ದೇಗುಲಯಕ್ಕೆ ಲಕ್ಷಾಂತರ ರೂ ದೇಣಿಗೆ ನೀಡಿದ ಭಿಕ್ಷುಕಿ: ಭಿಕ್ಷುಕಿಯಾದ್ರು ಮಹಾದಾನಿಯಾದ ರಂಗಮ್ಮ!…

ದಾನ ಮಾಡಲು, ದೇಣಿಗೆ ನೀಡಲು ಶ್ರೀಮಂತರೇ ಆಗಬೇಕಿಲ್ಲ. ಹೃದಯ ಶ್ರೀಮಂತಿಕೆಯಿದ್ರೆ ಭಿಕ್ಷುಕರು ಸಹ ಲಕ್ಷಾಂತರ ರೂಪಾಯಿ ದೇಣಿಗೆ ನೀಡಬಹುದು. ಹಾಗೆಯೇ 60 ವರ್ಷದ ರಂಗಮ್ಮ ಎಂಬುವವರು ಭಿಕ್ಷೆಯಿಂದ ಬಂದ ಹಣದಲ್ಲೇ ಲಕ್ಷಾಂತರ ರೂಪಾಯಿ ದೇಣಿಗೆ ನೀಡಿದ್ದಾರೆ. ಅಸಹಾಯಕ ಭಿಕ್ಷುಕರ ಬಗ್ಗೆ ಎಲ್ಲರಿಗೂ ಕರುಣೆ ಬರುವುದು ಸಾಮಾನ್ಯ. ಆದರೆ ಇತ್ತೀಚೆಗೆ ರಾಜ್ಯಾದ್ಯಂತ ಭಿಕ್ಷಾಟನೆ ದಂಧೆಯಾಗಿ ಮಾರ್ಪಟ್ಟಿದೆ. ಭಿಕ್ಷಾಟನೆ ನೆಪದಲ್ಲಿ ಸಾರ್ವಜನಿಕರಿಗೆ ಕಿರುಕುಳ ಕೊಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಇದರ ಮಧ್ಯೆ ರಾಯಚೂರಿನ ಭಿಕ್ಷುಕಿ ದೇವಸ್ಥಾನದ ಅಭಿವೃದ್ಧಿಗೆ ಬರೋಬ್ಬರಿ 1.83 ಲಕ್ಷ ದೇಣಿಗೆ ನೀಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾಳೆ.

ರಾಯಚೂರು : ದಾನ ಮಾಡಲು, ದೇಣಿಗೆ ನೀಡಲು ಶ್ರೀಮಂತರೇ ಆಗಬೇಕಿಲ್ಲ. ಹೃದಯ ಶ್ರೀಮಂತಿಕೆಯಿದ್ರೆ ಭಿಕ್ಷುಕರು ಸಹ ಲಕ್ಷಾಂತರ ರೂಪಾಯಿ ದೇಣಿಗೆ ನೀಡಬಹುದು. ಅದರಂತೆ60 ವರ್ಷದ ರಂಗಮ್ಮ ಎಂಬುವವರು ಭಿಕ್ಷೆಯಿಂದ ಬಂದ ಹಣದಲ್ಲೇ ಲಕ್ಷಾಂತರ ರೂಪಾಯಿ ದೇಣಿಗೆ ನೀಡಿ ಮಾದರಿಯಾಗಿದ್ದಾಳೆ. ಹೌದು.. ರಾಯಚೂರು ತಾಲೂಕಿನ ಬಿಜನಗೇರಾ ಆಂಜನೇಯ ದೇಗುಲ ನಿರ್ಮಾಣಕ್ಕಾಗಿ ವಯಸ್ಸಾದ ಭಿಕ್ಷುಕಿಯೊಬ್ಬರು 1.83 ಲಕ್ಷ ರೂ. ದೇಣಿಗೆ ನೀಡಿ ಗಮನಸೆಳೆದಿದ್ದಾಳೆ. ಬಿಜನಗೇರಾ ಗ್ರಾಮದ 60 ವರ್ಷದ ರಂಗಮ್ಮ ಬಿಕ್ಷೆ ಎತ್ತಿದ್ದ ಬರೋಬ್ಬರಿ 1.83 ಲಕ್ಷ ರೂಪಾಯಿ ಹಣವನ್ನು ಊರಿನ ಆಂಜನೇಯ ದೇವಸ್ಥಾನ ಜೀರ್ಣೋದ್ಧಾರಕ್ಕೆ ನೀಡಿದ್ದಾಳೆ. ಈ ಮೂಲಕ ಭಿಕ್ಷಾಟನೆ ಹಣದಲ್ಲಿ ಮಜಾ ಉಡಾಯಿಸೋರ ಮಧ್ಯೆ ಜನರ ದುಡ್ಡು ಜನರಿಗೆ ತಲುಪಿಸಿದ ಹೃದಯವಂತೆ ಎನಿಸಿಕೊಂಡಿದ್ದಾಳೆ.

ಕಳೆದ ಆರು ವರ್ಷಗಳಿಂದ ಬಿಕ್ಷಾಟನೆಯಿಂದ ಬಂದಿದ್ದ ಹಣವನ್ನು ಮೂರು ಗೋಣಿ ಚೀಲದಲ್ಲಿ ಸಂಗ್ರಹಿಸಿಟಿದ್ದ ನೋಟುಗಳು, ಚಿಲ್ಲರೆ ಹಣವನ್ನು 20 ಕ್ಕು ಹೆಚ್ಚು ಜನರು ಬರೋಬ್ಬರಿ 6 ಗಂಟೆಗಳ ಕಾಲ ಎಣಿಕೆ ಮಾಡಿದ್ದಾರೆ. ಈ ವೇಳೆ ಗೋಣಿ ಚೀಲದಲ್ಲಿ ತೇವಗೊಂಡಿದ್ದ 20 ಸಾವಿರ ಮೌಲ್ಯದ ನೋಟುಗಳು ಹಾಳಾಗಿರುವುದು ಕಂಡುಬಂದಿದೆ. ಆಂಧ್ರ ಮೂಲದ ರಂಗಮ್ಮ 40 ವರ್ಷಗಳ ಹಿಂದೆಯೇ ಬಿಜ್ಜನಗೆರಾ ಗ್ರಾಮಕ್ಕೆ ಆಗಮಿಸಿದ್ದು, ಅಂದಿನಿಂದಲೇ ಭಿಕ್ಷಾಟನೆ ಮಾಡುತ್ತಿದ್ದಾಳೆ.

ಬೈಕ್ ಸವಾರರು, ಆಟೋ ಸೇರಿ ವಿವಿಧ ವಾಹನಗಳ ಸವಾರರಿಂದ ಮಾತ್ರ ಭಿಕ್ಷೆ ಬೇಡುತ್ತಿದ್ದಳು. ಈ ಹಿಂದೆ ಆಕೆಯ ಭಿಕ್ಷಾಟನೆ ಹಣದಲ್ಲೇ ಗ್ರಾಮಸ್ಥರು 1 ಲಕ್ಷ ವೆಚ್ಚದಲ್ಲಿ ಆಕೆಗೆ ಸೂರು ನಿರ್ಮಿಸಿ ಕೊಟ್ಟಿದ್ದರು. ಈಗ ಭಿಕ್ಷಾಟನೆ ಹಣದಲ್ಲಿ ಮಜಾ ಉಡಾಯಿಸುವವರ ಮಧ್ಯೆ ಜನರ ದುಡ್ಡು ಜನರಿಗೆ ತಲುಪಿಸಿದ ಹೃದಯವಂತೆ ರಂಗಮ್ಮ ಎಣಿಸಿಕೊಂಡಿದ್ದಾಳೆ.

ಯಾರ ಬಳಿಯೂ ಮಾತನಾಡದ ವೃದ್ಧೆ ಡಬ್ಬಿ, ಗಂಟುಗಳಲ್ಲಿ ಕೂಡಿಟ್ಟಿದ್ದ ಹಣ ಆಕಸ್ಮಿಕವಾಗಿ ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ. ಗ್ರಾಮಸ್ಥರೇ ಹಣವನ್ನ ಎಣಿಸಿ, ಈ ಹಣ ಏನು ಮಾಡುತ್ತಿಯಾ ಅಂತ ವೃದ್ಧೆಯನ್ನ ಕೇಳಿದ್ದಾರೆ. ಆಗ ಆಕೆ ದೇವಸ್ಥಾನ ನಿರ್ಮಾಣಕ್ಕೆ ದೇಣಿಗೆಯಾಗಿ ನೀಡುವುದಾಗಿ ತಿಳಿಸಿದ್ದಾಳೆ. ಇದರೊಂದಿಗೆ ರಂಗಮ್ಮ ಭಿಕ್ಷುಕಿಯಾದ್ರು ಮಹಾದಾನಿಯಾಗಿದ್ದಾಳೆ.

4*5 ಅಡಿ ಸೂರಿನಲ್ಲೇ ಇರುವ ರಂಗಮ್ಮಳಿಗೆ ಜನ ಇದ್ದಲ್ಲಿಗೆ ಬಂದು ಭಿಕ್ಷೆ ಕೊಟ್ಟು ಹೋಗುತ್ತಾರೆ. ಊರಿನವರೇ ಸೀರೆ, ಊಟ ಕೊಡುತ್ತಿದ್ದಾರೆ. ದಾರಿಹೋಕರು, ಆಟೋ ರಿಕ್ಷಾ ಚಾಲಕರು, ಟಂಟಂ ಚಾಲಕರು ವೃದ್ಧೆಗೆ ಹಣ ನೀಡಿದರೆ ತಮ್ಮ ವ್ಯಾಪಾರ ಜೋರಾಗಿ ನಡೆಯುತ್ತದೆ ಎಂದು ನಿತ್ಯ ಹತ್ತು, ಇಪ್ಪತ್ತು, ನೂರು ರೂಪಾಯಿ ಸೇರಿ ತಿಳಿದಷ್ಟು ಕೊಡುತ್ತಾರೆ. ಈ ಭಿಕ್ಷೆಯ ಹಣವನ್ನೇ ವೃದ್ಧೆ ದೇವಸ್ಥಾನದ ನಿರ್ಮಾಣಕ್ಕೆ ತನ್ನ ಸೇವೆಯೂ ಇರಲಿ ಎಂದು ನೀಡಿದ್ದಾರೆ.

ಇತ್ತೀಚಿಗೆ ದೇವಸ್ಥಾನ ಲೋಕಾರ್ಪಣೆಯಾಗಿದ್ದು, ಈ ವೇಳೆ ದಾನ ಮಾಡಿದ್ದ ರಂಗಮ್ಮಳ ಕಾರ್ಯಕ್ಕೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಆಕೆಯನ್ನು ಕರೆದು ಸನ್ಮಾನಿಸಿ ಗೌರವಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!