
ನಂದಿನಿ ವೆಂಕಟಾದ್ರಿ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್ನಲ್ಲಿ ಯುವ ರೈತನೊಬ್ಬ ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ, ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ವಿಭಿನ್ನವಾಗಿ ಆಚರಿಸುವುದನ್ನು ಕಾಣಬಹುದು. ಹೊಲದಲ್ಲಿ ಹೂಕೋಸಿನ ರಾಶಿಯನ್ನು ಕಾಣಬಹುದು. ಮೂವರು ಮಹಿಳೆಯರು ಕೆಲಸದಲ್ಲಿ ತೊಡಗಿಕೊಂಡಿದ್ದು, ಯುವ ರೈತನೊಬ್ಬ ಹೂಕೋಸನ್ನು ಜೋಡಿಸಿ ರಾಮ, ಸೀತೆ, ಹನುಮಂತನ ಚಿತ್ರ ಬಿಡಿಸಿ ಅದರ ಪಕ್ಕ ಕುಳಿತಿರುವುದನ್ನು ನೀವು ನೋಡಬಹುದು.
ಮಾರ್ಚ್ 27 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ನಮ್ಮ ಭಕ್ತಿಯ ಭಾವನೆಯನ್ನು ವ್ಯಕ್ತಪಡಿಸಲು ಹಲವಾರು ಮಾರ್ಗಗಳಿವೆ, ಆದ್ದರಿಂದ, ಇದು ನೈಸರ್ಗಿಕ ಹೂವಿನ ಗೌರವವಾದ ಹೂಕೋಸು ಮೂಲಕ ಭಕ್ತಿಯನ್ನು ವ್ಯಕ್ತಪಡಿಸುವ ಅತ್ಯಂತ ವಿಶಿಷ್ಟ ಮಾರ್ಗವಾಗಿದೆ ಎಂದಿದ್ದಾರೆ. ಇನ್ನೊಬ್ಬರು, ಇದು ತುಂಬಾ ಸುಂದರ ಹಾಗೂ ಹೃದಯ ಸ್ಪರ್ಶಿಯಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಜೈ ಶ್ರೀರಾಮ್ ಎಂದು ಹೇಳಿದ್ದಾರೆ.





