ಮೈಸೂರಿನಲ್ಲಿ ಬೆಚ್ಚಿಬೀಳಿಸುವ ಕರಾಳ ದಂಧೆ ಬಯಲು: ಯುವಕನ ಕಿಡ್ನಾಪ್ ಮಾಡಿ ‘ಮಂಗಳಮುಖಿ’ಯಾಗಿಸಿದ ದಗಾಕೋರರು!

ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಮನುಕುಲವೇ ತಲೆತಗ್ಗಿಸುವಂತಹ ಅಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವಕನನ್ನು ಕಿಡ್ನಾಪ್ ಮಾಡಿ, ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಸೆಕ್ಸ್ ವರ್ಕ್ ಹಾಗೂ ಹಣ ವಸೂಲಿಗೆ ಬಳಸಿಕೊಂಡಿರುವ ಭೀಕರ ದಂಧೆ ಬಯಲಾಗಿದೆ. ಅಷ್ಟೇ ಅಲ್ಲ, ಆತನ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೂ ಹುನ್ನಾರ ನಡೆಸಲಾಗಿತ್ತು. ಈ ಕಪಿಮುಷ್ಠಿಯಿಂದ ತಪ್ಪಿಸಿಕೊಂಡು ಬಂದ ಯುವಕ ಈಗ ತನಗಾದ ಅನ್ಯಾಯಕ್ಕೆ ನ್ಯಾಯ ಕೋರಿ ಪೊಲೀಸರ ಮೆಟ್ಟಿಲೇರಿದ್ದಾನೆ.

ಮೈಸೂರು/ನಂಜನಗೂಡು
ಕಿಡ್ನಾಪ್… ಬಲವಂತದ ಲಿಂಗ ಬದಲಾವಣೆ ಪ್ರಯತ್ನ… ಸೆಕ್ಸ್ ವರ್ಕ್ ಗೆ ಬಳಕೆ! ಇದು ಯಾವುದೋ ಸಿನಿಮಾದ ಕಥೆಯಲ್ಲ, ನಂಜನಗೂಡಿನ ಯುವಕ ಅನಿಲ್ ಕುಮಾರ್ ಅನುಭವಿಸಿದ ನರಕಯಾತನೆ.

ನಂಜನಗೂಡಿನ ತ್ಯಾಗರಾಜ ಕಾಲೋನಿಯ ಅನಿಲ್ ಕುಮಾರ್, ನಾಲ್ಕು ತಿಂಗಳ ಹಿಂದೆ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಮಂಗಳೂರಿನ ಅನಿತಾ ಎಂಬ ಮಂಗಳಮುಖಿ ಮತ್ತು ಆಕೆಯ ತಂಡ ಅನಿಲ್ ನನ್ನು ಅಪಹರಿಸಿತ್ತು. ಮುಸುಕು ಹಾಕಿ, ಮದಕ ಪದಾರ್ಥ ನೀಡಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು.

ದಂಧೆಯ ಕರಾಳ ಮುಖ:
ಬಲವಂತದ ವೇಷ: ಅನಿಲ್ ಗೆ ಸೀರೆ, ನೈಟಿ ತೊಡಿಸಿ ‘ಅಕ್ಷತಾ’ ಎಂದು ಹೆಸರಿಟ್ಟು ಮಂಗಳಮುಖಿಯನ್ನಾಗಿ ಮಾಡಲಾಯಿತು.

ಹಣ ವಸೂಲಿ: ಪ್ರತಿದಿನ ಅಂಗಡಿಗಳ ಮುಂದೆ ನಿಂತು 2 ರಿಂದ 3 ಸಾವಿರ ರೂ. ಕಲೆಕ್ಷನ್ ಮಾಡಲು ಒತ್ತಾಯಿಸಲಾಗುತ್ತಿತ್ತು.

ಸೆಕ್ಸ್ ವರ್ಕ್: ಅನಿಲ್ ನನ್ನು ಕೇರಳ ಮತ್ತು ಮಂಗಳೂರಿನ ವಿವಿಧ ಭಾಗಗಳಿಗೆ ಕಳುಹಿಸಿ ಬಲವಂತವಾಗಿ ಸೆಕ್ಸ್ ವರ್ಕ್ ಗೆ ದೂಡಲಾಗಿತ್ತು.

ಸೋಷಿಯಲ್ ಮೀಡಿಯಾ ಬಳಕೆ: ಅನಿಲ್ ಮೂಲಕ ರೀಲ್ಸ್ ಮಾಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಣ ಗಳಿಸುತ್ತಿದ್ದರು.

ಸರ್ಟಿಫಿಕೇಟ್ ಅಕ್ರಮದ ಅನುಮಾನ:
ಅನಿಲ್ ಕುಮಾರ್ ಗೆ ಯಾವುದೇ ಲೈಂಗಿಕ ದೌರ್ಬಲ್ಯವಿಲ್ಲದಿದ್ದರೂ, ಸಮಾಜ ಕಲ್ಯಾಣ ಇಲಾಖೆಯಿಂದ ‘ಟ್ರಾನ್ಸ್‌ಜೆಂಡರ್’ ಎಂದು ಅಧಿಕೃತ ಸರ್ಟಿಫಿಕೇಟ್ ಕೊಡಿಸಿರುವುದು ಈಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮುಂದಿನ ತಿಂಗಳು ಬಾಂಬೆಗೆ ಕರೆದೊಯ್ದು ಶಸ್ತ್ರಚಿಕಿತ್ಸೆ ಮೂಲಕ ಲಿಂಗ ಬದಲಾವಣೆ ಮಾಡಲು ಸ್ಕೆಚ್ ಹಾಕಲಾಗಿತ್ತು.

ಜೈಲು ಬೆದರಿಕೆ ಹಾಗೂ ಕಿರುಕುಳ:
ಈ ದಂಧೆಯಿಂದ ಹೊರಬರಲು ಪ್ರಯತ್ನಿಸಿದ ಅನಿಲ್, ತಾನು ದುಡಿದ 3 ಲಕ್ಷ ಹಣ ಕೇಳಿದಾಗ ಅನಿತಾ ತಂಡ ಆತನ ಮೇಲೆ ಕಳ್ಳತನದ ಸುಳ್ಳು ಆರೋಪ ಹೊರಿಸಿ ಜೈಲಿಗೆ ಹಾಕಿಸುವ ಬೆದರಿಕೆ ಹಾಕಿದೆ. ಪ್ರಾಣ ಉಳಿಸಿಕೊಳ್ಳಲು ಅನಿಲ್ ನಂಜನಗೂಡಿಗೆ ಓಡಿ ಬಂದಿದ್ದರೂ, ಅಲ್ಲಿಯೂ ಮಂಗಳಮುಖಿಯರನ್ನು ಕಳುಹಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಸಂತ್ರಸ್ತ ಆರೋಪಿಸಿದ್ದಾನೆ.

ಪೊಲೀಸ್ ದೂರು ಮತ್ತು ಪ್ರಶ್ನೆಗಳು:
ಪ್ರಸ್ತುತ ಅನಿಲ್ ಕುಮಾರ್ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ನಂಜನಗೂಡು ಪೊಲೀಸರು ಈ ಬಗ್ಗೆ ಸ್ಪಂದಿಸುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಈ ಪ್ರಕರಣ ಎತ್ತುತ್ತಿರುವ ಗಂಭೀರ ಪ್ರಶ್ನೆಗಳು:

ವೈದ್ಯಕೀಯ ಪರೀಕ್ಷೆ ಇಲ್ಲದೆ ಸಮಾಜ ಕಲ್ಯಾಣ ಇಲಾಖೆ ಸರ್ಟಿಫಿಕೇಟ್ ನೀಡಿದ್ದು ಹೇಗೆ?

ಅಮಾಯಕರನ್ನು ಅಪಹರಿಸಿ ಲಿಂಗ ಬದಲಿಸುವ ಈ ಜಾಲದ ಹಿಂದೆ ಇರುವ ಪ್ರಭಾವಿಗಳು ಯಾರು?

ಶೇ. 90 ರಷ್ಟು ಕಣ್ಣಿನ ದೃಷ್ಟಿ ಕಳೆದುಕೊಂಡಿರುವ ಯುವಕನಿಗೆ ರಕ್ಷಣೆ ಸಿಗುವುದೇ?

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!