ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ. 23ರವರೆಗೆ ಕಲಾಪಗಳು ನಡೆಯಲಿವೆ.
ಹಿಂದಿನ ಅಧಿವೇಶನದ ಅವಧಿಯಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಆರೋಪದಡಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ತೀವ್ರ ಹೋರಾಟ ನಡೆಸಿತ್ತು. ಅಹೋರಾತ್ರಿ ಧರಣಿಗೂ ಬಿಜೆಪಿ ಸಿದ್ಧತೆ ನಡೆಸಿದ್ದರಿಂದ, ನಿಗದಿತ ಅವಧಿಗಿಂತ ಮೂರು ದಿನ ಮುಂಚಿತವಾಗಿಯೇ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು.
ಇದೀಗ ಮತ್ತೆ ಆಯೋಜಿಸಲಾಗಿರುವ ಈ ವಿಶೇಷ ಅಧಿವೇಶನದಲ್ಲಿ, ಪ್ರಮುಖವಾಗಿ ಕಸ್ತೂರಿ ರಂಗನ್ ವರದಿ ಜಾರಿ ಹಾಗೂ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿಸ್ತೃತ ಚರ್ಚೆಗಳು ನಡೆಯಲಿವೆ.




