ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಆದೇಶವು 1958ರ ಪ್ರಾಣಿ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಯನ್ನು ಮೀರಿದೆ ಎಂದು ಸರ್ಕಾರ ವಾದಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ ಎಂದು ಆರೋಪಿಸಿ, ಅದನ್ನು ತಡೆಯುವಂತೆ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹ*ತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್​​ ಹೇಳಿತ್ತು.

 

ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಆದೇಶವು 1958ರ ಪ್ರಾಣಿ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಯನ್ನು ಮೀರಿದೆ ಎಂದು ಸರ್ಕಾರ ವಾದಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ ಎಂದು ಆರೋಪಿಸಿ, ಅದನ್ನು ತಡೆಯುವಂತೆ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹ*ತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್​​ ಹೇಳಿತ್ತು.
ಮದ್ರಾಸ್ ಹೈಕೋರ್ಟ್​​ನ ಗೋಹ*ತ್ಯೆ ನಿಷೇಧ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಜುಲೈ 01 ನವದೆಹಲಿ : ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಹೈಕೋರ್ಟ್ ಆದೇಶವು ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ–1958ರ ವ್ಯಾಪ್ತಿಯನ್ನು ಮೀರಿ ನೀಡಲಾಗಿದೆ ಎಂದು ಸರ್ಕಾರ ತನ್ನ ಅರ್ಜಿಯಲ್ಲಿ ವಾದಿಸಿದೆ. ಮೇ 27ರಂದು ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಾಥನ್ ಮತ್ತು ವಿ. ಲಕ್ಷ್ಮೀನಾರಾಯಣ್ ಅವರ ವಿಭಾಗೀಯ ಪೀಠವು, ಕಾಯ್ದೆಯಡಿ ಅನುಮತಿಸಲಾದ ಸಂದರ್ಭಗಳನ್ನು ಹೊರತುಪಡಿಸಿ, ಬಕ್ರೀದ್ ಸೇರಿದಂತೆ ಯಾವುದೇ ದಿನ ಹಸು ಅಥವಾ ಕರುವಿನ ಹ*ತ್ಯೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಸರ್ಕಾರದ ವಾದವೇನು?
ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ–1958ರ ಸೆಕ್ಷನ್ 4ರ ಪ್ರಕಾರ, 10 ವರ್ಷ ಮೇಲ್ಪಟ್ಟ, ಕೆಲಸಕ್ಕೆ ಅಥವಾ ಸಂತಾನೋತ್ಪತ್ತಿಗೆ ಅಯೋಗ್ಯವೆಂದು ಸಂಬಂಧಪಟ್ಟ ಪ್ರಾಧಿಕಾರದಿಂದ ಪ್ರಮಾಣೀಕರಿಸಲ್ಪಟ್ಟ ಹಸುವನ್ನು ಮಾತ್ರ ವ*ಧೆ ಮಾಡಲು ಅವಕಾಶವಿದೆ. ಆದರೆ ಹೈಕೋರ್ಟ್ ಈ ಕಾನೂನು ಚೌಕಟ್ಟನ್ನು ಮೀರಿ ಸಂಪೂರ್ಣ ನಿಷೇಧ ಹೇರಿರುವುದು ಕಾನೂನು ವ್ಯಾಪ್ತಿಯನ್ನು ಮೀರಿದ ಕ್ರಮ ಎಂದು ಸರ್ಕಾರ ಹೇಳಿದೆ.

ಹೈಕೋರ್ಟ್​​ ಆದೇಶ ಏನು?
ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ ಎಂದು ಆರೋಪಿಸಿದ್ದ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ, ಅದನ್ನು ತಡೆಯುವಂತೆ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ವೇಳೆ ಭಾರತ ಸಂವಿಧಾನದ ವಿಧಿ 48ನ್ನು ಉಲ್ಲೇಖಿಸಿದ್ದ ಹೈಕೋರ್ಟ್, ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿತ್ತು. ಬಕ್ರೀದ್ ಸಂದರ್ಭದಲ್ಲಿ ಗೋಹ*ತ್ಯೆ ಮಾಡುವುದು ಇಸ್ಲಾಂ ಧರ್ಮದ ಕಡ್ಡಾಯ ಧಾರ್ಮಿಕ ಆಚರಣೆಯಲ್ಲ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ತೀರ್ಪುಗಳನ್ನೂ ಉಲ್ಲೇಖಿಸಿತ್ತು.

ಬಹಳಷ್ಟು ಮುಸ್ಲಿಮರು ಬಕ್ರೀದ್ ದಿನ ಗೋವನ್ನು ಬ*ಲಿ ನೀಡುವುದಿಲ್ಲ. ಗೋವನ್ನು ಬ*ಲಿ ನೀಡುವುದು ಇಸ್ಲಾಂ ಧರ್ಮದ ಕಡ್ಡಾಯ ಆಚರಣೆಯಲ್ಲ. ಬಕ್ರೀದ್ ಸಂದರ್ಭದಲ್ಲಿ ಯಾವುದೇ ಪ್ರಾಣಿಯನ್ನು ಬ*ಲಿ ನೀಡಬಹುದು; ಅದಕ್ಕೆ ಗೋಹತ್ಯೆಯೇ ಏಕೈಕ ಮಾರ್ಗವಲ್ಲ ಎಂದು ಸುಪ್ರೀಂ ಕೋರ್ಟ್ ಹಿಂದಿನ ತೀರ್ಪಿನಲ್ಲಿ ಹೇಳಿರುವುದನ್ನು ಹೈಕೋರ್ಟ್ ತಿಳಿಸಿತ್ತು. ಆದರೀಗ ಹೈಕೋರ್ಟ್​​ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ

 

 

Related Posts

ಅಹಿಂದ ರಾಜಕೀಯದ ಪರಂಪರೆ ಕಾಯ್ದುಕೊಂಡ ಡಿಕೆಶಿ: ಮುಜರಾಯಿ ಖಾತೆಗೆ ದಲಿತ ಶಾಸಕರ ನೇಮಕ

ಕರ್ನಾಟಕದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರು ಆರಂಭಿಸಿದ ಅಹಿಂದ ಹಾಗೂ ಸಾಮಾಜಿಕ ನ್ಯಾಯದ ಪರಂಪರೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಂದುವರಿಸಿದಂತೆ ಕಾಣುತ್ತಿದೆ. ಇತ್ತೀಚಿನ ಖಾತೆ ಹಂಚಿಕೆಯಲ್ಲಿ ಮಾಯಕೊಂಡ ಶಾಸಕ ಹಾಗೂ ದಲಿತ ಸಮುದಾಯದ ಮುಖಂಡ ಕೆ.ಎಸ್. ಬಸವಂತಪ್ಪ ಅವರಿಗೆ ಮುಜರಾಯಿ, ಮೀನುಗಾರಿಕೆ,…

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

  ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್‌ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್‌ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ. ‘ರಾಮಾಯಣ’ ಟ್ರೇಲರ್…

You Missed

ಅಹಿಂದ ರಾಜಕೀಯದ ಪರಂಪರೆ ಕಾಯ್ದುಕೊಂಡ ಡಿಕೆಶಿ: ಮುಜರಾಯಿ ಖಾತೆಗೆ ದಲಿತ ಶಾಸಕರ ನೇಮಕ

ಅಹಿಂದ ರಾಜಕೀಯದ ಪರಂಪರೆ ಕಾಯ್ದುಕೊಂಡ ಡಿಕೆಶಿ: ಮುಜರಾಯಿ ಖಾತೆಗೆ ದಲಿತ ಶಾಸಕರ ನೇಮಕ

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !