ಮಸೂದ್‌ ಅಜರ್‌ಗೆ ಮತ್ತೊಂದು ಆ*ತ: ಸಹೋದರನ ನಿಗೂಢ ಸಾ*.

ಇಸ್ಲಾಮಾಬಾದ್: ಭಾರತದ ‘ಆಪರೇಷನ್‌ ಸಿಂಧೂರ’ ಸೇನಾ ಕಾರ್ಯಾಚರಣೆಯಲ್ಲಿ ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆ ಮುಖ್ಯಸ್ಥ ಮೌಲಾನಾ ಮಸೂದ್‌ ಅಜರ್‌ ಕುಟುಂಬದ 14 ಸದಸ್ಯರು ಸಾ*ನ್ನಪ್ಪಿದ್ದರು. ಆ ಆಘಾತದಿಂದ ಇನ್ನೂ ಹೊರಬರದಿದ್ದ ಜೈಶ್‌ ಮುಖ್ಯಸ್ಥನಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ. ಪಾಕಿಸ್ತಾನದ ಬಹವಾಲ್‌ಪುರ್‌ನಲ್ಲಿ ಮಸೂದ್‌ ಅಜರ್‌ ಸಹೋದರ ಮೊಹಮ್ಮದ್‌ ತಾಹಿರ್‌ ಅನ್ವರ್‌ ನಿಗೂಢವಾಗಿ ಸಾ*ನ್ನಪ್ಪಿದ್ದಾನೆ. ಆದರೆ ಸಾ*ನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಬಹವಾಲ್‌ಪುರ್‌ ಜೈಶ್‌-ಎ-ಮೊಹಮ್ಮದ್‌ ಉಗ್ರರ ಪ್ರಮುಖ ಕೇಂದ್ರವಾಗಿದ್ದು, ಇದೇ ಊರಿನಲ್ಲಿ ಅನ್ವರ್‌ ಸಾ*ನ್ನಪ್ಪಿದ್ದಾನೆ. ಈ ಬಗ್ಗೆ ಮಾಹಿತಿ ಜೈಶ್‌ ಸಂಘಟನೆಯ ಅಧಿಕೃತ ಟೆಲಿಗ್ರಾಮ್‌ ಚಾನೆಲ್‌ಗಳಲ್ಲಿ ಪ್ರಕಟವಾಗಿದೆ. ಮಾ.30ರ ತಡರಾತ್ರಿ ಬಹವಾಲ್‌ಪುರ್‌ನ ಜಾಮಿಯಾ ಉಸ್ಮಾನ್-ಒ-ಅಲಿ‌ನಲ್ಲಿ ಅಂತ್ಯಕ್ರಿಯೆ ನೆರವೇರಿದರೂ, ಅದರಲ್ಲಿ ಮಸೂದ್‌ ಅಜರ್‌ ಭಾಗವಹಿಸಿಲ್ಲ ಎಂಬುದು ಗಮನಾರ್ಹವಾಗಿದೆ.

ಅನ್ವರ್‌ ಸಾ* ಹೇಗೆ ಸಂಭವಿಸಿತು ಎಂಬುದು ಇನ್ನೂ ನಿಗೂಢವಾಗಿದ್ದು, ಯಾವುದೇ ಅನಾರೋಗ್ಯದ ಪುರಾವೆಗಳೂ ಇಲ್ಲ. ಹೀಗಾಗಿ ದಿಢೀರ್‌ ಸಾ*ಮತ್ತು ಅಂತ್ಯಕ್ರಿಯೆಗೆ ಅಜರ್‌ ಗೈರಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮೊಹಮ್ಮದ್‌ ತಾಹಿರ್‌ ಅನ್ವರ್‌ ಜೈಶ್‌-ಎ-ಮೊಹಮ್ಮದ್‌ ಸಂಘಟನೆಯ ಪ್ರಮುಖ ವ್ಯಕ್ತಿಯಾಗಿದ್ದು, ಸಶಸ್ತ್ರ ಪಡೆಗಳ ಕಮಾಂಡರ್‌ ಆಗಿಯೂ ಕಾರ್ಯನಿರ್ವಹಿಸಿದ್ದ. ಅಲ್ಲದೆ ಬಹವಾಲ್‌ಪುರ್‌ನ ‘ಮರ್ಕಝ್ ಉಸ್ಮಾನ್-ಒ-ಅಲಿ’ ತರಬೇತಿ ಕೇಂದ್ರದ ಮುಖ್ಯಸ್ಥನಾಗಿದ್ದನು. ಉಗ್ರರಿಗೆ ಶಸ್ತ್ರಾಸ್ತ್ರ ಪೂರೈಕೆ ವ್ಯವಸ್ಥೆಯನ್ನೂ ನೋಡಿಕೊಳ್ಳುತ್ತಿದ್ದ ಎನ್ನಲಾಗಿದೆ.

ಈಗಾಗಲೇ ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆಯಲ್ಲಿ ಮಸೂದ್‌ ಅಜರ್‌ ಮತ್ತೊಬ್ಬ ಸಹೋದರ ಅಬ್ದುಲ್‌ ರೌಫ್‌ ಅಜರ್‌ ಹತ್ಯೆಯಾಗಿದ್ದು, ಇದೀಗ ಮತ್ತೋರ್ವ ಸಹೋದರನನ್ನು ಕಳೆದುಕೊಂಡಿದ್ದಾನೆ. ಒಟ್ಟಿನಲ್ಲಿ, ಜೈಶ್‌ ಮುಖ್ಯಸ್ಥನ ಕುಟುಂಬಕ್ಕೆ ಆಘಾತಗಳ ಸರಮಾಲೆ ಮುಂದುವರಿದಂತಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!