ಈಗ’ ಚಿತ್ರಕ್ಕೆ ಸುದೀಪ್ ಲಾಸ್ಟ್ ಚಾಯ್ಸ್ ಆಗಿತ್ತು; ರಾಜಮೌಳಿ

ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಕಿಚ್ಚ ಸುದೀಪ್ ಕಾಂಬಿನೇಶನ್‌ನ ಸೂಪರ್ ಹಿಟ್ ‘ಈಗ’ ಸಿನಿಮಾ ಇತ್ತೀಚೆಗೆ ವಿದೇಶದ ವಿಶೇಷ ಪ್ರದರ್ಶನದಲ್ಲೂ ಧೂಳೆಬ್ಬಿಸಿದೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಹಳೆಯ ವಿಡಿಯೋದಲ್ಲಿ, ‘ಈಗ’ ಚಿತ್ರದ ಜಟಿಲ ಖಳನಾಯಕನ ಪಾತ್ರಕ್ಕೆ ಸುದೀಪ್ ಅವರನ್ನೇ ಆಯ್ಕೆ ಮಾಡಲು ಇದ್ದ ಮುಖ್ಯ ಕಾರಣ ಹಾಗೂ ಅಮಿತಾಭ್ ಬಚ್ಚನ್ ಎದುರು ಅವರ ನಟನೆ ನೋಡಿ ಬೆರಗಾದ ಕ್ಷಣವನ್ನು ರಾಜಮೌಳಿ ಬಿಚ್ಚಿಟ್ಟಿದ್ದಾರೆ.

‘ಈಗ’ ಚಿತ್ರಕ್ಕೆ ಸುದೀಪ್ ಅವರೇ ಫಸ್ಟ್ ಆ್ಯಂಡ್ ಲಾಸ್ಟ್ ಚಾಯ್ಸ್ ಆಗಿತ್ತು; ರಾಜಮೌಳಿ

ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಸ್ಯಾಂಡಲ್‌ವುಡ್ ಬಾದ್‌ಶಾ ಕಿಚ್ಚ ಸುದೀಪ್ ಕಾಂಬಿನೇಶನ್‌ನ ‘ಈಗ’ ಸಿನಿಮಾ ಎಷ್ಟು ದೊಡ್ಡ ಹಿಟ್ ಆಗಿತ್ತು ಎಂಬುದು ಎಲ್ಲರಿಗೂ ಗೊತ್ತು. ಈ ಚಿತ್ರದಲ್ಲಿ ಸುದೀಪ್ ಅವರ ಅಪ್ರತಿಮ ಖಳನಾಯಕನ ನಟನೆಗೆ ಇಡೀ ಭಾರತೀಯ ಚಿತ್ರರಂಗವೇ ಫಿದಾ ಆಗಿತ್ತು. ಇತ್ತೀಚೆಗೆ ಈ ಸಿನಿಮಾದ ವಿಶೇಷ ಪ್ರದರ್ಶನ ವಿದೇಶದಲ್ಲಿ ನಡೆದಿದ್ದು, ಎಲ್ಲರೂ ಫಿದಾ ಆಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಳೆಯ ಸಂದರ್ಶನದ ವಿಡಿಯೋವೊಂದರಲ್ಲಿ ರಾಜಮೌಳಿ ಅವರು, ‘ಈಗ’ ಚಿತ್ರಕ್ಕೆ ಸುದೀಪ್ ಅವರನ್ನೇ ವಿಲನ್ ಪಾತ್ರಕ್ಕೆ ಆಯ್ಕೆ ಮಾಡಲು ಇದ್ದ ಮುಖ್ಯ ಕಾರಣವನ್ನು ಬಹಿರಂಗಪಡಿಸಿದ್ದರು.

‘ಚಿತ್ರದಲ್ಲಿ ಅಷ್ಟು ಭಯಾನಕ ವಿಲನ್ ಆಗಿರುವ ವ್ಯಕ್ತಿ, ತನ್ನ ಮೊದಲ ಡೈಲಾಗ್‌ನಲ್ಲೇ ‘ಪ್ರತಿ ವಿಷಯಕ್ಕೂ ವೈಲೆನ್ಸ್ ಯಾಕೆ?’ ಅಂತಾನೆ. ಆಮೇಲೆ ಆತ ತುಂಬಾ ವೈಲೆಂಟ್ ಆಗಿ ಬದಲಾಗುತ್ತಾನೆ. ಮಧ್ಯದಲ್ಲಿ ಕಾಮಿಡಿ ಮಾಡುತ್ತಾನೆ, ರೋಮ್ಯಾಂಟಿಕ್ ಆಗುತ್ತಾನೆ, ನಂತರ ಹುಚ್ಚನಂತೆ ಆಡುತ್ತಾನೆ. ಇಷ್ಟೂ ಶೇಡ್‌ಗಳನ್ನು ನಟನೆಯಲ್ಲಿ ತೋರಿಸುವುದು ಕತ್ತಿಯ ಮೇಲಿನ ನಡಿಗೆಯಿದ್ದಂತೆ. ಸ್ವಲ್ಪ ಹೆಚ್ಚು ಕಮ್ಮಿಯಾದರೂ ಅದು ಓವರ್ ಆಕ್ಟಿಂಗ್ ಎನಿಸಿಕೊಳ್ಳುತ್ತದೆ’ ಎಂದು ರಾಜಮೌಳಿ ಆ ಪಾತ್ರದ ಗಾಂಭೀರ್ಯತೆಯನ್ನು ವಿವರಿಸಿದ್ದರು.

ಅಮಿತಾಭ್ ಬಚ್ಚನ್ ಮುಂದೆ ಸುದೀಪ್ ನಟನೆ ನೋಡಿ ಬೆರಗಾಗಿದ್ದರಾಮ್ ಗೋಪಾಲ್ ವರ್ಮಾ ನಿರ್ದೇಶನದ ‘ರನ್’ ಚಿತ್ರದಲ್ಲಿ ಸುದೀಪ್ ಅವರ ನಟನೆಯನ್ನು ನೋಡಿ ತಾನು ಫುಲ್ ಫ್ಲಾಟ್ ಆಗಿದ್ದಾಗಿ ರಾಜಮೌಳಿ ನೆನಪಿಸಿಕೊಂಡಿದ್ದಾರೆ. ‘ರನ್ ಸಿನಿಮಾದಲ್ಲಿ ಸುದೀಪ್ ಅವರ ಸೂಕ್ಷ್ಮ ನಟನೆ ಹಾಗೂ ಮ್ಯಾನರಿಸಂ ಅದ್ಭುತವಾಗಿತ್ತು. ಅದರಲ್ಲೂ ಬಾಲಿವುಡ್ ಮಹಾನಾಯಕ ಅಮಿತಾಭ್ ಬಚ್ಚನ್ ಅವರ ಮುಂದೆಯೇ ಅಷ್ಟು ಭರ್ಜರಿಯಾಗಿ ನಟಿಸುವುದನ್ನು ಕಂಡು, ಸುದೀಪ್ ನಿಜಕ್ಕೂ ಒಬ್ಬ ಗ್ರೇಟ್ ಆಕ್ಟರ್ ಎಂದು ನನಗೆ ಅನಿಸಿತ್ತು. ಹಾಗಾಗಿ ‘ಈಗ’ ಚಿತ್ರದ ಕ್ಯಾರೆಕ್ಟರ್ ರೆಡಿಯಾದ ತಕ್ಷಣ ನಮಗೆ ಮೊದಲು ನೆನಪಾಗಿದ್ದೇ ಸುದೀಪ್’ ಎಂದಿದ್ದರು ರಾಜಮೌಳಿ

ಸುದೀಪ್ ಅವರೇ ಫಸ್ಟ್… ಅವರೇ ಲಾಸ್ಟ್
ಸಂದರ್ಶನದ ಕೊನೆಯಲ್ಲಿ ನಿರೂಪಕರು, ‘ಹಾಗಾದರೆ ಈ ಪಾತ್ರಕ್ಕೆ ನಿಮ್ಮ ಮೊದಲ ಆಯ್ಕೆ ಸುದೀಪ್ ಅವರೇನಾ?’ ಎಂದು ಕೇಳಿದಾಗ, ರಾಜಮೌಳಿ ಅವರು ನಗುತ್ತಾ, ‘ಫಸ್ಟ್ ಚಾಯ್ಸ್ ಕೂಡ ಅವರೇ, ಲಾಸ್ಟ್ ಚಾಯ್ಸ್ ಕೂಡ ಅವರೇ! ಫೈನಲ್ ಆಗಿ ಎಲ್ಲವೂ ಅವರೇ ಆಗಿದ್ದರು’ ಎಂದು ಹೇಳುವ ಮೂಲಕ ಕಿಚ್ಚನ ಮೇಲಿರುವ ತಮ್ಮ ಗೌರವ ಹಾಗೂ ನಂಬಿಕೆಯನ್ನು ವ್ಯಕ್ತಪಡಿಸಿದ್ದರು.

Related Posts

ಬೌದ್ಧ ಸನ್ಯಾಸಿಗಳ ಮೇಲೆ ಹರಿದ ಕಾರು, 9 ಮಂದಿ ಸಾ*ವು

ಥೈಲ್ಯಾಂಡ್‌ನ ಮುಕ್ದಹಾನ್‌ನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. 11 ವರ್ಷದ ಬಾಲಕನೊಬ್ಬ ಅಪ್ಪ ಅಮ್ಮನಿಗೆ ತಿಳಿಯದೆ ಕಾರು ಚಲಾಯಿಸಿ, ತೀರ್ಥಯಾತ್ರೆಗೆ ಹೊರಟಿದ್ದ 9 ಬೌದ್ಧ ಸನ್ಯಾಸಿಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಭೀಕರ ಅಪಘಾತದಲ್ಲಿ ಒಂಬತ್ತು ಸನ್ಯಾಸಿಗಳು ಮೃ*ತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ…

16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ

ಗುವಾಹಟಿ ಹೈಕೋರ್ಟ್ ಇತ್ತೀಚೆಗೆ ವ್ಯಕ್ತಿಯೊಬ್ಬರ ಪೌರತ್ವ ಸಾಬೀತುಪಡಿಸಲು ಸಲ್ಲಿಸಿದ್ದ 16 ಪ್ರಮುಖ ದಾಖಲೆಗಳನ್ನು ತಿರಸ್ಕರಿಸಿದೆ. ಪ್ಯಾನ್, ವೋಟರ್ ಐಡಿ ಸೇರಿದಂತೆ ಹಲವು ದಾಖಲೆಗಳಲ್ಲಿನ ಲೋಪದೋಷಗಳಿಂದಾಗಿ ಅರ್ಜಿದಾರರನ್ನು ವಿದೇಶಿ ಎಂದು ಘೋಷಿಸಲಾಗಿದೆ. ಭಾರತೀಯ ಪೌರತ್ವ ಸಾಬೀತಿಗೆ ವ್ಯಕ್ತಿಯ ಮೇಲೆ ಇರುವ ಹೊಣೆಯ ಜೊತೆಗೆ,…

You Missed

ಬೌದ್ಧ ಸನ್ಯಾಸಿಗಳ ಮೇಲೆ ಹರಿದ ಕಾರು, 9 ಮಂದಿ ಸಾ*ವು

ಬೌದ್ಧ ಸನ್ಯಾಸಿಗಳ ಮೇಲೆ ಹರಿದ ಕಾರು, 9 ಮಂದಿ ಸಾ*ವು

ಈಗ’ ಚಿತ್ರಕ್ಕೆ ಸುದೀಪ್ ಲಾಸ್ಟ್ ಚಾಯ್ಸ್ ಆಗಿತ್ತು; ರಾಜಮೌಳಿ

ಈಗ’ ಚಿತ್ರಕ್ಕೆ ಸುದೀಪ್  ಲಾಸ್ಟ್ ಚಾಯ್ಸ್ ಆಗಿತ್ತು; ರಾಜಮೌಳಿ

16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ

16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ

ಕುಮಾರಸ್ವಾಮಿ ಗಂಭೀರ ಆರೋಪ, ಆಗಿದ್ದೇನು?

ಕುಮಾರಸ್ವಾಮಿ ಗಂಭೀರ ಆರೋಪ, ಆಗಿದ್ದೇನು?

ಜನ ನಾಯಗನ್’ ಚಿತ್ರಕ್ಕೆ ಕೊನೆಗೂ ಸಿಕ್ತು ಸೆನ್ಸಾರ್ ಪತ್ರ?

ಜನ ನಾಯಗನ್’ ಚಿತ್ರಕ್ಕೆ ಕೊನೆಗೂ ಸಿಕ್ತು ಸೆನ್ಸಾರ್ ಪತ್ರ?

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಡಾ. ಯತೀಂದ್ರ ಸಿದ್ದರಾಮಯ್ಯ

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಡಾ. ಯತೀಂದ್ರ ಸಿದ್ದರಾಮಯ್ಯ