ಹೊಸ ದಾಖಲೆಯೊಂದಿಗೆ ಉಳಿದವರು ಕಂಡಂತೆ ಸಿನಿಮಾಗೆ 12 ವರ್ಷ; ನೆನಪು ಹಂಚಿಕೊಂಡ ರಕ್ಷಿತ್ ಶೆಟ್ಟಿ

Ulidavaru Kandanathe: ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ರಕ್ಷಿತ್ ಶೆಟ್ಟಿಯ ನಿರ್ದೇಶನ ಪ್ರತಿಭೆಯನ್ನು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ ಅದು. ‘ಉಳಿದವರು ಕಂಡಂತೆ’ ಬಿಡುಗಡೆ ಆಗಿ ಇಂದಿಗೆ ಬರೋಬ್ಬರಿ 12 ವರ್ಷ. ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು, ಸಿನಿಮಾವನ್ನು ನೆನಪು ಮಾಡಿಕೊಳ್ಳಲು ಏನೇನೋ ಹೊಸ ಕಾರಣಗಳು ಸಿಗುತ್ತಲೇ ಇರುತ್ತವೆ ಎಂದಿದ್ದಾರೆ. ಜೊತೆಗೆ ಒಂದು ಲಿಂಕ್ ಸಹ ಹಂಚಿಕೊಂಡಿದ್ದಾರೆ.

‘ಉಳಿದವರು ಕಂಡಂತೆ’ ರಕ್ಷಿತ್ ಶೆಟ್ಟಿಯ ಮೊದಲ ನಿರ್ದೇಶನದ ಸಿನಿಮಾ. ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ರಕ್ಷಿತ್ ಶೆಟ್ಟಿಯ ನಿರ್ದೇಶನ ಪ್ರತಿಭೆಯನ್ನು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ ಅದು. ‘ಉಳಿದವರು ಕಂಡಂತೆ’ ಬಿಡುಗಡೆ ಆಗಿ ಬರೋಬ್ಬರಿ 12 ವರ್ಷ.
‘ಉಳಿದವರು ಕಂಡಂತೆ’ ಸಿನಿಮಾ 2014 ರ ಮಾರ್ಚ್ 28ಕ್ಕೆ ಬಿಡುಗಡೆ ಆಗಿತ್ತು. ಲೈವ್ ಸೌಂಡ್,ಭಿನ್ನ ರೀತಿಯ ಸ್ಟೋರಿ ಟೆಲ್ಲಿಂಗ್ ಸೇರಿದಂತೆ ಹಲವು ಪ್ರಯೋಗಗಳನ್ನು ರಕ್ಷಿತ್ ಶೆಟ್ಟಿ ಮಾಡಿದ್ದರು. ಬಹುತೇಕ ವಿಮರ್ಶಕರು ಸಿನಿಮಾ ಚೆನ್ನಾಗಿಲ್ಲ ಎಂದೇ ಬರೆದರು. ಪ್ರೇಕ್ಷಕರಿಗೂ ಸಹ ಸಿನಿಮಾ ಆರಂಭದಲ್ಲಿ ಅರ್ಥವಾಗಲಿಲ್ಲ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಎನಿಸಿಕೊಂಡಿತು. ಆದರೆ ಸಿನಿಮಾಕ್ಕೆ ಒಂದು ಕಲ್ಟ್ ಅಭಿಮಾನಿ ವರ್ಗ ಹುಟ್ಟಿಕೊಳ್ತು, ಸಿನಿಮಾವನ್ನು ಪೈರಸಿ ಡೌನ್​​ಲೋಡ್ ಮಾಡಿ ಹೆಚ್ಚು ಮಂದಿ ನೋಡಿದರು. ಹಾಗೆ ನೋಡುತ್ತಾ-ನೋಡುತ್ತಾ ಸಿನಿಮಾ ಕಲ್ಟ್ ಕ್ಲಾಸಿಕ್ ಎನಿಸಿಕೊಂಡಿತು. ಇದೀಗ 21ನೇ ಶತಮಾನದ ಈ ವರೆಗಿನ ಅತ್ಯುತ್ತಮ 25 ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

ಜನಪ್ರಿಯ ಸಿನಿಮಾ ಮ್ಯಾಗಜೈನ್ ‘ದಿ ಹಾಲಿವುಡ್ ರಿಪೋರ್ಟರ್’ 2000ರ ಶತಕದಲ್ಲಿ ಅಥವಾ 21ನೇ ಶತಮಾನದ ಈ ವರೆಗಿನ ಅತ್ಯುತ್ತಮ 25 ಭಾರತೀಯ ಸಿನಿಮಾಗಳ ಪಟ್ಟಿ ಪ್ರಕಟಿಸಿದ್ದು, ಆ ಪಟ್ಟಿಯಲ್ಲಿ ‘ಉಳಿದವರು ಕಂಡಂತೆ’ ಸಿನಿಮಾ ಸ್ಥಾನ ಪಡೆದುಕೊಂಡಿದೆ. ‘ಲಗಾನ್’, ‘ಗ್ಯಾಂಗ್ಸ್ ಆಫ್ ವಸೇಪುರ್’ ಸೇರಿದಂತೆ ಹಲವು ಅತ್ಯುತ್ತಮ ಸಿನಿಮಾಗಳಿರುವ ಪಟ್ಟಿಯಲ್ಲಿ ‘ಉಳಿದವರು ಕಂಡಂತೆ’ ಸಹ ಸ್ಥಾನ ಪಡೆದುಕೊಂಡಿರುವುದು ಮಾತ್ರವೇ ಅಲ್ಲದೆ, ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಏಕೈಕ ಕನ್ನಡ ಸಿನಿಮಾ ಇದಾಗಿದೆ.

ಈ ಪಟ್ಟಿಯಲ್ಲಿ ಮಲಯಾಳಂನ ‘ಕುಂಬಳಂಗಿ ನೈಟ್ಸ್’, ‘ಮಹೇಶಿಂಟೆ ಪ್ರತಿಕಾರಂ’, ‘ಅಂಗಮಲೈ ಡೈರೀಸ್’, ‘ದೃಶ್ಯಂ’, ‘ದಿ ಗ್ರೇಟ್ ಇಂಡಿಯನ್ ಕಿಚನ್’ ಇನ್ನೂ ಹಲವು ಸಿನಿಮಾಗಳಿವೆ. ಹಿಂದಿಯ ‘ಲಗಾನ್’, ‘ಗ್ಯಾಂಗ್ಸ್ ಆಫ್ ವಸೇಪುರ್’, ‘ಚಕ್ ದೇ ಇಂಡಿಯಾ’, ‘ದಿಲ್ ಚಾಹ್ತಾ ಹೈ’, ‘ಓಂಕಾರ’ ಇನ್ನೂ ಹಲವು ಸಿನಿಮಾಗಳಿವೆ. ತಮಿಳಿನ ‘ಅಲೈಪಾಯುತೆ’, ‘ಅನ್ಬೆ ಶಿವಂ’, ‘ಆಡುಕುಳಂ’, ‘ಪರಿಯೇರುಂ ಪೆರುಮಾಲ್’ ಇನ್ನೂ ಹಲವು ಸಿನಿಮಾಗಳಿವೆ. ಮರಾಠಿಯ ‘ಕೋರ್ಟ್’, ‘ಸೈರಾಟ್’ ಇನ್ನೂ ಕೆಲ ಸಿನಿಮಾಗಳಿವೆ. ತೆಲುಗಿನ ‘ಈಗ’ ಇದೆ. ಕನ್ನಡದ ‘ಉಳಿದವರು ಕಂಡಂತೆ’ ಸಿನಿಮಾ ಇದೆ. ‘ಉಳಿದವರು ಕಂಡಂತೆ’ ಹೊರತಾಗಿ ಇನ್ಯಾವ ಕನ್ನಡ ಸಿನಿಮಾ ಸಹ ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

ರಕ್ಷಿತ್ ಶೆಟ್ಟಿ ಅವರು ‘ಉಳಿದವರು ಕಂಡಂತೆ’ ಸಿನಿಮಾದ ಸ್ಪಿನ್ ಆಫ್ ಆಗಿರುವ ‘ರಿಚರ್ಡ್ ಆಂಟೊನಿ’ ಸಿನಿಮಾ ಘೋಷಿಸಿದ್ದು, ಸಿನಿಮಾ ಘೋಷಿಸಿಯೇ ವರ್ಷಗಳು ಕಳೆದಿವೆ. ಇತ್ತೀಚೆಗಷ್ಟೆ ಮಾಧ್ಯಮಗಳೊಟ್ಟಿಗೆ ಮಾತನಾಡಿ, ‘ರಿಚರ್ಡ್ ಆಂಟೊನಿ’ ಸಿನಿಮಾದ ಚಿತ್ರೀಕರಣ ಶುರು ಮಾಡಿರುವುದಾಗಿ ಹೇಳಿದ್ದರು. ಮುಂದೇನಾಗುತ್ತದೆ ನೋಡಬೇಕಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು