ಏ. 8ರಂದು ಬಸ್ ಸಂಚಾರ ಡೌಟ್!.

38 ತಿಂಗಳ ವೇತನ ಹಿಂಬಾಕಿ ‌ಮತ್ತು ಹೊಸ ವೇತನ (Salary Arrears) ಪರಿಷ್ಕರಣೆಗಾಗಿ ಆಗ್ರಹಿಸಿ ಈಗಾಗಲೇ ಸಾರಿಗೆ ನೌಕರರು ಹೋರಾಟಕ್ಕೆ ಮುಂದಾಗಿದ್ದರು. ಆದರೆ ‌ಸರ್ಕಾರ 26 ತಿಂಗಳ ವೇತನ ಹಿಂಬಾಕಿ 2025 ಏಪ್ರಿಲ್​ನಿಂದ ವೇತನ ಪರಿಷ್ಕರಣೆಗೆ ಒಪ್ಪಿಗೆ ನೀಡಿತ್ತು. ಸದ್ಯ ಇದಕ್ಕೆ ಒಪ್ಪದ ಸಾರಿಗೆ ನೌಕರರ ಕೂಟ ಮತ್ತೆ ಹೋರಾಟಕ್ಕೆ ಮುಂದಾಗಿದೆ.

ಚಿತ್ರದುರ್ಗದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್​ವರೆಗೆ ಪಾದಯಾತ್ರೆ
ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ನೀಡಬೇಕಿದ್ದ 38 ವೇತನ ಹಿಂಬಾಕಿ 2024ರಿಂದ ಆಗಬೇಕಿದ್ದ, ಹೊಸ ವೇತನ ಒಪ್ಪಂದಕ್ಕಾಗಿ ಆಗ್ರಹಿಸಿ ಹೋರಾಟಕ್ಕೆ ಮುಂದಾಗಿದ್ದರು. ಆದರೆ ‌ರಾಜ್ಯ ಸರ್ಕಾರ 38 ತಿಂಗಳು ವೇತನ ಹಿಂಬಾಕಿ ಬದಲಿಗೆ 26 ತಿಂಗಳು ವೇತನ ಹಿಂಬಾಕಿ, 2024 ಜನವರಿ ಬದಲಿಗೆ 2025ರ ಏಪ್ರಿಲ್​ನಿಂದ ಹೊಸ ವೇತನ ಒಪ್ಪಂದ ಮಾಡುವುದಾಗಿ ಈಗಾಗಲೇ ಆದೇಶ ಮಾಡಿದೆ. ಆದರೆ ಇದಕ್ಕೆ ಒಪ್ಪದ ಸಾರಿಗೆ ನೌಕರರ ಒಕ್ಕೂಟ ಇಂದು ಸುದ್ದಿಗೋಷ್ಠಿ ನಡೆಸಿ ಯಾವುದೇ ‌ಕಾರಣಕ್ಕೂ ಸರ್ಕಾರದ ಆದೇಶವನ್ನು ನಾವು ಒಪ್ಪುವುದಿಲ್ಲ. ಏಪ್ರಿಲ್​ 8ರಿಂದ ಚಿತ್ರದುರ್ಗದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್​ವರೆಗೆ ಪಾದಯಾತ್ರೆ ಮಾಡುತ್ತೇವೆ ಎಂದು ಸಾರಿಗೆ ನೌಕರರ ಒಕ್ಕೂಟ ಅಧ್ಯಕ್ಷ ಚಂದ್ರಶೇಖರ್ ಹೇಳಿದ್ದಾರೆ.
ಇದನ್ನೂ ಓದಿ: ವೇತನ ಹಿಂಬಾಕಿಗೆ ಡಿಮ್ಯಾಂಡ್​​: ಜ.29ರಂದು ಸಾರಿಗೆ ನೌಕರರ ಪ್ರತಿಭಟನೆ

ಇನ್ನು ಸಾರಿಗೆ ನೌಕರರ ಒಕ್ಕೂಟ 38 ತಿಂಗಳ ವೇತನ ಹಿಂಬಾಕಿ ಮತ್ತು 2024 ಜನವರಿಯಿಂದಲೇ ವೇತನ ಹೆಚ್ಚಳ ಮಾಡಬೇಕೆಂದು ಪಟ್ಟುಹಿಡಿದಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ 38 ತಿಂಗಳ ವೇತನ ಹಿಂಬಾಕಿಯಲ್ಲಿ 26 ತಿಂಗಳ ವೇತನ ಹಿ‌ಂಬಾಕಿ 1272 ಕೋಟಿ ರೂ ನೀಡುತ್ತಿದೆ. 2024 ಜನವರಿಯಿಂದ ಆಗಬೇಕಿದ್ದ ಹೊಸ ವೇತನ ಒಪ್ಪಂದವನ್ನು 2025 ಏಪ್ರಿಲ್​ನಿಂದ ಮಾಡಲು ಮುಂದಾಗಿದೆ.

1970 ಕೋಟಿ ರೂ ಹಿಂಬಾಕಿ ಬಿಡುಗಡೆಗೆ ಪಟ್ಟು
ಸರ್ಕಾರದ ಈ ನಿರ್ಧಾರಕ್ಕೆ ಒಪ್ಪದ ಕೆಎಸ್ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ನೌಕರರು 38 ತಿಂಗಳ ವೇತನ ಹಿಂಬಾಕಿ 1970 ಕೋಟಿ ರೂ ಬಿಡುಗಡೆ ಮಾಡಲೇಬೇಕು ಮತ್ತು 2024 ಜನವರಿಯಿಂದಲೇ ಹೊಸ ವೇತನ ಒಪ್ಪಂದ ಮಾಡಬೇಕೆಂದು ಪಟ್ಟುಹಿಡಿದಿದ್ದಾರೆ. ಈ ನಿಟ್ಟಿನಲ್ಲಿ ಫ್ರೀಡಂ ಪಾರ್ಕ್​ಗೆ ಬಂದು, ಅಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಂತರ ಮುಷ್ಕರಕ್ಕೆ ಹೋಗಬೇಕೆಂದು ಸಾರಿಗೆ ನೌಕರರ ಮುಖಂಡರು ಸಿದ್ಧತೆ ಮಾಡಿಕೊಂಡಿದ್ದಾರೆ. ಅಂದು ಬಸ್​​ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂದೂಡುವುದು ಉತ್ತಮ.

ಒಟ್ಟಿನಲ್ಲಿ ರಾಜ್ಯ ಸರ್ಕಾರ ನೀಡಬೇಕಿದ್ದ 38 ತಿಂಗಳ ಬದಲಿಗೆ 26 ತಿಂಗಳಿನ ವೇತನ ಮತ್ತು 2024 ಜನವರಿ ಬದಲಿಗೆ ‌25 ಏಪ್ರಿಲ್​ನಿಂದ ಹೊಸ ವೇತನ ಪರಿಷ್ಕರಣೆ ಮಾಡುತ್ತೇವೆ ಅಂತಿದ್ದಾರೆ. ಆದರೆ ಇದಕ್ಕೆ ಸಾರಿಗೆ ನೌಕರರು ಒಪ್ಪದೆ ಮತ್ತೆ ಹೋರಾಟಕ್ಕೆ ಮುಂದಾಗಿದ್ದು, ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ‌ಕಾದು ನೋಡಬೇಕಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!