ರಾಮ–ಸೀತೆ ವೇಷದಲ್ಲಿ ಮಿಂಚಿದ ಮಕ್ಕಳು: ರಾಮನವಮಿಗೆ ಕಳೆ ತಂದ ಸಂಭ್ರಮ, ಶ್ರೀರಾಮ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ.

ಮೈಸೂರು: ಶ್ರೀ ರಾಮನು ಸತ್ಯಾ ತಾಳ್ಮೆ ಮತ್ತು ಧರ್ಮದ ಪ್ರತೀಕವಾಗಿದ್ದು ಆತನ ಜೀವನದ ಆದರ್ಶಗಳನ್ನು ಪಾಲಿಸುವುದು ರಾಮನವಮಿಯ ಮುಖ್ಯ ಉದ್ದೇಶವಾಗಿದೆ ಎಂದು ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು

ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀರಾಮ ಮಂದಿರದಲ್ಲಿ ಕಲಾಉತ್ಸವ ಟ್ರಸ್ಟ್ ಮೈಸೂರು ಹಾಗೂ ಶ್ರೀ ಮಹಾಜನ ಸಭಾ ಟ್ರಸ್ಟ್ ಶ್ರೀರಾಮ ಮಂದಿರ ವತಿಯಿಂದ ಶ್ರೀ ರಾಮನವಮಿ ಅಂಗವಾಗಿ ಆಯೋಜಿಸಿದ ಮಕ್ಕಳಿಗಾಗಿ ಶ್ರೀರಾಮ ಹಾಗೂ ಸೀತೆ ವೇಷಭೂಷಣ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ಅವರು
ಪ್ರಸ್ತುತ ಸಮಾಜದಲ್ಲಿ ಶಾಂತಿ ಒಗ್ಗಟ್ಟು ಉಳಿಯಲು ರಾಮರಾಜ್ಯದ ಕಲ್ಪನೆ ಅಗತ್ಯವಿದೆ ರಾಮನವಮಿ ದಿನ ಮಾತ್ರವಲ್ಲದೆ ನಿತ್ಯ ರಾಮನ ಜಪಿಸುವುದರಿಂದ ಬದುಕು ಹಸನಾಗಲಿದೆ, ಇದು ರಾಮನ ಜನ್ಮದಿನ ಮಾತ್ರವಾಗಿರದೆ ವ್ಯಕ್ತಿಯ ಜೀವನಕ್ಕೆ ಅಗತ್ಯವಿರುವ ಸತ್ಯ ಧರ್ಮದ ದಾರಿದೀಪವಾಗಿದೆ ಎಂದರು, ರಾಮನು ಮರ್ಯಾದೆ ಪುರುಷೋತ್ತಮ ಎಂಬ ಪದವಿಯನ್ನು ಪಡೆದಿದ್ದು ಅವನ ಜೀವನದ ಪ್ರತಿಯೊಂದು ಕ್ಷಣವು ನಿಯಮ ಶಿಸ್ತು ಮತ್ತು ಧರ್ಮದ ಅನುಸರಣೆ ಎಂಬ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ ಅವನು ರಾಜಕುಮಾರನಾಗಿದ್ದರೂ ತಂದೆಯ ಮಾತಿಗೆ ಗೌರವ ನೀಡಿ ಅರಣ್ಯ ವಾಸವನ್ನು ಸ್ವೀಕರಿಸಿದಿದ್ದು ಪತ್ನಿ ಸೀತೆಯನ್ನು ರಕ್ಷಿಸಲು ಅನೇಕ ಕಷ್ಟಗಳನ್ನು ಎದುರಿಸುತ್ತಿದ್ದು ಮತ್ತು ಕೊನೆಗೆ ರಾವಣನನ್ನು ಸಂಹರಿಸಿ ಧರ್ಮವನ್ನು ಸ್ಥಾಪಿಸಿದ್ದು ಇವೆಲ್ಲವೂ ಅವನ ಆದರ್ಶ ವ್ಯಕ್ತಿತ್ವದ ಉದಾಹರಣೆಗಳಾಗಿವೆ ಎಂದರು

ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ಮಕ್ಕಳು ರಾಮ ಸೀತೆ ವೇಷಧರಿಸಿ ಗಮನ ಸೆಳೆದರು
ಸ್ಪರ್ಧಿಸಿದ ಎಲ್ಲ ಮಕ್ಕಳಿಗೂ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ವಿತರಿಸಿ ನಂತರ ಪ್ರಸಾದ ವಿತರಿಸಲಾಯಿತು

ಇದೇ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕರಾದ ರಘುರಾಮ್ ವಾಜಪಾಯಿ, ಕಾಂಗ್ರೆಸ್ ಮುಖಂಡರಾದ ಎನ್ ಎಂ ನವೀನ್ ಕುಮಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ರಾಮ ಮಂದಿರದ ಮಾಧವ ರಾವ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಕಲ ಉತ್ಸವ ಟ್ರಸ್ಟ್ ಅಧ್ಯಕ್ಷ ಅಮಿತ್, ಜಿ ರಾಘವೇಂದ್ರ, ಜಗದೀಶ್, ಎಂ ಆರ್ ಬಾಲಕೃಷ್ಣ , ಟಿ ಎಸ್ ಅರುಣ್, ಚಕ್ರಪಾಣಿ, ನಿರೂಪಕ ಪುರುಷೋತ್ತಮ್, ವಿ ಎನ್ ಕೃಷ್ಣ, ಸುಚಿಂದ್ರ, ಎಸ್ ಎನ್ ರಾಜೇಶ್, ರಾಕೇಶ್, ದುರ್ಗಾ ಪ್ರಸಾದ್, ಶಿವು ಹಾಗೂ ಇನ್ನಿತರರು ಹಾಜರಿದ್ದರು

Related Posts

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!