ಕಬ್ಬನ್ ಪಾರ್ಕ್​​ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ *ತ್ಮಹತ್ಯೆ!

 

ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಗುರುವಾರದಿಂದ ಕಾಣೆಯಾಗಿದ್ದ ಸುರೇಶ್ ಕುರಿತು ಹೆಚ್‌ಎಸ್‌ಆರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು ಎನ್ನಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲವಾದ್ದರಿಂದ ತನಿಖೆ ಮುಂದುವರೆಸಿದ್ದಾರೆ.
ನಗರದ ಕಬ್ಬನ್ ಪಾರ್ಕ್​ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂದು ತಿಳಿದು ಬಂದಿಲ್ಲ. ಸಧ್ಯಕ್ಕೆ ಕಬ್ಬನ್ ಪಾರ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಹಿಂದಿನ ದಿನವೇ ಕಾಣೆಯಾಗಿದ್ದ ವ್ಯಕ್ತಿ ಗುರುವಾರದಿಂದಲೇ ಕಾಣೆಯಾಗಿದ್ದ ಕಬ್ಬನ್ ಪೇಟೆ ಸುರೇಶ್, ಮನೆಗೆ ಮರಳಿರಲಿಲ್ಲ. ಈ ಬಗ್ಗೆ ಹೆಚ್​ಎಸ್ಆರ್ ಪೊಲೀಸ್ ಠಾಣೆಗೆ ಆತನ ಕುಟುಂಬಸ್ಥರು ದೂರು ನೀಡಿದ್ದರು. ಇಂದು ಬೆಳಗ್ಗೆ ಪಾರ್ಕ್‌ನ ಮರೊಂದಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಕಬ್ಬನ್ ಪಾರ್ಕ್​ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೃತನ ಜೇಬಿನಲ್ಲಿ ಐಡಿ ಕಾರ್ಡ್​ ಲಭಿಸಿದ್ದು, ಆತ ಬೆಂಗಳೂರಿನ ಎಸ್​ಪಿ ರೋಡ್​ನಲ್ಲಿರುವ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಡೆತ್​ನೋಟ್ ಸಿಕ್ಕಿಲ್ಲ,ಐಡಿ ಕಾರ್ಡ್​ ಹೊರತುಪಡಿಸಿ ಮೃತನ ಬಳಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಯಾವುದೇ ಡೆತ್​ನೋಟ್ ಲಭಿಸಿಲ್ಲವೆಂದು ಪೊಲೀಸರು ಹೇಳಿದ್ದಾರೆ. ನಂತರ ಆತನ ಕುಟುಂಬಕ್ಕೆ ಮಾಹಿತಿ ತಿಳಿಸಿದ ಅಧಿಕಾರಿಗಳು, ಘಟನೆ ಸಂಬಂಧ ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!