ನಿಶ್ಚಿತಾರ್ಥವಾದ ಯುವಕನ ಮನೆಯವರಿಗೆ ಫೋಟೋ ಕಳುಹಿಸಿದ ಪ್ರೇಮಿ !

ವಿಜಯಪುರ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ನಿಶ್ಚಿತಾರ್ಥವಾದ ಯುವಕನ ಮನೆಯವರಿಗೆ ತನ್ನ ಜೊತೆಗಿನ ಫೋಟೋವನ್ನು ಪ್ರೇಮಿ ಕಳುಹಿಸಿದ ಕಾರಣ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಫೋಟೋ ನೋಡಿ ಮದುವೆ ಆಗಬೇಕಿದ್ದ ಯುವಕನ ಕಡೆಯವರು ವಿವಾಹ ರದ್ದುಗೊಳಿದ ಕಾರಣ ಅವಮಾನಗೊಂಡು ಯುವತಿ ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾಳೆ. ಈ ಸಂಬಂಧ ಸಿಂದಗಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹದಿಹರೆಯದ ಪ್ರೇಮ ಪ್ರಕರಣಗಳು ಕೆಲವೊಮ್ಮೆ ಜೀವಕ್ಕೇ ಕಂಟಕವಾಗಿಬಿಡುತ್ತವೆ. ಪ್ರೀತಿಸಿದ ಹುಡುಗ ಅಥವಾ ಹುಡುಗಿ ಸಿಗದ ಕಾರಣಕ್ಕೆ ಮನನೊಂದು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ತೆಗೆದುಕೊಂಡು ಬಲಿಯಾದವರ ಸಂಖ್ಯೆ ದೊಡ್ಡದ್ದೇ ಇದೆ. ಆದರೆ ವಿಜಯಪುರದಲ್ಲಿ ಇದಕ್ಕೆ ತುಸು ಭಿನ್ನವೆಂಬಂತಹ ಪ್ರಕರಣವೊಂದು ನಡೆದಿದೆ. ತಾನು ಪ್ರೀತಿಸಿದ್ದ ಯುವತಿಗೆ ಮತ್ತೊಬ್ಬನ ಜೊತೆ ವಿವಾಹ ನಿಶ್ಚಯವಾಗಿದ್ದಕ್ಕೆ ರೊಚ್ಚಿಗೆದ್ದ ಯುವಕ ಮಾಡಿದ ಕೆಲಸ, ಮದುವೆಯ ಕನಸು ಕಂಡಿದ್ದ ಯುವತಿಯ ಪ್ರಾಣವನ್ನೇ ತೆಗೆದಿದೆ.

ಹೌದು, ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದ 22 ವರ್ಷದ ಯುವತಿ ಜಯಶ್ರೀ ಬಿರಾದಾರ್​​ಗೆ ಮದುವೆ ಮಾಡಲು ಮುಂದಾಗಿದ್ದ ಕುಟುಂಬಸ್ಥರು, ಈ ಸಂಬಂಧ ನಿಶ್ಚಿತಾರ್ಥವನ್ನೂ ನಡೆಸಿದ್ದರು. ಆದರೆ ಜಯಶ್ರೀ ಈ ಮೊದಲು ಶ್ರೀಶೈಲ್ ಬಡಾನೂರ್ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದ್ದು, ಈಕೆಯ ವಿವಾಹದ ವಿಷಯ ತಿಳಿದ ಆತ ವ್ಯತಿರಿಕ್ತವಾಗಿ ವರ್ತಿಸಿದ್ದಾನೆ. ಜಯಶ್ರೀ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನ ಕುಟುಂಬಸ್ಥರಿಗೆ ಆಕೆ ತನ್ನ ಜೊತೆಗಿರುವ ಫೋಟೋಗಳನ್ನು ಶ್ರೀಶೈಲ್ ಕಳುಹಿಸಿದ್ದಾನೆ. ಅವನ್ನು ನೋಡಿರುವ ಯುವಕನ ಕಡೆಯವರು ಏಪ್ರಿಲ್​​ 27ರಂದು ನಿಗದಿಯಾಗಿದ್ದ ಮದುವೆಯನ್ನು ಕ್ಯಾನ್ಸಲ್​​ ಮಾಡಿದ್ದಾರೆ. ಘಟನೆಯಿಂದ ತೀವ್ರವಾಗಿ ನೊಂದ ಜಯಶ್ರೀ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪ್ರೇಮ ಪ್ರಕರಣ ಹೊರ ಬಂದ ಕಾರಣ ಅವಮಾನವಾಗಿ ಬಂದಾಳ ಗ್ರಾಮದ ಮದಿನಾ ಮಸೀದಿ ಪಕ್ಕದ ಬಾವಿಗೆ ಜಯಶ್ರೀ ಹಾರಿದ್ದಾಳೆ. ನಿನ್ನೆ ಸಾಯಂಕಾಲ ಘಟನೆ ನಡೆದಿದ್ದು, ಶವವನ್ನು ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮನೆ ಮಗಳ ಸಾವು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮಾಡಬಾರದ ಕೃತ್ಯ ಮಾಡಿರುವ ಪಾಗಲ್ ಪ್ರೇಮಿ ಶ್ರೀಶೈಲ್ ಬಡಾನೂರ್ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ. ಘಟನೆ ಸಂಬಂಧ ಸಿಂದಗಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!