ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ !

  ಬೆಂಗಳೂರು : ನಗರದ ಪ್ರತಿಷ್ಠಿತ ಶಾಲೆಗಳು ತಮ್ಮ ಆವರಣದಲ್ಲಿ ಸ್ವಿಗ್ಗಿ, ಜೊಮ್ಯಾಟೊ  ಸೇರಿದಂತೆ ಇತರೆ ಆನ್‌ಲೈನ್ ಆಪ್‌ಗಳ ಮೂಲಕ ಆಹಾರ ಆರ್ಡರ್ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸುತ್ತಿವೆ. ಇತ್ತೀಚೆಗಷ್ಟೇ ಬನಶಂಕರಿಯಲ್ಲಿರುವ ವಿದ್ಯಾಶಿಲ್ಪ ಶಾಲೆ ತನ್ನ ಪೋಷಕರಿಗೆ ಸುತ್ತೋಲೆ ಹೊರಡಿಸಿ ಈ ನಿಯಮವನ್ನು ಪ್ರಕಟಿಸಿದ್ದು, ನಗರದ ಇನ್ನೂ ಹಲವು ಪ್ರಮುಖ ಶಾಲೆಗಳು ಈ ಹಾದಿ ಹಿಡಿದಿವೆ.

ಶಾಲಾ ಆಡಳಿತ ಮಂಡಳಿಗಳುಯ ಹೇಳುವಂತೆ ಹೊರಗಿನಿಂದ ಆರ್ಡರ್ ಮಾಡುವ ಜಂಕ್ ಫುಡ್‌ಗಳು ಆರೋಗ್ಯಕರವಾಗಿರುವುದಿಲ್ಲ. ಅವುಗಳಲ್ಲಿ ಅತಿಯಾದ ಎಣ್ಣೆ, ಉಪ್ಪು ಮತ್ತು ಪ್ರಿಸರ್ವೇಟಿವ್ಸ್‌ಗಳನ್ನು ಬಳಸಲಾಗಿರುತ್ತದೆ. ಇದು ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಶಾಲೆಯೊಂದರ ಪ್ರಾಂಶುಪಾಲರು ಹೇಳುವಂತೆ, ಒಬ್ಬ ವಿದ್ಯಾರ್ಥಿ ಮನೆಯಿಂದ ತಂದ ಸಾಮಾನ್ಯ ಪಲಾವ್ ತಿನ್ನುವಾಗ, ಪಕ್ಕದ ಮಗು ಪಿಜ್ಜಾ ಆರ್ಡರ್ ಮಾಡಿ ತಿಂದರೆ ಅದು ಮಕ್ಕಳಲ್ಲಿ ಅನಗತ್ಯ ಆಕರ್ಷಣೆ ಮತ್ತು ತಾರತಮ್ಯ ಮೂಡಿಸುತ್ತದೆ. ಇದು ಪೋಷಕರ ಮೇಲೆ ಮತ್ತಷ್ಟು ಒತ್ತಡ ತರುತ್ತದೆ ಎಂದಿದ್ದಾರೆ. ಡೆಲಿವರಿ ಬಾಯ್‌ಗಳು ಪದೇ ಪದೇ ಶಾಲಾ ಆವರಣಕ್ಕೆ ಬರುವುದು ಭದ್ರತೆಯ ದೃಷ್ಟಿಯಿಂದ ಸರಿಯಲ್ಲ. ಪ್ರತಿದಿನ 4-5 ಪಾರ್ಸಲ್‌ಗಳನ್ನು ತರಗತಿಗಳಿಗೆ ತಲುಪಿಸುವುದು ಶಾಲೆಯ ಶಿಸ್ತು ಮತ್ತು ಸಮಯ ಪಾಲನೆಗೆ ಅಡ್ಡಿಪಡಿಸುತ್ತದೆ.

ಮನೆಯ ಊಟಕ್ಕೆ ಆದ್ಯತೆ
ಪೋಷಕರು ಅನಿವಾರ್ಯ ಕಾರಣಗಳಿಂದ ಮನೆಯಲ್ಲಿ ಅಡುಗೆ ಮಾಡಲು ಸಾಧ್ಯವಾಗದಿದ್ದರೆ, ಹೋಟೆಲ್‌ನಿಂದ ತರಿಸಿದ ಆರೋಗ್ಯಕರ ಆಹಾರವನ್ನೇ ಸಾಮಾನ್ಯ ಲಂಚ್ ಬಾಕ್ಸ್‌ನಲ್ಲಿ ಪ್ಯಾಕ್ ಮಾಡಿ ಕಳುಹಿಸಬೇಕು ಎಂದು ಶಾಲೆಗಳು ವಿನಂತಿಸಿವೆ. ವಿದ್ಯಾರ್ಥಿಗಳಿಗೆ ಮಾದರಿಯಾಗಲು ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗಕ್ಕೂ ಸಹ ಆನ್‌ಲೈನ್‌ನಲ್ಲಿ ಆಹಾರ ಆರ್ಡರ್ ಮಾಡುವುದನ್ನು ನಿಷೇಧಿಸಲಾಗಿದೆ.

Related Posts

ಫ್ರಿಜ್ ಮೇಲೆ 5 ವಸ್ತು ಇಡಬೇಡಿ, ಹಣದ ನಷ್ಟ ಗ್ಯಾರಂಟಿ!

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ಸಣ್ಣ ವಸ್ತುಗಳಿಗೂ ಅದರದ್ದೇ ಆದ ಪ್ರಾಮುಖ್ಯತೆ ಇರುತ್ತದೆ. ಅದರಲ್ಲಿಯೂ ಅಡುಗೆಮನೆಯಲ್ಲಿರುವ ಫ್ರಿಜ್ (Refrigerator) ಅತ್ಯಂತ ಪ್ರಮುಖವಾದ ಸಾಧನವಾಗಿದೆ. ಏಕೆಂದರೆ ಇದರಲ್ಲಿ ನಾವು ನಮ್ಮ ಆಹಾರ ಮತ್ತು ತಿನ್ನುವ ವಸ್ತುಗಳನ್ನು ಸಂಗ್ರಹಿಸಿಡುತ್ತೇವೆ. ವಾಸ್ತು ಶಾಸ್ತ್ರದಲ್ಲಿ ಫ್ರಿಜ್…

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹ ಇಡೀ ವಿಶ್ವದ ಗಮನ ಸೆಳೆದಿದೆ. ಇವರಿಬ್ಬರ ರಾಜತಾಂತ್ರಿಕ ಒಡನಾಟವು ಭಾರತ ಮತ್ತು ಇಟಲಿ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಜಿ7…

You Missed

ಫ್ರಿಜ್ ಮೇಲೆ 5 ವಸ್ತು ಇಡಬೇಡಿ, ಹಣದ ನಷ್ಟ ಗ್ಯಾರಂಟಿ!

ಫ್ರಿಜ್ ಮೇಲೆ   5 ವಸ್ತು ಇಡಬೇಡಿ, ಹಣದ ನಷ್ಟ ಗ್ಯಾರಂಟಿ!

ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ !

ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ  !

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!