ಜಮೀರ್–ಮಲ್ಲಿಕಾರ್ಜುನ ಸ್ನೇಹ ಗಟ್ಟಿ: ಪ್ರಚಾರಕ್ಕೆ ಬರುತ್ತಾರೆ ಎಂಬಿ ಪಾಟೀಲ್ ವಿಶ್ವಾಸ.

ಬೆಂಗಳೂರು: ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸ್ಟಾರ್ ಕ್ಯಾಂಪೇನರ್ ಪಟ್ಟಿಯ ಕೊನೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೆಸರು ಇರುವ ವಿಚಾರವಾಗಿ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿ, ‘ಜಮೀರ್ ಬಂದೇ ಬರ್ತಾರೆ. ಅವರು ಕೇರಳದಲ್ಲಿದ್ದಾರೆ, ನಾನು ಅಲ್ಲೇ ಹೋಗಬೇಕಿತ್ತು ಎಂದರು. ದಾವಣಗೆರೆ ಟಿಕೆಟ್ ವಿಚಾರವಾಗಿ ಜಮೀರ್ ಅವರಿಗೆ ಸಿಟ್ಟು ಇರಬಹುದು. ಸಮುದಾಯಕ್ಕೆ ಟಿಕೆಟ್ ಸಿಗಲಿಲ್ಲ ಅಂತ ಬೇಸರ ಇರಬಹುದು. ಎಲ್ಲಾ ಸಮುದಾಯಗಳಲ್ಲೂ ಇರುತ್ತದೆ. ನಾವು ಲಿಂಗಾಯತ ಸಮುದಾಯಕ್ಕೆ ಸಿಗಬೇಕು ಅಂತೇವೆ, ದಲಿತ ನಾಯಕರು ಅವರ ಸಮುದಾಯಕ್ಕೆ ಕೇಳ್ತಾರೆ. ಇದರಲ್ಲಿ ತಪ್ಪೇನಿದೆ ಎಂದು ಸಮರ್ಥಿಸಿಕೊಂಡರು.

ಸಚಿವ ಜಮೀರ್ ಅವರು ಅವರ ಸಮುದಾಯನ್ನು ಪ್ರತಿನಿಧಿಸುತ್ತಾರೆ. ಹಾಗಾಗಿ ಅವರು ಮುಸ್ಲಿಮರಿಗೆ ಟಿಕೆಟ್ ಕೆಳೋದ್ರಲ್ಲಿ ತಪ್ಪೇನಿಲ್ಲ. ಜಮೀರ್ ಹಾಗೂ ಮಲ್ಲಿಕಾರ್ಜುನ್ ಆತ್ಮೀಯ‌ ಸ್ನೇಹಿತರು. ಅವರು ಯಾವಾಗ ಒಟ್ಟಿಗೆ ಕಾಣ್ತಾರೋ‌ ಗೊತ್ತಾಗಲ್ಲ. ನಮಗೆ ಅವರ ಬಗ್ಗೆ ಗೊತ್ತು.ಇಬ್ಬರು ಒಳ್ಳೆ ಸ್ನೇಹಿತರು ಎಂದರು. ಹರಿದ ಬಟ್ಟೆ ತೇಪೆ ಹಾಕಬಹುದಷ್ಟೇ
ದಾವಣಗೆರೆ ದಕ್ಷಿಣದ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅಭ್ಯರ್ಥಿತನ ವಾಪಸ್ ಪಡೆದಿರಬಹುದು; ಹರಿದ ಬಟ್ಟೆಯನ್ನು ತೇಪೆ ಹಾಕಬಹುದೇ ಹೊರತು ಅದು ಹೊಸ ಬಟ್ಟೆ ಆಗುವುದಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಶ್ಲೇಷಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿ ಪ್ರಶ್ನೆಗೆ ಉತ್ತರಿಸಿದರು. ತುಂಡಾದ ಹಗ್ಗಕ್ಕೆ ಗಂಟು ಹಾಕಬಹುದೇ ಹೊರತು ಅದು ಹೊಸ ಹಗ್ಗ ಆಗುವುದಿಲ್ಲ ಎಂದರು. ಮುಸಲ್ಮಾನ ಬಂಧುಗಳೆಲ್ಲ ನಮಗೆ ಮತ ಹಾಕುತ್ತಾರೆಂದು ನಾನು ಹೇಳಲಾರೆ. ಯಾಕೆಂದರೆ ಕಾಂಗ್ರೆಸ್ಸಿನವರು ಅವರ ತಲೆಗೆ ಬಿಟ್ಟ ಹುಳಗಳು ಸತ್ತಿಲ್ಲ; ಅವು ಬದುಕಿವೆ ಎಂದು ನುಡಿದರು. ಅವರನ್ನು ದಾರಿ ತಪ್ಪಿಸಿ ನಿಮ್ಮ ಮತಬ್ಯಾಂಕ್ ಮಾಡಿದ್ದೀರಿ. ಅವರೆಲ್ಲ ವಿರೋಧ ಮಾಡಿದರೂ ದೇಶ ಆಳುತ್ತಿದ್ದೇವೆ. ಮುಸಲ್ಮಾನರು ಭಾರತದಲ್ಲಿ ಸುಭದ್ರವಾಗಿ ಬದುಕುತ್ತಿದ್ದಾರೆ ಎಂದು ತಿಳಿಸಿದರು.

ಕೇವಲ ಮುಸಲ್ಮಾನರಿರುವ ಪಾಕಿಸ್ತಾನ, ಬಾಂಗ್ಲಾದೇಶ, ಅಪಘಾನಿಸ್ತಾನದಲ್ಲಿ ಎಷ್ಟು ಸಮಸ್ಯೆಗಳಿವೆ ನೋಡಿ ಎಂದು ಕೇಳಿದರು. ಬಾಬಾ ಸಾಹೇಬ ಅಂಬೇಡ್ಕರರ ಸಂವಿಧಾನ ಎಲ್ಲ ರೀತಿಯ ರಕ್ಷಣೆಯನ್ನು ಅವರಿಗೂ ಕೊಟ್ಟಿದೆ. ಆದ್ದರಿಂದ ಅವರು ಸುಭದ್ರತೆಯಿಂದ ಬದುಕುತ್ತಿದ್ದಾರೆ ಎಂದು ತಿಳಿಸಿದರು. ಮನುವಾದ ಬದುಕಿರುವುದು ಕಾಂಗ್ರೆಸ್ಸಿನ ತಲೆಯಲ್ಲಿ ಮಾತ್ರ ಎಂದು ಟೀಕಿಸಿದರು. ಸರ್ವರಿಗೂ ಸಮಪಾಲು, ಸಮಬಾಳು ಕೊಡುವುದು ಬಿಜೆಪಿಯ ಕರ್ತವ್ಯ. ಅದನ್ನು ಮಾಡುತ್ತಿದ್ದೇವೆ ಎಂದರು. ಕಾಂಗ್ರೆಸ್ಸಿಗರೇ, ಬಿಜೆಪಿ ಗುಮ್ಮ ತೋರಿಸಿ ಎಷ್ಟು ದಿನ ನೀವು ಮುಸಲ್ಮಾನರನ್ನು ಇಟ್ಟುಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದರು. ಅವರಲ್ಲೂ ಯುವಕರು, ತಿಳಿದವರು ಇದ್ದು ಯೋಚನೆ ಮಾಡುತ್ತಾರೆ. ಕಾಂಗ್ರೆಸ್ ನಮಗೇನು ಮಾಡಿದೆ? ಪ್ರಧಾನಮಂತ್ರಿ ಮೋದಿಯವರು ನಮಗೇನಾದರೂ ಅನ್ಯಾಯ, ವಂಚನೆ ಮಾಡಿದ್ದಾರಾ ಎಂದು ಯೋಚಿಸುತ್ತಾರೆ. ಆ ಜನಾಂಗಗಳು ಯೋಚನೆ ಮಾಡಿ ಸ್ವಾಭಿಮಾನವನ್ನು ಉಳಿಸಿಕೊಳ್ಳಲಿ ಎಂದು ಕಿವಿಮಾತು ಹೇಳಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!