ಕನ್ನಡದ ಖ್ಯಾತ ನಟನಿಂದ ‘TEDDY BEAR’ ಅವತಾರದಲ್ಲಿ ಸಿನಿಮಾ ಪ್ರಚಾರ!

ಸಿನಿಮಾ ಯಶಸ್ಸಿಗೆ ಪ್ರಚಾರ ಅತ್ಯಗತ್ಯ. ಅದರಂತೆ, ಚಿತ್ರತಂಡಗಳು ವಿಭಿನ್ನವಾಗಿ ಪ್ರಮೋಶನ್ ಈವೆಂಟ್ಗಳನ್ನು ಆಯೋಜಿಸಿ ಪ್ರೇಕ್ಷಕರನ್ನು ತಲುಪುವ ಪ್ರಯತ್ನ ನಡೆಸುತ್ತವೆ. ಅದರಂತೆ, ಇದೀಗ ಕನ್ನಡದ ಖ್ಯಾತ ನಟರೋರ್ವರು ಟೆಡ್ಡಿಬೇರ್ ವೇಷ ಧರಿಸಿ ತಮ್ಮ ಸಿನಿಮಾವನ್ನು ವಿಭಿನ್ನವಾಗಿ ಪ್ರಚಾರ ಮಾಡಿ ಜನಮನ ಸೆಳೆದಿದ್ದಾರೆ. ಶೀರ್ಷಿಕೆಯಿಂದಲೇ ಕನ್ನಡ ಚಿತ್ರರಂಗದಲ್ಲಿ ಟಾಕ್ ಆಗುತ್ತಿರುವ ಸಿನಿಮಾ ”ಎಡಗೈಯೇ ಅಪಘಾತಕ್ಕೆ ಕಾರಣ”. ಸ್ಯಾಂಡಲ್ವುಡ್ನ ದೂದ್ ಪೇಡಾ ಖ್ಯಾತಿಯ ದಿಗಂತ್ ಮಂಚಾಲೆ ಮುಖ್ಯಭೂಮಿಕೆಯಲ್ಲಿರೋ ಈ ಬಹುನಿರೀಕ್ಷಿತ ಚಿತ್ರ ವಿಭಿನ್ನ ಕಾನ್ಸೆಪ್ಟ್ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿದೆ.


”ಎಡಗೈಯೇ ಅಪಘಾತಕ್ಕೆ ಕಾರಣ” ಚಿತ್ರತಂಡವು ಮೊದಲಿನಿಂದಲೂ ಬಹಳ ಡಿಫ್ರೆಂಟ್ ಆಗಿ ಪ್ರಮೋಶನ್ ಮಾಡುತ್ತಾ ಬಂದಿದೆ. ಈ ಹಿಂದೆ ಎಡಗೈ ಬಳಸುವವರಿಗೆ ಹೆಲ್ಮೆಟ್ ನೀಡಲಾಗಿತ್ತು. ನಂತರ ಮಾಡಿಸಲಾದ ಫೋಟೋಶೂಟ್ ಆನ್ಲೈನ್ನಲ್ಲಿ ಸದ್ದು ಮಾಡಿತ್ತು. ಇದೀಗ ಮತ್ತೊಂದು ಯೂನಿಕ್ ಕಾನ್ಸೆಪ್ಟ್ನೊಂದಿಗೆ ಚಿತ್ರತಂಡ ಸಾರ್ವಜನಿಕರೆದುರು ಬಂದಿದೆ.

ಹೌದು, ಬೆಂಗಳೂರಿನ ಮಾಲ್ ಒಂದರಲ್ಲಿ, ಟೆಡ್ಡಿಬೇರ್ ವೇಷ ಧರಿಸಿ, ಶೇಕ್ ಹ್ಯಾಂಡ್ ವಿತ್ ಲೆಫ್ಟ್ ಹ್ಯಾಂಡ್ ಆ್ಯಂಡ್ ಗೆಟ್ ಸರ್ಪೈಸ್ ಎಂಬ ನಾಮಫಲಕವನ್ನಿಡಿದು ವ್ಯಕ್ತಿಯೋರ್ವರು ಓಡಾಡುತ್ತಿದ್ದರು. ಪ್ರೇಕ್ಷಕರು ಥಿಯೇಟರ್ಗೆ ಬರುತ್ತಿಲ್ಲವೆಂಬ ಮಾತುಗಳು ಕೇಳಿಬರುತ್ತಿರೋ ಹೊತ್ತಲ್ಲಿ, ತಮ್ಮ ಸಿನಿಮಾ ಗೆಲ್ಲಿಸಲು ತಂಡ ಎಷ್ಟು ಶ್ರಮ ವಹಿಸುತ್ತದೆ ಎಂಬುದಕ್ಕಿದು ಬೆಸ್ಟ್ ಉದಾಹರಣೆಯಾಗಿದೆ.


ಅಷ್ಟಕ್ಕೂ ಹೀಗೆ ಟೆಡ್ಡಿ ಬೇರ್ ವೇಷ ಹಾಕಿ ಬೋರ್ಡ್ ಹಿಡಿದು ಆ ಕಡೆ ಈ ಕಡೆ ಓಡಾಡುತ್ತಿದ್ದ ವ್ಯಕ್ತಿ ಬೇರೆ ಯಾರೂ ಅಲ್ಲ. ನಟ ದಿಗಂತ್. ಯೆಸ್, ತಮ್ಮ ಸಿನಿಮಾವನ್ನು ಸಖತ್ ಯೂನಿಕ್ ಆಗಿ ಪ್ರಚಾರ ಮಾಡುತ್ತಿರೋ ದಿಗಂತ್ ಅವರನ್ನು ಕಣ್ತುಂಬಿಕೊಂಡ ಜನರಿಗಿದು ಸರ್ಪೈಸ್ ಅಂತಲೇ ಹೇಳಬಹುದು. ಸಮರ್ಥ್ ಬಿ.ಕಡಕೊಳ್ ಆ್ಯಕ್ಷನ್ ಕಟ್ ಹೇಳಿರುವ ಚಿತ್ರದಲ್ಲಿ ದಿಗಂತ್ ಮಂಚಾಲೆ ಜೋಡಿಯಾಗಿ ನಟಿ ಧನು ಹರ್ಷ ಅಭಿನಯಿಸಿದ್ದಾರೆ. ಇನ್ನುಳಿದಂತೆ, ಖ್ಯಾತ ನಟಿಯರಾದ ರಾಧಿಕಾ ನಾರಾಯಣ್ ಮತ್ತು ನಿಧಿ ಸುಬ್ಬಯ್ಯ ಕೂಡಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಪಾತ್ರದಲ್ಲಿ ನಿರೂಪ್ ಭಂಡಾರಿ ಅಭಿನಯಿಸಿದ್ದಾರೆ. ಸಮರ್ಥ್ ಅವರಿಗಿದು ಮೊದಲ ನಿರ್ದೇಶನದ ಚಿತ್ರ ಅಂತಲೇ ಹೇಳಬಹುದು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!