ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್


 

ಕೆಲವು ಸಿನಿಮಾಗಳನ್ನು ನಿರ್ದೇಶಿಸಿ, ನಟನೆ ಸಹ ಮಾಡಿದ್ದರು ಪಿ ಲಂಕೇಶ್. ಇದೀಗ ಅವರ ಮೂರನೇ ತಲೆಮಾರು ಅಂದರೆ ಮೊಮ್ಮಕ್ಕಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಲಂಕೇಶ್ ಅವರ ಪುತ್ರ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದೀಗ ಲಂಕೇಶ್ ಅವರ ಪುತ್ರಿ, ನಿರ್ದೇಶಕಿ ಕವಿತಾ ಲಂಕೇಶ್ ಅವರ ಮಗಳು

ಕನ್ನಡ ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ದೊಡ್ಡ ಹೆಸರಾಗಿರುವ ಪಿ ಲಂಕೇಶ್ ಅವರು ಚಿತ್ರರಂಗದಲ್ಲಿಯೂ ಕೃಷಿ ಮಾಡಿದ್ದರು. ಕೆಲವು ಸಿನಿಮಾಗಳನ್ನು ನಿರ್ದೇಶಿಸಿ, ನಟನೆ ಸಹ ಮಾಡಿದ್ದರು ಲಂಕೇಶ್. ಇದೀಗ ಅವರ ಮೂರನೇ ತಲೆಮಾರು ಅಂದರೆ ಮೊಮ್ಮಕ್ಕಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಲಂಕೇಶ್ ಅವರ ಪುತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದೀಗ ಲಂಕೇಶ್ ಅವರ ಮೊಮ್ಮಗಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

ನಿರ್ದೇಶಕಿ ಕವಿತಾ ಲಂಕೇಶ್ ಅವರ ಪುತ್ರಿ ಇಶಾ ಲಂಕೇಶ್ ಇದೀಗ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ರಂಗಭೂಮಿಯಲ್ಲಿ ಸಕ್ರಿಯರಾಗಿರುವ ಇಶಾ ಲಂಕೇಶ್ ಅವರು ನಟನಾ ತರಬೇತಿಗಳನ್ನು ಸಹ ಪಡೆದಿದ್ದಾರಂತೆ. ಇದೀಗ ಹೊಸ ಕನ್ನಡ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ. ಅವರ ಮೊದಲ ಸಿನಿಮಾವನ್ನು ಖ್ಯಾತ ಕತೆಗಾರ, ನಿರ್ದೇಶಕ ಪ್ರೀತಂ ಗುಬ್ಬಿ ನಿರ್ದೇಶನ ಮಾಡಲಿದ್ದಾರೆ.

ಸಿನಿಮಾಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿರುವುದಾಗಿ ಹೇಳಿರುವ ಇಶಾ ಲಂಕೇಶ್, ತಮಗೆ ನಟಿ ಆಗಬೇಕೆಂಬ ಕನಸು ತಮ್ಮ ತಾಯಿಯಿಂದಲೇ ಬಂತು ಎಂದಿದ್ದಾರೆ. ತಾಯಿ ಕವಿತಾ ಲಂಕೇಶ್ ನಿರ್ದೇಶನ ಮಾಡುತ್ತಿದ್ದ ಸಿನಿಮಾಗಳ ಸೆಟ್​​ಗಳಲ್ಲಿ ಓಡಾಡಿ, ಅಲ್ಲಿನ ವಾತಾವರಣ ನೋಡಿ ತಮಗೆ ನಟಿಯಾಗಬೇಕು ಎಂಬ ಆಸೆ ಮೂಡಿತು ಎಂದಿದ್ದಾರೆ. ದೆಹಲಿಯ ಅಶೋಕ ಯೂನಿವರ್ಸಿಟಿಯಲ್ಲಿ ಇಂಗ್ಲೀಷ್ ಲಿಟ್ರೇಚರ್ ಮತ್ತು ಫರ್ಫಾರ್ಮೆನ್ಸ್ ಕಲಿತಿರುವ ಇಶಾ, ಅಲ್ಲಿಯೇ ರಂಗಭೂಮಿಯಲ್ಲೂ ತೊಡಗಿದ್ದರಂತೆ.

ಬಳಿಕ ಬ್ರಿಟನ್​​ನಲ್ಲಿ ನಟನೆಗೆ ಸಂಬಂಧಿಸಿದ ಕೋರ್ಸ್ ಒಂದನ್ನು ಸಹ ಮುಗಿಸಿ ಬಂದಿದ್ದಾರೆ. ಇಲ್ಲಿ, ಪ್ರಕಾಶ್ ರೈ ಅವರ ನಿರ್ದಿಗಂತ ರಂಗಭೂಮಿ ಥಿಯೇಟರ್​​ನಲ್ಲಿ ಕೋರ್ಸ್​​ ಮಾಡಿದ್ದು, ನಾಟಕಗಳಲ್ಲಿ ನಟಿಸಿದ್ದಾರೆ. ಕೆಲವು ಜಾಹೀರಾತುಗಳಿಗೆ, ಸಿನಿಮಾಗಳಿಗೆ ಸಹ ಇಲ್ಲಿ ಆಡಿಷನ್ ನೀಡಿದ್ದರಂತೆ. ಕೊನೆಗೆ ಪ್ರೀತಂ ಗುಬ್ಬಿ ಅವರು ಆಸಕ್ತಿವಹಿಸಿ, ಕತೆಯೊಂದನ್ನು ಹೇಳಿದ್ದು, ಇದೀಗ ಸಿನಿಮಾ ಅನ್ನು ಇಶಾ ಒಪ್ಪಿಕೊಂಡಿದ್ದಾರೆ. ಇದು ಅಡ್ವೇಂಚರಸ್ ಪ್ರೇಮಕತೆ ಎಂದು ಇಶಾ ತಮ್ಮ ಮೊದಲ ಸಿನಿಮಾವನ್ನು ಬಣ್ಣಿಸಿದ್ದಾರೆ.

ಲಂಕೇಶ್ ಅವರು ‘ಪಲ್ಲವಿ’, ‘ಖಂಡವಿದೆಕೊ, ಮಾಂಸವಿದೆಕೊ’, ‘ಎಲ್ಲಿಂದಲೋ ಬಂದವರು’ ಸಿನಿಮಾಗಳನ್ನು ನಿರ್ದೇಶಿಸಿದ್ದರು. ‘ಸಂಸ್ಕಾರ’ ಸಿನಿಮಾನಲ್ಲಿ ನಟನೆಯನ್ನೂ ಮಾಡಿದ್ದರು. ಬಳಿಕ ಅವರ ಪುತ್ರ ಇಂದ್ರಜಿತ್ ಲಂಕೇಶ್, ‘ಮೊನಾಲಿಸಾ’, ‘ತುಂಟಾಟ’, ‘ಐಶ್ವರ್ಯಾ’, ‘ಹುಡುಗ ಹುಡುಗಿ’, ‘ಲಂಕೇಶ್ ಪತ್ರಿಕೆ’ ಇನ್ನೂ ಕೆಲವು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇಂದ್ರಜಿತ್ ಅವರ ಪುತ್ರ ಸಮರ್ಜಿತ್ ಅವರು ಇತ್ತೀಚೆಗಷ್ಟೆ ‘ಗೌರಿ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಇನ್ನು ಲಂಕೇಶ್ ಅವರ ಪುತ್ರಿ ಕವಿತಾ ಲಂಕೇಶ್, ‘ದೇವಿರಿ’, ‘ಅವ್ವ’ ಸೇರಿದಂತೆ ಇನ್ನೂ ಕೆಲ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇದೀಗ ಕವಿತಾ ಅವರ ಪುತ್ರಿ ಇಶಾ, ನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಅವರ ಮೊದಲ ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ, ಸಿನಿಮಾದ ಇತರೆ ಪಾತ್ರವರ್ಗವನ್ನು ಶೀಘ್ರವೇ ಘೋಷಿಸಲಾಗುತ್ತದೆಯಂತೆ.

Related Posts

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ಮಠ-ಮಾನ್ಯಗಳು ಮತ್ತು ಸಂಸ್ಥೆಗಳ ಆಡಳಿತದಲ್ಲಿ ಆರ್ಥಿಕ ಪಾರದರ್ಶಕತೆ ಅತ್ಯಗತ್ಯವೆಂದು ಪ್ರತಿಪಾದಿಸಿದ್ದಾರೆ. ಆಯೋಧ್ಯೆಯ ರಾಮಮಂದಿರದ ಹುಂಡಿ ಕಳ್ಳತನದ ಕುರಿತು ಪ್ರತಿಕ್ರಿಯಿಸಿದ ಶ್ರೀಗಳು, ಈ ಪ್ರಕರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಹಾಗೂ ನ್ಯಾಯಾಲಯದಲ್ಲಿ ತನಿಖೆ…

You Missed

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ

ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!