ಹೂಕೋಸಿನಲ್ಲಿ ಮೂಡಿ ಬಂದ ರಾಮ, ಸೀತೆ, ಹನುಮಂತ;ಇದು ರೈತನ ವಿಭಿನ್ನ ರಾಮನವಮಿ ಸೆಲೆಬ್ರೇಶನ್

ಯುಗಾದಿ ನಂತರ ಬರುವ ಹಬ್ಬವೇ ರಾಮನವಮಿ. ಹಿಂದೂಗಳ ಪ್ರಮುಖ ಹಬ್ಬವಾದ ರಾಮನವಮಿಯನ್ನು ದೇಶದಾದ್ಯಂತ ಅದ್ದೂರಿಯಿಂದ ಆಚರಿಸಲಾಗಿದೆ. ಈ ಆದರೆ ಇಲ್ಲೊಬ್ಬ ಯುವ ರೈತ ವಿಭಿನ್ನವಾಗಿ ರಾಮನವಮಿ ಆಚರಿಸಿದ್ದಾನೆ. ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ ಹಾಗೂ ಹನುಮಂತ ಚಿತ್ರ ಬಿಡಿಸಿ ಹಬ್ಬವನ್ನು ಸಂಭ್ರಮಿಸಿದ್ದಾನೆ, ಈ ಕುರಿತಾದ ಸ್ಟೋರಿ ಇಲ್ಲಿದೆ. ಮರ್ಯಾದಾ ಪುರುಷ, ಪುರುಷೋತ್ತಮ ಭಗವಾನ್ ಶ್ರೀ ರಾಮನ ಜನ್ಮದಿನವನ್ನು ದೇಶದೆಲ್ಲೆಡೆ ಶ್ರದ್ಧಾಭಕ್ರಿಯಿಂದ ಆಚರಿಸಲಾಗಿದೆ. ಹಿಂದೂಗಳಿಗೆ ಯುಗಾದಿ ವರುಷದ ಮೊದಲ ಹಬ್ಬವಾದರೆ, ತದನಂತರ ಬರುವುದೇ ಈ ರಾಮನವಮಿ. ಈ ಹಬ್ಬದಂದು ಕೋಟ್ಯಾಂತರ ಭಕ್ತರು ರಾಮನನ್ನು ಪೂಜಿಸಿ, ಆರಾಧಿಸುತ್ತಾರೆ. ಆದರೆ ಇಲ್ಲೊಬ್ಬ ರೈತನು ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ಸಂಭ್ರಮಿಸಿದ್ದಾನೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.

ನಂದಿನಿ ವೆಂಕಟಾದ್ರಿ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಯುವ ರೈತನೊಬ್ಬ ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ, ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ವಿಭಿನ್ನವಾಗಿ ಆಚರಿಸುವುದನ್ನು ಕಾಣಬಹುದು. ಹೊಲದಲ್ಲಿ ಹೂಕೋಸಿನ ರಾಶಿಯನ್ನು ಕಾಣಬಹುದು. ಮೂವರು ಮಹಿಳೆಯರು ಕೆಲಸದಲ್ಲಿ ತೊಡಗಿಕೊಂಡಿದ್ದು, ಯುವ ರೈತನೊಬ್ಬ ಹೂಕೋಸನ್ನು ಜೋಡಿಸಿ ರಾಮ, ಸೀತೆ, ಹನುಮಂತನ ಚಿತ್ರ ಬಿಡಿಸಿ ಅದರ ಪಕ್ಕ ಕುಳಿತಿರುವುದನ್ನು ನೀವು ನೋಡಬಹುದು.

ಮಾರ್ಚ್ 27 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ನಮ್ಮ ಭಕ್ತಿಯ ಭಾವನೆಯನ್ನು ವ್ಯಕ್ತಪಡಿಸಲು ಹಲವಾರು ಮಾರ್ಗಗಳಿವೆ, ಆದ್ದರಿಂದ, ಇದು ನೈಸರ್ಗಿಕ ಹೂವಿನ ಗೌರವವಾದ ಹೂಕೋಸು ಮೂಲಕ ಭಕ್ತಿಯನ್ನು ವ್ಯಕ್ತಪಡಿಸುವ ಅತ್ಯಂತ ವಿಶಿಷ್ಟ ಮಾರ್ಗವಾಗಿದೆ ಎಂದಿದ್ದಾರೆ. ಇನ್ನೊಬ್ಬರು, ಇದು ತುಂಬಾ ಸುಂದರ ಹಾಗೂ ಹೃದಯ ಸ್ಪರ್ಶಿಯಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಜೈ ಶ್ರೀರಾಮ್ ಎಂದು ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!