ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಆದೇಶವು 1958ರ ಪ್ರಾಣಿ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಯನ್ನು ಮೀರಿದೆ ಎಂದು ಸರ್ಕಾರ ವಾದಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ ಎಂದು ಆರೋಪಿಸಿ, ಅದನ್ನು ತಡೆಯುವಂತೆ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹ*ತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್​​ ಹೇಳಿತ್ತು.

 

ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಆದೇಶವು 1958ರ ಪ್ರಾಣಿ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಯನ್ನು ಮೀರಿದೆ ಎಂದು ಸರ್ಕಾರ ವಾದಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ ಎಂದು ಆರೋಪಿಸಿ, ಅದನ್ನು ತಡೆಯುವಂತೆ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹ*ತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್​​ ಹೇಳಿತ್ತು.
ಮದ್ರಾಸ್ ಹೈಕೋರ್ಟ್​​ನ ಗೋಹ*ತ್ಯೆ ನಿಷೇಧ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಜುಲೈ 01 ನವದೆಹಲಿ : ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಹೈಕೋರ್ಟ್ ಆದೇಶವು ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ–1958ರ ವ್ಯಾಪ್ತಿಯನ್ನು ಮೀರಿ ನೀಡಲಾಗಿದೆ ಎಂದು ಸರ್ಕಾರ ತನ್ನ ಅರ್ಜಿಯಲ್ಲಿ ವಾದಿಸಿದೆ. ಮೇ 27ರಂದು ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಾಥನ್ ಮತ್ತು ವಿ. ಲಕ್ಷ್ಮೀನಾರಾಯಣ್ ಅವರ ವಿಭಾಗೀಯ ಪೀಠವು, ಕಾಯ್ದೆಯಡಿ ಅನುಮತಿಸಲಾದ ಸಂದರ್ಭಗಳನ್ನು ಹೊರತುಪಡಿಸಿ, ಬಕ್ರೀದ್ ಸೇರಿದಂತೆ ಯಾವುದೇ ದಿನ ಹಸು ಅಥವಾ ಕರುವಿನ ಹ*ತ್ಯೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಸರ್ಕಾರದ ವಾದವೇನು?
ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ–1958ರ ಸೆಕ್ಷನ್ 4ರ ಪ್ರಕಾರ, 10 ವರ್ಷ ಮೇಲ್ಪಟ್ಟ, ಕೆಲಸಕ್ಕೆ ಅಥವಾ ಸಂತಾನೋತ್ಪತ್ತಿಗೆ ಅಯೋಗ್ಯವೆಂದು ಸಂಬಂಧಪಟ್ಟ ಪ್ರಾಧಿಕಾರದಿಂದ ಪ್ರಮಾಣೀಕರಿಸಲ್ಪಟ್ಟ ಹಸುವನ್ನು ಮಾತ್ರ ವ*ಧೆ ಮಾಡಲು ಅವಕಾಶವಿದೆ. ಆದರೆ ಹೈಕೋರ್ಟ್ ಈ ಕಾನೂನು ಚೌಕಟ್ಟನ್ನು ಮೀರಿ ಸಂಪೂರ್ಣ ನಿಷೇಧ ಹೇರಿರುವುದು ಕಾನೂನು ವ್ಯಾಪ್ತಿಯನ್ನು ಮೀರಿದ ಕ್ರಮ ಎಂದು ಸರ್ಕಾರ ಹೇಳಿದೆ.

ಹೈಕೋರ್ಟ್​​ ಆದೇಶ ಏನು?
ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ ಎಂದು ಆರೋಪಿಸಿದ್ದ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ, ಅದನ್ನು ತಡೆಯುವಂತೆ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ವೇಳೆ ಭಾರತ ಸಂವಿಧಾನದ ವಿಧಿ 48ನ್ನು ಉಲ್ಲೇಖಿಸಿದ್ದ ಹೈಕೋರ್ಟ್, ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿತ್ತು. ಬಕ್ರೀದ್ ಸಂದರ್ಭದಲ್ಲಿ ಗೋಹ*ತ್ಯೆ ಮಾಡುವುದು ಇಸ್ಲಾಂ ಧರ್ಮದ ಕಡ್ಡಾಯ ಧಾರ್ಮಿಕ ಆಚರಣೆಯಲ್ಲ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ತೀರ್ಪುಗಳನ್ನೂ ಉಲ್ಲೇಖಿಸಿತ್ತು.

ಬಹಳಷ್ಟು ಮುಸ್ಲಿಮರು ಬಕ್ರೀದ್ ದಿನ ಗೋವನ್ನು ಬ*ಲಿ ನೀಡುವುದಿಲ್ಲ. ಗೋವನ್ನು ಬ*ಲಿ ನೀಡುವುದು ಇಸ್ಲಾಂ ಧರ್ಮದ ಕಡ್ಡಾಯ ಆಚರಣೆಯಲ್ಲ. ಬಕ್ರೀದ್ ಸಂದರ್ಭದಲ್ಲಿ ಯಾವುದೇ ಪ್ರಾಣಿಯನ್ನು ಬ*ಲಿ ನೀಡಬಹುದು; ಅದಕ್ಕೆ ಗೋಹತ್ಯೆಯೇ ಏಕೈಕ ಮಾರ್ಗವಲ್ಲ ಎಂದು ಸುಪ್ರೀಂ ಕೋರ್ಟ್ ಹಿಂದಿನ ತೀರ್ಪಿನಲ್ಲಿ ಹೇಳಿರುವುದನ್ನು ಹೈಕೋರ್ಟ್ ತಿಳಿಸಿತ್ತು. ಆದರೀಗ ಹೈಕೋರ್ಟ್​​ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ

 

 

Related Posts

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಜುಲೈ 1: ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಚಿವರಾದ ಬಳಿಕ ಮೊದಲ ಬಾರಿಗೆ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ದಿವ್ಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.…

ಆಷಾಢ ಶುಕ್ರವಾರಗಳ ಪೂರ್ವಸಿದ್ಧತೆ ಸಭೆ

ಮೈಸೂರು, ಜುಲೈ 1: ಮೈಸೂರಿನ ಚಾಮುಂಡಿ ಬೆಟ್ಟದ ಸಭಾಂಗಣದಲ್ಲಿ ಇಂದು ಆಷಾಢ ಶುಕ್ರವಾರಗಳ ಅಂಗವಾಗಿ ನಡೆಯಲಿರುವ ವಿಶೇಷ ಪೂಜಾ ಕಾರ್ಯಕ್ರಮಗಳ ಪೂರ್ವಸಿದ್ಧತೆ ಕುರಿತು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ…

You Missed

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಡಾ. ಯತೀಂದ್ರ ಸಿದ್ದರಾಮಯ್ಯ

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಡಾ. ಯತೀಂದ್ರ ಸಿದ್ದರಾಮಯ್ಯ

ಆಷಾಢ ಶುಕ್ರವಾರಗಳ ಪೂರ್ವಸಿದ್ಧತೆ ಸಭೆ

ಆಷಾಢ ಶುಕ್ರವಾರಗಳ ಪೂರ್ವಸಿದ್ಧತೆ  ಸಭೆ

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

SIRಗೆ ಕೌಂಟರ್ ಕೊಡುತ್ತಾ ಗೃಹ ಜ್ಯೋತಿ ಪರಿಶೀಲನೆ?

SIRಗೆ ಕೌಂಟರ್ ಕೊಡುತ್ತಾ ಗೃಹ ಜ್ಯೋತಿ ಪರಿಶೀಲನೆ?

ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ!

ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ!

“ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನಿ, ಸಿಎಂಗಳಾಗುತ್ತಾರೆ”: ಬಿ.ಕೆ. ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ

“ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನಿ, ಸಿಎಂಗಳಾಗುತ್ತಾರೆ”: ಬಿ.ಕೆ. ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ