನೇ ಎರಡರಷ್ಟು ತುಂಬಿದೆ. ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್ 53.3 ಲಕ್ಷ ಟನ್‌ ಸಾಮರ್ಥ್ಯದೊಂದಿಗೆ ಮೂರು ಪೆಟ್ರೋಲಿಯಂ ಸಂಗ್ರಹಗಳನ್ನು ಸ್ಥಾಪಿಸಿತ್ತು. ಇವುಗಳಲ್ಲಿ ಸುಮಾರು 33.7 ಲಕ್ಷ ಟನ್‌ ಕಚ್ಚಾ ದಾಸ್ತಾನು ಇದೆ. ಒಟ್ಟಾರೆ ಸಂಗ್ರಹ ಸಾಮರ್ಥ್ಯದ ಶೇ.64ರಷ್ಟಿದೆ’ ಎಂದಿದ್ದಾರೆ.

ಶೇ.88ರಷ್ಟು ಕಚ್ಚಾ ತೈಲಗಳ ಆಮದು ಅವಲಂಬಿಸಿರುವ ಭಾರತ ಕಚ್ಚಾ ತೈಲವನ್ನು ಸಂಗ್ರಹಿಸಲು ಕರ್ನಾಟಕದ ಮಂಗಳೂರು, ಪಾದೂರು ಜತೆಗೆ ಆಂಧ್ರಪ್ರದೇಶದ ವಿಶಾಪಟ್ಟಣದಲ್ಲಿ ತೈಲ ಸಂಗ್ರಹ ಕೇಂದ್ರಗಳನ್ನು ನಿರ್ಮಿಸಿತ್ತು.

3 ವಾರದಲ್ಲಿ 3.5 ಲಕ್ಷ ಪಿಎನ್‌ಜಿ ಸಂಪರ್ಕ: ಕೇಂದ್ರ
ಎಲ್‌ಪಿಜಿ ಬಿಕ್ಕಟ್ಟಿನ ಕಾರಣ ಪಿಎನ್‌ಜಿ (ಪೈಪ್ಡ್ ನ್ಯಾಚುರಲ್‌ ಗ್ಯಾಸ್) ಬಳಕೆ ಉತ್ತೇಜಿಸುತ್ತಿರುವ ಕೇಂದ್ರ ಸರ್ಕಾರ, ಕಳೆದ 3 ವಾರಗಳಲ್ಲಿ ಸುಮಾರು 3.5 ಲಕ್ಷ ಹೊಸ ವಾಣಿಜ್ಯ ಮತ್ತು ದೇಶೀಯ ಪಿಎನ್‌ಜಿ ಸಂಪರ್ಕಗಳನ್ನು ನೀಡಿದೆ. ಇದೇ ವೇಳೆ, ಹೊಸದಾಗಿ 1.9 ಲಕ್ಷ ಜನರು ಈ ಅವಧಿಯಲ್ಲಿ ಪಿಎನ್‌ಜಿಗೆ ಶಿಫ್ಟ್‌ ಆಗಿದ್ದಾರೆ.

ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಕಾರ್ಯದರ್ಶಿ ಸುಜಾತಾ ಶರ್ಮಾ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿ, ‘ಎಲ್‌ಪಿಜಿ ಲಭ್ಯತೆ ಇನ್ನೂ ಕಳವಳಕಾರಿಯಾಗಿದೆ. ಆದರೆ ಸಿಲಿಂಡರ್‌ ಕ್ಷಾಮ ಉಂಟಾಗಿಲ್ಲ. ಪರಿಸ್ಥಿತಿ ನಿಯಂತ್ರಿಸಲು ಪೂರೈಕೆ ಅಧಿಕಗೊಳಿಸಲಾಗಿದೆ. ಪಿಎನ್‌ಜಿ ಸಂಪರ್ಕಕ್ಕೆ ಉತ್ತೇಜನ ನೀಡಲಾಗುತ್ತಿದೆ’ ಎಂದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!