ಲಾಕ್ ಅಪ್ ಡೆತ್ ಆದ ತಂದೆ-ಮಗ ತಮಿಳ್ಳಾಡಲ್ಲಿ 9 ಪೊಲೀಸರಿಗೆ ಮರಣದಂಡನೆ!

ಮಧುರೈ: ಲಾಕ್ ಅಪ್ ಡೆತ್ ಪ್ರಕರಣವೊಂದ ರಲ್ಲಿ 9 ಪೊಲೀಸರಿಗೆ ಮರಣದಂಡನೆ ವಿಧಿಸಿ ಮಧುರೈ ಜಿಲ್ಲೆಯ ನ್ಯಾಯಾಲಯ ಆದೇಶ ಪ್ರಕಟಿಸಿದೆ.

2020ರ ಜೂನ್ 19ರಂದು, ಲಾಕ್‌ಡೌನ್ ಸಮಯದಲ್ಲಿ ಅಂಗಡಿ ನಿಗದಿತ ಸಮಯದ ನಂತರವೂ ತೆರೆದಿದ್ದಾರೆ ಎಂಬ ಆರೋಪದ ಮೇಲೆ, ಮೊಬೈಲ್ ಅಂಗಡಿ ನಡೆಸುತ್ತಿದ್ದ ಜಯ ರಾಜ್ ಮತ್ತು ಅವರ ಮಗ ಬೆನಿಕ್ಸ್ ಅವರನ್ನು ಬಂಧಿಸಲಾಗಿತ್ತು ನಂತರ ಈ ಆರೋಪ ಸುಳ್ಳು ಎಂದು ಹೇಳಲಾಗಿತ್ತು. ಆದರೆ, ತೂತುಕೂಡಿ ಜಿಲ್ಲೆಯ ವ್ಯಾಪಾರಿ ಪಿ. ಜಯರಾಜ್ ಮತ್ತು ಅವರ ಮಗ ಜೆ ಬೆನಿಕ್ಸ ಅವರು ಕಸ್ಟಡಿಯಲ್ಲಿ ಮೃತಪಟ್ಟಿದ್ದರು.

ಆರು ವರ್ಷಗಳ ಹಿಂದೆ ನಡೆದಿದ್ದ ಈ ಘಟನೆಗೆ ದೇಶ ವ್ಯಾಪಿ ಆಕ್ರೋಶ ವ್ಯಕ್ತವಾಗಿತ್ತು. ಈ ಪ್ರಕರಣವನ್ನು ನ್ಯಾಯಾಲಯ, ಅಧಿಕಾರದ ದುರುಪಯೋಗದ ಸ್ಪಷ್ಟ ಉದಾಹರಣೆ ಎಂದು ಹೇಳಿದೆ. ತಮಿಳುನಾಡಿನಲ್ಲಿ ಅನೇಕ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳು ಇದ್ದಾರೆ. ಈ ತೀರ್ಪು ಪೊಲೀಸರಲ್ಲಿ ಭಯ ಹುಟ್ಟಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ತಂದೆ ಮತ್ತು ಮಗನನ್ನು ಬಟ್ಟೆ ಬಿಚ್ಚಿಸಿ ಕ್ರೂರವಾಗಿ ಹಲ್ಲೆ ಮಾಡ ಲಾಗಿತ್ತು. ಅದನ್ನು ಓದಿದರೆ ಹೃದಯ ನಡುಗು ತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

2020ರ ಜೂನ್ 19ರಂದು ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಸತಂಕುಳಂ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ, ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಕೆಲವೇ ದಿನಗಳಲ್ಲಿ ಇಬ್ಬರೂ ಮೃತಪಟ್ಟರು. ಬಂಧಿತರ ಸಂಬಂಧಿಕರು, ಪೊಲೀಸ್ ಠಾಣೆಯಲ್ಲಿ ಇಡೀ ರಾತ್ರಿ ಹಲ್ಲೆ ನಡೆಸಲಾಗಿದೆ. ಎಂದು ಆರೋಪಿಸಿ, ಗುದದ್ವಾರದಿಂದ ರಕ್ತಸ್ರಾವ ಸಂಭವಿಸಿದ್ದೂ ಸೇರಿದಂತೆ ಗಂಭೀರ ದೈಹಿಕ ಹಿಂಸೆಯ ಗುರುತುಗಳನ್ನು ಉಲ್ಲೇಖಿಸಿದ್ದರು.

ಮದ್ರಾಸ್ ಹೈಕೋರ್ಟ್ ನಿರ್ದೇಶನದ ಮೇರೆಗೆ, ರಾಜ್ಯದ ಸಿಬಿ-ಸಿಐಡಿಯಿಂದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ವಶಕ್ಕೆ ಪಡೆದು, ಈ ಪ್ರಕರಣದಲ್ಲಿ 10 ಮಂದಿ ಪೊಲೀಸರನ್ನು ಬಂಧಿಸಿತು. ಬಂಧಿತರಲ್ಲಿ ಒಬ್ಬ ಇನ್ಸ್‌ಪೆಕ್ಟರ್, ಇಬ್ಬರು ಉಪನಿರೀಕ್ಷಕರು ಹಾಗೂ ಹಲ ವಾರು ಕಾನ್ಸ್‌ಟೇಬಲ್‌ಗಳು ಸೇರಿದ್ದರು. ಅದ ರಲ್ಲಿ ಒಬ್ಬರು ವಿಚಾರಣೆ ವೇಳೆ ಅಸುನೀಗಿದ್ದರು. ನಂತರ ಸಿಬಿಐ ಆರೋಪಿಗಳ ವಿರುದ್ಧ ಕೊಲೆ ಆರೋಪಗಳನ್ನು ದಾಖಲಿಸಿತು.

ತನಿಖೆಯ ವೇಳೆ ಮಹಿಳಾ ಕಾನ್ಸ್‌ಟೇಬಲ್
ಒಬ್ಬರ ಹೇಳಿಕೆ ಪ್ರಮುಖ ತಿರುವು ತಂದು ಕೊಟ್ಟಿತು. ಅವರು, ತಂದೆ-ಮಗನ ಮೇಲೆ ಇಡೀ ರಾತ್ರಿ ಹಲ್ಲೆ ನಡೆದಿದ್ದು, ಠಾಣೆಯ ಮೇಜುಗಳು ಮತ್ತು ಲಾಠಿಗಳ ಮೇಲೆ ರಕ್ತದ ಕಲೆಗಳು ಕಂಡುಬಂದಿದ್ದವು ಎಂದು ತನಿಖಾಧಿಕಾರಿಗಳಿಗೆ ಹೇಳಿದ ರೆಂದು ವರದಿಯಾಗಿದೆ. ಸತಂಕುಳಂ ಪೊಲೀಸ್‌ ಠಾಣೆಯ ಸಿಸಿಟಿವಿ ದೃಶ್ಯಗಳು ಪ್ರತಿದಿನ ಸ್ವಯಂ ಚಾಲಿತವಾಗಿ ಅಳಿಸಿ ಹೋಗುವಂತೆ ವ್ಯವಸ್ಥೆ ಮಾಡಲಾಗಿದ್ದ ರಿಂದ, ಅವುಗಳನ್ನು ಸಂರಕ್ಷಿ ಸದೇ ಇದ್ದದ್ದು ತನಿಖೆಗೆ ದೊಡ್ಡ ಸವಾಲಾ ಯಿತು. ಐದು ವರ್ಷಕ್ಕಿಂತ ಹೆಚ್ಚು ಕಾಲ ನಡೆದ ವಿಚಾರಣೆಯಲ್ಲಿ 100 ಕ್ಕೂ ಹೆಚ್ಚು ಸಾಕ್ಷಿದಾರರನ್ನು ಪರೀಕ್ಷಿಸಲಾಯಿತು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು