ಚೇಸ್ ಮಾಸ್ಟರ್ ಕಿಂಗ್ ಕೊಹ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಗೆ ಪಾಕ್ ದಾಂಡಿಗನ ವಿಶ್ವ ದಾಖಲೆ ಧೂಳಿಪಟ

Chase Master Records: ಟಿ20 ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯ ನಾಗಾಲೋಟ ಮುಂದುವರೆದಿದೆ. ಎಸ್​ಆರ್​ಹೆಚ್ ವಿರುದ್ಧ 69 ರನ್​ಗಳಿಸುವ ಮೂಲಕ ಕಿಂಗ್ ಕೊಹ್ಲಿ ಟಿ20 ರನ್ ಸರದಾರರ ಪಟ್ಟಿಯಲ್ಲಿ ಪಾಕ್ ದಾಂಡಿಗ ಶೊಯೆಬ್ ಮಲಿಕ್ ಅವರನ್ನು ಹಿಂದಿಕ್ಕಿದ್ದಾರೆ. ಅಷ್ಟೇ ಅಲ್ಲದೆ ಅತ್ಯಧಿಕ ರನ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಮೇಲೇರಿದ್ದಾರೆ.ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಅದು ಕೂಡ ಟಿ20 ರನ್​ ಸರದಾರರ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರುವ ಮೂಲಕ. ಅಂದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಲಿಸ್ಟ್​ನಲ್ಲಿ ಕಿಂಗ್ ಕೊಹ್ಲಿ ಒಂದು ಸ್ಥಾನ ಮೇಲೇರಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 38 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 69 ರನ್ ಬಾರಿಸಿ ಮಿಂಚಿದ್ದರು. ಈ 69 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಆರನೇ ಸ್ಥಾನದಲ್ಲಿ ಪಾಕಿಸ್ತಾನದ ಬ್ಯಾಟರ್ ಶೊಯೆಬ್ ಮಲಿಕ್ ಕಾಣಿಸಿಕೊಂಡಿದ್ದರು. ಇದೀಗ ಮಲಿಕ್ ಅವರನ್ನು ಹಿಂದಿಕ್ಕುವಲ್ಲಿ ಕೊಹ್ಲಿ ಯಶಸ್ವಿಯಾಗಿದ್ದಾರೆ.

 

ಶೊಯೆಬ್ ಮಲಿಕ್ ಟಿ20 ಕ್ರಿಕೆಟ್​ನಲ್ಲಿ ಈವರೆಗೆ 515 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 10665 ಎಸೆತಗಳನ್ನು ಎದುರಿಸಿರುವ ಅವರು ಒಟ್ಟು 13571 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್​ಗಳಿಸಿ ಪಾಕ್ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.ಇದೀಗ ಕೇವಲ 398 ಟಿ20 ಇನಿಂಗ್ಸ್​ಗಳಲ್ಲಿ ವಿರಾಟ್ ಕೊಹ್ಲಿ 13,612 ರನ್​ಗಳಿಸಿದ್ದಾರೆ. ಈ ಮೂಲಕ ಶೊಯೆಬ್ ಮಲಿಕ್ ಅವರನ್ನು ಹಿಂದಿಕ್ಕಿ ಕಿಂಗ್ ಕೊಹ್ಲಿ ಟಿ20 ರನ್ ಸರದಾರರ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೇರಿದ್ದಾರೆ. ಅಷ್ಟೇ ಅಲ್ಲದೆ ಟಿ20 ಇತಿಹಾಸದಲ್ಲೇ ಅತೀ ಹೆಚ್ಚು ರನ್​ಗಳಿಸಿದ ವಿಶ್ವ ದಾಖಲೆ ಬರೆಯಲು ಮುನ್ನುಗ್ಗುತ್ತಿದ್ದಾರೆ.

ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್​ಗಳಿಸಿದ ವಿಶ್ವ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 455 ಟಿ20 ಇನಿಂಗ್ಸ್​ಗಳ ಮೂಲಕ ಒಟ್ಟು 14562 ರನ್​ಗಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದೀಗ 13,612 ರನ್​ ಕಲೆಹಾಕಿರುವ ಕೊಹ್ಲಿ ಇನ್ನು 951 ರನ್​ಗಳಿಸಿದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

 

 

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!