ಲಕ್ನೋದಲ್ಲಿನ ಕೋಚಿಂಗ್ ಸೆಂಟರ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೃ*ತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಾ*ಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ವಿದ್ಯಾರ್ಥಿಗಳಿಗೂ ತೀವ್ರ ಗಾಯಗಳಾಗಿವೆ
ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಾಪ ವ್ಯಕ್ತಪಡಿಸಿದ್ದು, ಮೃ*ತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.
ಇದೇ ವೇಳೆ ಅಗ್ನಿ ದುರಂತದಲ್ಲಿ ಮೃ*ತಪಟ್ಟ ವಿದ್ಯಾರ್ಥಿಗಳ ಕರುಣಾಜನಕ ಕಥೆಗಳು ಬೆಳಕಿಗೆ ಬರುತ್ತಿವೆ.
23 ವರ್ಷದ ವಿದ್ಯಾರ್ಥಿ ಸುಖಮಣಿ ಸಿಂಗ್, ಬೆಂಕಿಯ ಕೆನ್ನಾಲಿಗೆಯಲ್ಲಿ ಸಿಲುಕಿದ್ದ ವೇಳೆ ತನ್ನ ತಂದೆ ಪ್ರಭಜೋತ್ ಸಿಂಗ್ ಅವರಿಗೆ ಕರೆ ಮಾಡಿ, “ಅಪ್ಪಾ, ಹೇಗಾದರೂ ಮಾಡಿ ನನ್ನನ್ನು ಕಾಪಾಡಿ. ಸುತ್ತಲೂ ಬೆಂಕಿಯೇ ಕಾಣುತ್ತಿದೆ. ಹೊರಗೆ ಬರಲು ದಾರಿಯೇ ಇಲ್ಲ” ಎಂದು ಅಳುತ್ತಾ ಸಹಾಯ ಕೋರಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ತಂದೆ ಮಗನಿಗೆ ಧೈರ್ಯ ತುಂಬಲು ಪ್ರಯತ್ನಿಸುತ್ತಿದ್ದಂತೆಯೇ ಸಂಪರ್ಕ ಕಡಿತಗೊಂಡಿದೆ




