ಪೊಲೀಸರ ವಿರುದ್ಧ ವರ್ಷಾ ಹರೀಶ್‌ಗೌಡ ಬೇಸರ

ಮೈಸೂರು, ಜು.7, 2026: ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಅಶ್ಲೀಲ ಕಮೆಂಟ್‌ ಹಾಕಿದ ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದರು, ಪೊಲೀಸರು ಈವರೆಗೂ ಯಾವುದೇ ಕ್ರಮಕೈಗೊಳ್ಳದ ಬಗ್ಗೆ ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಅವರ ಪತ್ನಿ ವರ್ಷ ಹರೀಶ್‌ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧವಾಗಿ ಅಶ್ಲೀಲ ಕಮೆಂಟ್‌ ಹಾಕಿರುವ ಕುರಿತಂತೆ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿ, 10 ದಿನಗಳಾಗಿದೆ. ಆದರೂ ಆರೋಪಿ ಪತ್ತೆ ಮಾಡುವಲ್ಲಿ ಪೊಲೀಸ್‌ ಇಲಾಖೆ ವಿಫಲವಾಗಿದೆ. ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ಸಾಕಷ್ಟು ಮುಂದುವರಿದಿದ್ದು, ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಖಾತೆ ತೆರೆಯಲು ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸುವ ಅಗತ್ಯವಿದೆ. ಇವುಗಳ ಆಧಾರದಲ್ಲಿ ವಿಕೃತಿ ಮೆರೆದಿರುವವರನ್ನು ಪತ್ತೆ ಹಚ್ಚಲು ಸಾಧ್ಯವಿದೆ. ಹೀಗಿದ್ದರು ದೂರು ನೀಡಿ ಹತ್ತು ದಿನಗಳಾದದರೂ ಆರೋಪಿಯ ಪತ್ತೆ ಮಾಡಲು ಪೊಲೀಸರಿಗೆ ಸಾಧ್ಯವಾಗದಿರುವುದು ನಿಜಕ್ಕೂ ಕಳವಳಕಾರಿಯಾಗಿದೆ ಎಂದರು.

ದೂರು ನೀಡಿದರು ಆರೋಪಿ ವಿರುದ್ಧ ಕ್ರಮವಹಿಸದಿರುವ ಪೊಲೀಸರ ನಡೆಯನ್ನು ಗಮನಿಸಿದರೆ ಅಶ್ಲೀಲ ಕಮೆಂಟ್ ಹಾಕಿದ ಆರೋಪಿ ತುಂಬಾ ಪ್ರಭಾವಿ ಇರಬಹುದಾ? ಪ್ರಭಾವ ಬಳಸಿ ಪೊಲೀಸ್ ಇಲಾಖೆ ಮೇಲೆ ಒತ್ತಡ ಹೇರಿರಬಹುದೇ? ಎಂಬ ಕುರಿತಂತೆ ಅನುಮಾನ ವ್ಯಕ್ತವಾಗುತ್ತಿದೆ. ಈ ಪ್ರಕರಣ ನನ್ನ ಮನಸ್ಸಿಗೆ ತುಂಬಾ ಆಘಾತವಾಗಿದೆ, ನೋವಾಗಿದ್ದು, ಪೊಲೀಸರು ಯಾವುದೇ ಒತ್ತಡಗಳು ಅಥವಾ ಪ್ರಭಾವಕ್ಕೊಳಗಾಗದೆ, ಆರೋಪಿಯನ್ನು ಬಂಧಿಸಿ ಕ್ರಮಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದರು.

ಈ ವಿಷಯದಲ್ಲಿ ನನಗೆ ಯಾರ ಮೇಲೂ ಅನುಮಾನವಿಲ್ಲ, ನಾನು ಹುಣಸೂರು ಕ್ಷೇತ್ರದ ಜನರೊಂದಿಗೆ ಹೆಚ್ಚಿನ ಒಡನಾಡ ಹೊಂದಿದ್ದೇನೆ. ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲು ತೆರಳುತ್ತೇನೆ. ಜನರು ಕೂಡ ನನ್ನನ್ನು ಪ್ರೀತಿ, ಅಭಿಮಾನದಿಂದ ಕಾಣುತ್ತಾರೆ. ಇದನ್ನು ಸಹಿಸಲಾರದವರು ಈ ರೀತಿ ಮಾಡಿರಬಹುದು. ನಾನು ರಾಜಕೀಯ ಹಿನ್ನೆಲೆ ಇರುವ ಕುಟುಂಬದಿಂದ ಬಂದಿದ್ದೇನೆ. ಆದರೂ ರಾಜಕೀಯದ ಬಗ್ಗೆ ನನಗೆ ಆಸಕ್ತಿಯಿಲ್ಲ ಮತ್ತು ಮುಂದೆ ಚುನಾವಣೆಗೆ ಸ್ಪರ್ಧಿಸುವ ಉದ್ದೇಶವೂ ನನಗಿಲ್ಲ ಎಂದರು.

Related Posts

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ಅಗತ್ಯ ವಸ್ತುಗಳು ಹಾಗೂ ಇಂಧನ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಂದು ಆರ್ಥಿಕ ಹೊರೆ ನೀಡಿದೆ. ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (PUCC) ಪಡೆಯಲು ಪಾವತಿಸಬೇಕಾದ ಶುಲ್ಕವನ್ನು ಸಾರಿಗೆ ಇಲಾಖೆಯು ಪರಿಷ್ಕರಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ…

You Missed

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ಭಾರತದಲ್ಲಿ ಮೊಬೈಲ್ ಸಂಖ್ಯೆಗಳು 10 ಅಂಕಿಗಳೇ ಏಕೆ ಇರುತ್ತವೆ? ಇದರ ಹಿಂದಿನ ಗಣಿತದ ಲೆಕ್ಕಾಚಾರವೇನು?

ಭಾರತದಲ್ಲಿ ಮೊಬೈಲ್ ಸಂಖ್ಯೆಗಳು 10 ಅಂಕಿಗಳೇ ಏಕೆ ಇರುತ್ತವೆ? ಇದರ ಹಿಂದಿನ ಗಣಿತದ ಲೆಕ್ಕಾಚಾರವೇನು?

ಚಾಮರಾಜನಗರ ಶೂ*ಟೌಟ್ ಪ್ರಕರಣ: ಅರಣ್ಯ ಇಲಾಖೆ ವಿರುದ್ಧ ಮೃ*ತರ ಕುಟುಂಬಸ್ಥರ ಗಂಭೀರ ಆರೋಪ

ಚಾಮರಾಜನಗರ ಶೂ*ಟೌಟ್ ಪ್ರಕರಣ: ಅರಣ್ಯ ಇಲಾಖೆ ವಿರುದ್ಧ ಮೃ*ತರ ಕುಟುಂಬಸ್ಥರ ಗಂಭೀರ ಆರೋಪ

ಅಹಿಂದ ರಾಜಕೀಯದ ಪರಂಪರೆ ಕಾಯ್ದುಕೊಂಡ ಡಿಕೆಶಿ: ಮುಜರಾಯಿ ಖಾತೆಗೆ ದಲಿತ ಶಾಸಕರ ನೇಮಕ

ಅಹಿಂದ ರಾಜಕೀಯದ ಪರಂಪರೆ ಕಾಯ್ದುಕೊಂಡ ಡಿಕೆಶಿ: ಮುಜರಾಯಿ ಖಾತೆಗೆ ದಲಿತ ಶಾಸಕರ ನೇಮಕ

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !