ಲಾಕ್ ಅಪ್ ಡೆತ್ ಆದ ತಂದೆ-ಮಗ ತಮಿಳ್ಳಾಡಲ್ಲಿ 9 ಪೊಲೀಸರಿಗೆ ಮರಣದಂಡನೆ!

ಮಧುರೈ: ಲಾಕ್ ಅಪ್ ಡೆತ್ ಪ್ರಕರಣವೊಂದ ರಲ್ಲಿ 9 ಪೊಲೀಸರಿಗೆ ಮರಣದಂಡನೆ ವಿಧಿಸಿ ಮಧುರೈ ಜಿಲ್ಲೆಯ ನ್ಯಾಯಾಲಯ ಆದೇಶ ಪ್ರಕಟಿಸಿದೆ.

2020ರ ಜೂನ್ 19ರಂದು, ಲಾಕ್‌ಡೌನ್ ಸಮಯದಲ್ಲಿ ಅಂಗಡಿ ನಿಗದಿತ ಸಮಯದ ನಂತರವೂ ತೆರೆದಿದ್ದಾರೆ ಎಂಬ ಆರೋಪದ ಮೇಲೆ, ಮೊಬೈಲ್ ಅಂಗಡಿ ನಡೆಸುತ್ತಿದ್ದ ಜಯ ರಾಜ್ ಮತ್ತು ಅವರ ಮಗ ಬೆನಿಕ್ಸ್ ಅವರನ್ನು ಬಂಧಿಸಲಾಗಿತ್ತು ನಂತರ ಈ ಆರೋಪ ಸುಳ್ಳು ಎಂದು ಹೇಳಲಾಗಿತ್ತು. ಆದರೆ, ತೂತುಕೂಡಿ ಜಿಲ್ಲೆಯ ವ್ಯಾಪಾರಿ ಪಿ. ಜಯರಾಜ್ ಮತ್ತು ಅವರ ಮಗ ಜೆ ಬೆನಿಕ್ಸ ಅವರು ಕಸ್ಟಡಿಯಲ್ಲಿ ಮೃತಪಟ್ಟಿದ್ದರು.

ಆರು ವರ್ಷಗಳ ಹಿಂದೆ ನಡೆದಿದ್ದ ಈ ಘಟನೆಗೆ ದೇಶ ವ್ಯಾಪಿ ಆಕ್ರೋಶ ವ್ಯಕ್ತವಾಗಿತ್ತು. ಈ ಪ್ರಕರಣವನ್ನು ನ್ಯಾಯಾಲಯ, ಅಧಿಕಾರದ ದುರುಪಯೋಗದ ಸ್ಪಷ್ಟ ಉದಾಹರಣೆ ಎಂದು ಹೇಳಿದೆ. ತಮಿಳುನಾಡಿನಲ್ಲಿ ಅನೇಕ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳು ಇದ್ದಾರೆ. ಈ ತೀರ್ಪು ಪೊಲೀಸರಲ್ಲಿ ಭಯ ಹುಟ್ಟಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ತಂದೆ ಮತ್ತು ಮಗನನ್ನು ಬಟ್ಟೆ ಬಿಚ್ಚಿಸಿ ಕ್ರೂರವಾಗಿ ಹಲ್ಲೆ ಮಾಡ ಲಾಗಿತ್ತು. ಅದನ್ನು ಓದಿದರೆ ಹೃದಯ ನಡುಗು ತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

2020ರ ಜೂನ್ 19ರಂದು ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಸತಂಕುಳಂ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ, ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಕೆಲವೇ ದಿನಗಳಲ್ಲಿ ಇಬ್ಬರೂ ಮೃತಪಟ್ಟರು. ಬಂಧಿತರ ಸಂಬಂಧಿಕರು, ಪೊಲೀಸ್ ಠಾಣೆಯಲ್ಲಿ ಇಡೀ ರಾತ್ರಿ ಹಲ್ಲೆ ನಡೆಸಲಾಗಿದೆ. ಎಂದು ಆರೋಪಿಸಿ, ಗುದದ್ವಾರದಿಂದ ರಕ್ತಸ್ರಾವ ಸಂಭವಿಸಿದ್ದೂ ಸೇರಿದಂತೆ ಗಂಭೀರ ದೈಹಿಕ ಹಿಂಸೆಯ ಗುರುತುಗಳನ್ನು ಉಲ್ಲೇಖಿಸಿದ್ದರು.

ಮದ್ರಾಸ್ ಹೈಕೋರ್ಟ್ ನಿರ್ದೇಶನದ ಮೇರೆಗೆ, ರಾಜ್ಯದ ಸಿಬಿ-ಸಿಐಡಿಯಿಂದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ವಶಕ್ಕೆ ಪಡೆದು, ಈ ಪ್ರಕರಣದಲ್ಲಿ 10 ಮಂದಿ ಪೊಲೀಸರನ್ನು ಬಂಧಿಸಿತು. ಬಂಧಿತರಲ್ಲಿ ಒಬ್ಬ ಇನ್ಸ್‌ಪೆಕ್ಟರ್, ಇಬ್ಬರು ಉಪನಿರೀಕ್ಷಕರು ಹಾಗೂ ಹಲ ವಾರು ಕಾನ್ಸ್‌ಟೇಬಲ್‌ಗಳು ಸೇರಿದ್ದರು. ಅದ ರಲ್ಲಿ ಒಬ್ಬರು ವಿಚಾರಣೆ ವೇಳೆ ಅಸುನೀಗಿದ್ದರು. ನಂತರ ಸಿಬಿಐ ಆರೋಪಿಗಳ ವಿರುದ್ಧ ಕೊಲೆ ಆರೋಪಗಳನ್ನು ದಾಖಲಿಸಿತು.

ತನಿಖೆಯ ವೇಳೆ ಮಹಿಳಾ ಕಾನ್ಸ್‌ಟೇಬಲ್
ಒಬ್ಬರ ಹೇಳಿಕೆ ಪ್ರಮುಖ ತಿರುವು ತಂದು ಕೊಟ್ಟಿತು. ಅವರು, ತಂದೆ-ಮಗನ ಮೇಲೆ ಇಡೀ ರಾತ್ರಿ ಹಲ್ಲೆ ನಡೆದಿದ್ದು, ಠಾಣೆಯ ಮೇಜುಗಳು ಮತ್ತು ಲಾಠಿಗಳ ಮೇಲೆ ರಕ್ತದ ಕಲೆಗಳು ಕಂಡುಬಂದಿದ್ದವು ಎಂದು ತನಿಖಾಧಿಕಾರಿಗಳಿಗೆ ಹೇಳಿದ ರೆಂದು ವರದಿಯಾಗಿದೆ. ಸತಂಕುಳಂ ಪೊಲೀಸ್‌ ಠಾಣೆಯ ಸಿಸಿಟಿವಿ ದೃಶ್ಯಗಳು ಪ್ರತಿದಿನ ಸ್ವಯಂ ಚಾಲಿತವಾಗಿ ಅಳಿಸಿ ಹೋಗುವಂತೆ ವ್ಯವಸ್ಥೆ ಮಾಡಲಾಗಿದ್ದ ರಿಂದ, ಅವುಗಳನ್ನು ಸಂರಕ್ಷಿ ಸದೇ ಇದ್ದದ್ದು ತನಿಖೆಗೆ ದೊಡ್ಡ ಸವಾಲಾ ಯಿತು. ಐದು ವರ್ಷಕ್ಕಿಂತ ಹೆಚ್ಚು ಕಾಲ ನಡೆದ ವಿಚಾರಣೆಯಲ್ಲಿ 100 ಕ್ಕೂ ಹೆಚ್ಚು ಸಾಕ್ಷಿದಾರರನ್ನು ಪರೀಕ್ಷಿಸಲಾಯಿತು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!