3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ ಕಂದಕ ಸೃಷ್ಟಿಸಿತ್ತು. ಹಲವು ವರ್ಷಗಳ ನಂತರ ಆ ಕಹಿ ಘಟನೆಯನ್ನು ನೆನೆದು ನಟಿ ಬಿಂದಿಯಾ ಭಾವುಕರಾಗಿದ್ದಾರೆ. ಅಲ್ಲದೆ ರವಿಚಂದ್ರನ್ ಅವರಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.

ಇತ್ತೀಚೆಗೆ ರಘುರಾಮ್ ಅವರ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಬಿಂದಿಯಾ, ತಪ್ಪು ತಿಳುವಳಿಕೆಯಿಂದ ಈ ರೀತಿ ಆಯಿತು ಎಂದು ಅವರು ಹೇಳಿದ್ದಾರೆ. ‘ಜಾನ್ ತೇರೆ ನಾಮ್’ ಹೆಸರಿನ ಹಿಂದಿ ಸಿನಿಮಾ ಯಶಸ್ಸಿನಲ್ಲಿ ಬಿಂದಿಯಾ ತೇಲುತ್ತಿದ್ದರು. ಇದೇ ಸಮಯದಲ್ಲಿ ಚಿತ್ರಕ್ಕೆ ಹೊಸ ನಾಯಕಿಯ ಹುಡುಕಾಟದಲ್ಲಿದ್ದ ರವಿಚಂದ್ರನ್ ಮತ್ತು ಅವರ ತಂಡ ಮುಂಬೈಗೆ ತೆರಳಿತ್ತು. ಆಗ ಬಿಂದಿಯಾ ಅವರನ್ನು ಭೇಟಿ ಮಾಡಿತ್ತು. ಭಾಷೆಯ ಸಮಸ್ಯೆ ಇದ್ದರೂ, ಉದ್ಯಮದ ಬಗ್ಗೆ ಅಷ್ಟಾಗಿ ತಿಳಿಯದಿದ್ದರೂ ಬಿಂದಿಯಾ ಅವರು ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡರು. ಸಿನಿಮಾ ತೆರೆಕಂಡು ರವಿಚಂದ್ರನ್-ಬಿಂದಿಯಾ ಜೋಡಿಯನ್ನು ಪ್ರೇಕ್ಷಕರು ಮನಸಾರೆ ಮೆಚ್ಚಿಕೊಂಡರು.

ಎಲ್ಲವೂ ಚೆನ್ನಾಗಿ ನಡೆಯುತ್ತಿದ್ದಾಗಲೇ ಮಾಧ್ಯಮಗಳಲ್ಲಿ ರವಿಚಂದ್ರನ್ ವಿರುದ್ಧ ಕೇಳಿಬಂದ ಗಂಭೀರ ಆರೋಪಗಳು ಚಿತ್ರರಂಗದಲ್ಲಿ ಬಿರುಗಾಳಿ ಎಬ್ಬಿಸಿದವು. ಮ್ಯಾಗಜಿನ್ ಒಂದರಲ್ಲಿ ರವಿಚಂದ್ರನ್ ವಿರುದ್ಧ ಅತ್ಯಾಚಾರ ಆರೋಪವನ್ನು ನಟಿ ಮಾಡಿದ್ದರು. ‘ನಾನು ಹೇಳಿದ್ದೇ ಒಂದು, ಆದರೆ ಅಂದು ಮ್ಯಾಗಜೀನ್‌ನಲ್ಲಿ ಪ್ರಕಟವಾಗಿದ್ದೇ ಇನ್ನೊಂದು. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಬರೆಯಲಾಗಿತ್ತು’ ಎಂದು ಬಿಂದಿಯಾ ಹೇಳಿದ್ದಾರೆ. ಈ ವಿವಾದ ದೊಡ್ಡದಾಗುತ್ತಿದ್ದಂತೆ ರವಿಚಂದ್ರನ್ ಅವರು ತಮ್ಮ ಗೌರವಕ್ಕೆ ಧಕ್ಕೆ ತಂದಿದ್ದಕ್ಕಾಗಿ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದರು.

‘ಅದು ನನ್ನ ಜೀವನದ ಅತ್ಯಂತ ಕಠಿಣ ಸಮಯ. ವಿಷಯ ಕೋರ್ಟ್‌ ಮೆಟ್ಟಿಲೇರುವಷ್ಟು ದೊಡ್ಡದಾಗುತ್ತದೆ ಎಂದು ನಾನು ಊಹಿಸಿರಲಿಲ್ಲ. ಆಗ ನನಗೆ ಪರಿಸ್ಥಿತಿಯನ್ನು ಜಾಣ್ಮೆಯಿಂದ ನಿಭಾಯಿಸುವಷ್ಟು ವಯಸ್ಸು ಅಥವಾ ಪ್ರಬುದ್ಧತೆ ಇರಲಿಲ್ಲ’ ಎಂದು ಒಪ್ಪಿಕೊಂಡಿದ್ದಾರೆ. ಕೋರ್ಟ್‌ನಲ್ಲೇ ಬಿಂದಿಯಾ ಕ್ಷಮೆ ಕೇಳಿದ ನಂತರ ರವಿಚಂದ್ರನ್ ಪ್ರಕರಣವನ್ನು ಹಿಂಪಡೆದರು.
ಸಂದರ್ಶನದಲ್ಲಿ ಮಾತನಾಡುತ್ತಾ ಭಾವುಕರಾದ ಬಿಂದಿಯಾ, ‘ರವಿ ಸರ್ ಯಾವುದೇ ತಪ್ಪು ಮಾಡಿರಲಿಲ್ಲ. ನನ್ನಿಂದಾಗಿ ಅಷ್ಟು ದೊಡ್ಡ ಸ್ಟಾರ್ ಕೋರ್ಟ್‌ಗೆ ಬಂದು ನಿಲ್ಲುವಂತಾಗಿದ್ದು ನನಗೆ ಇಂದಿಗೂ ಕಾಡುವ ನೋವು’ ಎಂದು ಕಣ್ಣೀರಿಡುತ್ತಾ ಮತ್ತೊಮ್ಮೆ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ.

ಅಲ್ಲದೆ, ರವಿಚಂದ್ರನ್ ಅವರೊಂದಿಗೆ ಮತ್ತೆ ಕೆಲಸ ಮಾಡುವ ಇಚ್ಛೆ ವ್ಯಕ್ತಪಡಿಸಿರುವ ಅವರು, ‘ಮುಂದೆಂದಾದರೂ ರವಿ ಸರ್ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕರೆ, ನಾನು ಯಾವುದೇ ಸಂಭಾವನೆ ಪಡೆಯದೆಯೂ ನಟಿಸಲು ಸಿದ್ಧಳಿದ್ದೇನೆ’ ಎಂದು ತಮ್ಮ ಮನದಾಳದ ಆಸೆಯನ್ನು ಹಂಚಿಕೊಂಡಿದ್ದಾರೆ.

Related Posts

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ!

ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಕಡಿಮೆಯಾಗುತ್ತಿದ್ದಂತೆಯೇ, ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ (KRS) ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ಇದು ಕೇವಲ ಕೃಷಿಯನ್ನೇ ನಂಬಿದ ಅನ್ನದಾತರ ನಿದ್ದೆಗೆಡಿಸಿರುವುದು ಮಾತ್ರವಲ್ಲದೆ, ಕಾವೇರಿ ನೀರನ್ನೇ ಅವಲಂಬಿಸಿರುವ ಸಿಲಿಕಾನ್ ಸಿಟಿ ಬೆಂಗಳೂರಿಗೂ…

You Missed

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ!

KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ!

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ

ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ