ಮೂಡನಹಳ್ಳಿಯಲ್ಲಿ ಅಕ್ರಮ ಮದ್ಯದ ಹಾವಳಿ: ಅಬಕಾರಿ ಕಚೇರಿಗೆ ಮುತ್ತಿಗೆ ಹಾಕಿ ಮಹಿಳೆಯರ ಆಕ್ರೋಶ!

ಕೆ ಆರ್ ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಮೂಡನಹಳ್ಳಿ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ಮಹಿಳೆಯರು ಕೆ.ಆರ್.ಪೇಟೆ ತಾಲ್ಲೂಕು ಕೇಂದ್ರದಲ್ಲಿರುವ ಅಬಕಾರಿ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮದ ನೂರಾರು ಮಹಿಳೆಯರು ಹಾಗೂ ಯುವಕರು ಪ್ರತಿಭಟನೆ ನಡೆಸಿ, ನಮ್ಮ ಮೂಡನಹಳ್ಳಿ ಗ್ರಾಮದ ಬೀದಿ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಮಧ್ಯ ಮಾರಾಟವನ್ನು ಇಂದಿನಿಂದಲೇ ಬಂದ್ ಮಾಡುವ ಆದೇಶ ಹೊರಡಿಸುವವರೆವಿಗೂ ಇಲ್ಲಿಂದ ಹೋಗುವುದಿಲ್ಲ ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.

ಮೂಡನಹಳ್ಳಿ ಗ್ರಾಮದಿಂದ ಪ್ರಮುಖ ರಸ್ತೆ ಮೂಲಕ ಕೆ ಆರ್ ಪೇಟೆ ಪಟ್ಟಣದ ಶಾಸಕರಾದ ಹೆಚ್ ಟಿ ಮಂಜು ಅವರ ಮನೆಯವರೆಗೆ ಪಾದಯಾತ್ರೆ ಮೂಲಕ ಆಗಮಿಸಿ ಶಾಸಕರಿಗೆ ಮನವಿ ಸಲ್ಲಿಸಿ ನಂತರ ಅಬಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮಸ್ಥರ ಮನವಿ ಆಲಿಸಿದ ಶಾಸಕ ಹೆಚ್ ಟಿ ಮಂಜು ಅವರು ಅಬಕಾರಿ ಡಿಸಿ ಅವರಿಗೆ ವಿಡಿಯೋ ಕರೆ ಮಾಡಿ ಮಾತನಾಡಿ ತಕ್ಷಣವೇ ಮೂಡನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮಧ್ಯ ಮಾರಾಟವನ್ನು ಬಂದ್ ಮಾಡಿಸಬೇಕು. ಜನರ ಭಾವನೆಗೆ ಬೆಲೆ ಕೊಟ್ಟು ಮಧ್ಯ ಮಾರಾಟವನ್ನು‌ ನಿಲ್ಲಿಸಿ ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ಕಟ್ಟು ನಿಟ್ಟಿನ ಕ್ರಮ ವಹಿಸುವಂತೆ ಖಡಕ್ ಸೂಚನೆ ನೀಡಿದರು.
ಗ್ರಾಮದ ಮುಖಂಡರು ಮಾತನಾಡಿ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸದಿದ್ದರೆ ಉಗ್ರ ಹೋರಾಟವನ್ನು ಮಾಡಲು ಹಿಂಜರಿಯುವುದಿಲ್ಲ ಎಂದು ಗ್ರಾಮಸ್ಥರು ‌ಖಡಕ್ಕಾಗಿ ತಿಳಿಸಿದ್ದಾರೆ.

ಕುಡಿತದ ಚಟದಿಂದ ಯುವಕರು, ಮನೆಯ ಯಜಮಾನರು ಸಹ ಹಾಳಾಗುತ್ತಿದ್ದಾರೆ.ಮಕ್ಕಳ ಮೇಲೆ ಪರಿಣಾಮ ಕೆಟ್ಟ ಬೀರುತ್ತಿದೆ. ಅಕ್ರಮ ಮದ್ಯ ‌ಮಾರಾಟದಿಂದಾಗಿ ಮೂಡನಹಳ್ಳಿ ಗ್ರಾಮದಲ್ಲಿ ಅಶಾಂತಿ ಸೃಷ್ಟಿಯಾಗಿದೆ. ಗ್ರಾಮದ ನೆಮ್ಮದಿ ಹಾಳಾಗಿದೆ ಎಂದು ಪ್ರತಿಭಟನಾ ನಿರತ ಮಹಿಳೆಯರು ಹಾಗೂ ಗ್ರಾಮಸ್ಥರು ಗಂಭೀರ ಆರೋಪ‌ ಮಾಡಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!