ಅಬಕಾರಿ ಇಲಾಖೆಯಲ್ಲಿ ಬೃಹತ್ ಹಗರಣ: ಬೋಗಸ್ ದಾಖಲೆ ಸೃಷ್ಟಿಸಿ ನೂರಾರು CL-7 ಪರವಾನಗಿ ಮಂಜೂರು!

ಬೆಂಗಳೂರು : ರಾಜ್ಯ ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಜೇನುಗೂಡು ಈಗ ಲೋಕಾಯುಕ್ತ ತನಿಖೆಯಿಂದ ಬಯಲಾಗಿದೆ. ಮಂಥ್ಲಿ ಮನಿ, ವರ್ಗಾವಣೆ ದಂಧೆ ಹಾಗೂ ಕಿಕ್‌ಬ್ಯಾಕ್ ಆರೋಪಗಳ ನಡುವೆಯೇ, ಅಧಿಕಾರಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ನೂರಾರು CL-7 (ಹೋಟೆಲ್ ಮತ್ತು ವಸತಿಗೃಹ) ಪರವಾನಗಿಗಳನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಿರುವುದು ವರದಿಯಲ್ಲಿ ಸಾಬೀತಾಗಿದೆ.

ಅಕ್ರಮದ ಆಳ-ಅಗಲ:
ಬೆಂಗಳೂರು ನಗರ ಜಿಲ್ಲೆಯ ಅಬಕಾರಿ ವಲಯ ಬಿಯುಡಿ-2 ವ್ಯಾಪ್ತಿಯ ಕೆ.ಆರ್. ಪುರ, ಮೇದಹಳ್ಳಿ, ಕೌದೇನಹಳ್ಳಿ, ಬೀದರಹಳ್ಳಿ ಮತ್ತು ರಾಮಪುರ ಪ್ರದೇಶಗಳಲ್ಲಿ ಈ ಅಕ್ರಮ ಅವಿಶ್ರಾಂತವಾಗಿ ನಡೆದಿದೆ. ತನಿಖಾ ವರದಿಯ ಪ್ರಕಾರ, ಅಧಿಕಾರಿಗಳು ಲೈಸೆನ್ಸ್ ನೀಡಲು ಅನುಸರಿಸಿದ ದಾರಿಗಳು ದಿಗಿಲು ಹುಟ್ಟಿಸುವಂತಿವೆ:

ನಕಲಿ ನೀಲನಕಾಶೆ: ಈಗಾಗಲೇ ಇರುವ CL-9 (ಬಾರ್ ಆ್ಯಂಡ್ ರೆಸ್ಟೋರೆಂಟ್) ಕೊಠಡಿಗಳನ್ನೇ CL-7 ಕೊಠಡಿಗಳೆಂದು ಬಿಂಬಿಸಲಾಗಿದೆ.
ದಾಖಲೆಗಳ ಮರೆಯಲ್ಲಿ ವಂಚನೆ: ಬೇರೆ ಕಟ್ಟಡದ ಕಿಚನ್, ಡೈನಿಂಗ್ ಹಾಲ್ ಹಾಗೂ ಶೌಚಾಲಯಗಳ ಛಾಯಾಚಿತ್ರಗಳನ್ನು ನೀಡಿ ಪರವಾನಗಿ ಪಡೆಯಲಾಗಿದೆ.
ಕೆರೆ ಜಾಗದಲ್ಲಿ ಪಾರ್ಕಿಂಗ್: ಪಾರ್ಕಿಂಗ್ ವ್ಯವಸ್ಥೆ ತೋರಿಸಲು ಕೆರೆ ಅಂಗಳದ ಜಾಗವನ್ನು ಬಳಸಿಕೊಳ್ಳಲಾಗಿದ್ದು, ಸುಳ್ಳು ಟ್ರೇಡ್ ಲೈಸೆನ್ಸ್ ಸೃಷ್ಟಿಸಲಾಗಿದೆ.
ಅಸ್ತಿತ್ವವಿಲ್ಲದ ಕಟ್ಟಡ: ಹಲವೆಡೆ ಕಟ್ಟಡಗಳೇ ಇಲ್ಲದಿದ್ದರೂ ಕಾಗದದ ಮೇಲೆ ಸಕಲ ಸೌಲಭ್ಯಗಳಿವೆಯೆಂದು ತೋರಿಸಿ ಲೈಸೆನ್ಸ್ ಮಂಜೂರು ಮಾಡಲಾಗಿದೆ.

ಆರೋಪಿತ ಅಧಿಕಾರಿಗಳ ‘ಕರಾಮತ್ತು’:
ಈ ಬೃಹತ್ ಹಗರಣದಲ್ಲಿ ಅಬಕಾರಿ ಉಪ ಆಯುಕ್ತ ಅಜಿತ್‌ಕುಮಾರ್ ಉಪ ಅಧೀಕ್ಷಕ ತುಕಾರಂ ನಾಯಕ್ ಮತ್ತು ನಿರೀಕ್ಷಕ ಭರತ್ ಎಂಬುವವರ ಹೆಸರುಗಳು ಪ್ರಮುಖವಾಗಿ ಕೇಳಿಬಂದಿವೆ. ಇವರು ಜಿಲ್ಲಾಧಿಕಾರಿಗಳಿಗೆ ತಪ್ಪು ವರದಿ ನೀಡಿ ದಾರಿ ತಪ್ಪಿಸಿದ್ದಲ್ಲದೆ, ಮಧ್ಯವರ್ತಿಗಳ ಮೂಲಕ ಪ್ರತಿ ಲೈಸೆನ್ಸ್‌ಗೆ ಕೋಟ್ಯಂತರ ರೂಪಾಯಿ ಲಂಚ ಪಡೆದಿರುವ ಗಂಭೀರ ಆರೋಪ ಎದುರಿಸುತ್ತಿದ್ದಾರೆ. ವಕೀಲ ಡಾ. ಹರಿಪ್ರಸಾದ್ ಅವರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತರು ನಡೆಸಿದ ತನಿಖೆಯಲ್ಲಿ ಈ ಎಲ್ಲಾ ಸತ್ಯಾಂಶಗಳು ಸಾಬೀತಾಗಿವೆ.

ವರ್ಗಾವಣೆ ದಂಧೆ ಮತ್ತು ಸಾರ್ವಜನಿಕರ ಆಕ್ರೋಶ:
ಬೆಂಗಳೂರಿನಲ್ಲೇ ಸುಮಾರು 30 ವರ್ಷಗಳಿಂದ ಬೇರೂರಿರುವ ಕೆಲ ಅಧಿಕಾರಿಗಳು ಸಿಂಡಿಕೇಟ್ ಮಾಡಿಕೊಂಡು ಆಯಕಟ್ಟಿನ ಜಾಗಗಳಿಗಾಗಿ ಕೋಟ್ಯಂತರ ರೂ. ಲಂಚ ನೀಡುತ್ತಿದ್ದಾರೆ ಎಂಬ ಅಂಶವೂ ವರದಿಯಲ್ಲಿದೆ. ವರ್ಗಾವಣೆ ಪ್ರಕ್ರಿಯೆ ಆರಂಭವಾಗುತ್ತಿರುವ ಬೆನ್ನಲ್ಲೇ ಈ ಭ್ರಷ್ಟ ಅಧಿಕಾರಿಗಳನ್ನು ಕೂಡಲೇ ಅಮಾನತು (Suspend) ಮಾಡಬೇಕೆಂದು ಸಾರ್ವಜನಿಕ ವಲಯದಲ್ಲಿ ತೀವ್ರ ಒತ್ತಾಯ ಕೇಳಿಬಂದಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!