ಇರಾನ್‌ಗೆ ಚೀನಾ ಶಸ್ತ್ರಾಸ್ತ್ರ ನೆರವು: ಷಿ ಜಿನ್‌ಪಿಂಗ್‌ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ವಾರ್ನಿಂಗ್!

ವಾಷಿಂಗ್ಟನ್: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಬೆನ್ನಲ್ಲೇ, ಇರಾನ್‌ಗೆ ಅತ್ಯಾಧುನಿಕ ವಾಯು ರಕ್ಷಣಾ ವ್ಯವಸ್ಥೆಗಳನ್ನು ಪೂರೈಸಲು ಮುಂದಾಗಿರುವ ಚೀನಾಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಚೀನಾ ಇರಾನ್‌ಗೆ ಶಸ್ತ್ರಾಸ್ತ್ರ ನೀಡುವ ಸಾಹಸ ಮಾಡಿದರೆ ಊಹಿಸಲಾಗದ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಟ್ರಂಪ್ ನೇರವಾಗಿಯೇ ಷಿ ಜಿನ್‌ಪಿಂಗ್‌ ಅವರಿಗೆ ತಿಳಿಸಿದ್ದಾರೆ. ಇತ್ತೀಚೆಗೆ ಅಮೆರಿಕದ ಎಫ್-15 ಯುದ್ಧ ವಿಮಾನ ಹಾಗೂ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್‌ಗಳನ್ನು ಇರಾನ್ ಹೊಡೆದುರುಳಿಸಿದ್ದು, ಇದಕ್ಕೆ ಚೀನಾದ ತಂತ್ರಜ್ಞಾನ ಹಾಗೂ ಭುಜದ ಮೇಲೆ ಇಟ್ಟು ಹಾರಿಸುವ ಕ್ಷಿಪಣಿಗಳೇ ಕಾರಣ ಎಂದು ಅಮೆರಿಕದ ಗುಪ್ತಚರ ವರದಿಗಳು ಶಂಕಿಸಿವೆ. ಅಲ್ಲದೆ, ರಾಕೆಟ್ ಇಂಧನಕ್ಕೆ ಬಳಸುವ ಸೋಡಿಯಂ ಪರ್ಕ್ಲೋರೇಟ್ ಅನ್ನು ಚೀನಾ ರಹಸ್ಯವಾಗಿ ಇರಾನ್‌ಗೆ ರವಾನಿಸಿರುವುದು ಪತ್ತೆಯಾಗಿದೆ.

ಈ ಆರೋಪಗಳನ್ನು ವಾಷಿಂಗ್ಟನ್‌ನಲ್ಲಿರುವ ಚೀನಾ ರಾಯಭಾರ ಕಚೇರಿ ತಿರಸ್ಕರಿಸಿದ್ದರೂ, ಅಮೆರಿಕದ ಯುದ್ಧ ವಿಮಾನಗಳ ನಿಖರ ಮಾಹಿತಿಯನ್ನು ಚೀನಾ ಇರಾನ್‌ಗೆ ಸೋರಿಕೆ ಮಾಡುತ್ತಿದೆ ಎಂಬ ಆಘಾತಕಾರಿ ಅಂಶಗಳು ಹೊರಬಂದಿವೆ.

ಹಾರ್ಮುಜ್ ಜಲಸಂಧಿಯಲ್ಲಿ ನೆಲಬಾಂಬ್ ಅಳವಡಿಸಿ ಜಾಗತಿಕ ತೈಲ ಸಾರಿಗೆಯನ್ನು ತಡೆಯಲು ಯತ್ನಿಸುತ್ತಿರುವ ಇರಾನ್ ವಿರುದ್ಧ ಕೆಂಡಾಮಂಡಲವಾಗಿರುವ ಟ್ರಂಪ್, “ಯಾರು ಎಷ್ಟೇ ಬಲಪ್ರಯೋಗ ಮಾಡಿದರೂ ಈ ಸಂಘರ್ಷದಲ್ಲಿ ಅಮೆರಿಕವೇ ಗೆಲ್ಲಲಿದೆ; ಇರಾನ್ ರಾಜಿ ಮಾಡಿಕೊಳ್ಳದಿದ್ದರೆ ಅದನ್ನು ಸಂಪೂರ್ಣ ನಾಶಪಡಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ. ಚೀನಾದ ಈ ತೆರೆಮರೆಯ ಪ್ರಚೋದನೆಯು ಅಮೆರಿಕ ಮತ್ತು ಅದರ ಮಿತ್ರ ರಾಷ್ಟ್ರಗಳಿಗೆ ದೊಡ್ಡ ಬೆದರಿಕೆಯಾಗಿದ್ದು, ಜಾಗತಿಕ ಶಾಂತಿಯನ್ನು ಕದಡುವ ಸಾಧ್ಯತೆ ಇದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!