ಕನ್ನಡದ ಖ್ಯಾತ ನಟನಿಂದ ‘TEDDY BEAR’ ಅವತಾರದಲ್ಲಿ ಸಿನಿಮಾ ಪ್ರಚಾರ!

ಸಿನಿಮಾ ಯಶಸ್ಸಿಗೆ ಪ್ರಚಾರ ಅತ್ಯಗತ್ಯ. ಅದರಂತೆ, ಚಿತ್ರತಂಡಗಳು ವಿಭಿನ್ನವಾಗಿ ಪ್ರಮೋಶನ್ ಈವೆಂಟ್ಗಳನ್ನು ಆಯೋಜಿಸಿ ಪ್ರೇಕ್ಷಕರನ್ನು ತಲುಪುವ ಪ್ರಯತ್ನ ನಡೆಸುತ್ತವೆ. ಅದರಂತೆ, ಇದೀಗ ಕನ್ನಡದ ಖ್ಯಾತ ನಟರೋರ್ವರು ಟೆಡ್ಡಿಬೇರ್ ವೇಷ ಧರಿಸಿ ತಮ್ಮ ಸಿನಿಮಾವನ್ನು ವಿಭಿನ್ನವಾಗಿ ಪ್ರಚಾರ ಮಾಡಿ ಜನಮನ ಸೆಳೆದಿದ್ದಾರೆ. ಶೀರ್ಷಿಕೆಯಿಂದಲೇ ಕನ್ನಡ ಚಿತ್ರರಂಗದಲ್ಲಿ ಟಾಕ್ ಆಗುತ್ತಿರುವ ಸಿನಿಮಾ ”ಎಡಗೈಯೇ ಅಪಘಾತಕ್ಕೆ ಕಾರಣ”. ಸ್ಯಾಂಡಲ್ವುಡ್ನ ದೂದ್ ಪೇಡಾ ಖ್ಯಾತಿಯ ದಿಗಂತ್ ಮಂಚಾಲೆ ಮುಖ್ಯಭೂಮಿಕೆಯಲ್ಲಿರೋ ಈ ಬಹುನಿರೀಕ್ಷಿತ ಚಿತ್ರ ವಿಭಿನ್ನ ಕಾನ್ಸೆಪ್ಟ್ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿದೆ.


”ಎಡಗೈಯೇ ಅಪಘಾತಕ್ಕೆ ಕಾರಣ” ಚಿತ್ರತಂಡವು ಮೊದಲಿನಿಂದಲೂ ಬಹಳ ಡಿಫ್ರೆಂಟ್ ಆಗಿ ಪ್ರಮೋಶನ್ ಮಾಡುತ್ತಾ ಬಂದಿದೆ. ಈ ಹಿಂದೆ ಎಡಗೈ ಬಳಸುವವರಿಗೆ ಹೆಲ್ಮೆಟ್ ನೀಡಲಾಗಿತ್ತು. ನಂತರ ಮಾಡಿಸಲಾದ ಫೋಟೋಶೂಟ್ ಆನ್ಲೈನ್ನಲ್ಲಿ ಸದ್ದು ಮಾಡಿತ್ತು. ಇದೀಗ ಮತ್ತೊಂದು ಯೂನಿಕ್ ಕಾನ್ಸೆಪ್ಟ್ನೊಂದಿಗೆ ಚಿತ್ರತಂಡ ಸಾರ್ವಜನಿಕರೆದುರು ಬಂದಿದೆ.

ಹೌದು, ಬೆಂಗಳೂರಿನ ಮಾಲ್ ಒಂದರಲ್ಲಿ, ಟೆಡ್ಡಿಬೇರ್ ವೇಷ ಧರಿಸಿ, ಶೇಕ್ ಹ್ಯಾಂಡ್ ವಿತ್ ಲೆಫ್ಟ್ ಹ್ಯಾಂಡ್ ಆ್ಯಂಡ್ ಗೆಟ್ ಸರ್ಪೈಸ್ ಎಂಬ ನಾಮಫಲಕವನ್ನಿಡಿದು ವ್ಯಕ್ತಿಯೋರ್ವರು ಓಡಾಡುತ್ತಿದ್ದರು. ಪ್ರೇಕ್ಷಕರು ಥಿಯೇಟರ್ಗೆ ಬರುತ್ತಿಲ್ಲವೆಂಬ ಮಾತುಗಳು ಕೇಳಿಬರುತ್ತಿರೋ ಹೊತ್ತಲ್ಲಿ, ತಮ್ಮ ಸಿನಿಮಾ ಗೆಲ್ಲಿಸಲು ತಂಡ ಎಷ್ಟು ಶ್ರಮ ವಹಿಸುತ್ತದೆ ಎಂಬುದಕ್ಕಿದು ಬೆಸ್ಟ್ ಉದಾಹರಣೆಯಾಗಿದೆ.


ಅಷ್ಟಕ್ಕೂ ಹೀಗೆ ಟೆಡ್ಡಿ ಬೇರ್ ವೇಷ ಹಾಕಿ ಬೋರ್ಡ್ ಹಿಡಿದು ಆ ಕಡೆ ಈ ಕಡೆ ಓಡಾಡುತ್ತಿದ್ದ ವ್ಯಕ್ತಿ ಬೇರೆ ಯಾರೂ ಅಲ್ಲ. ನಟ ದಿಗಂತ್. ಯೆಸ್, ತಮ್ಮ ಸಿನಿಮಾವನ್ನು ಸಖತ್ ಯೂನಿಕ್ ಆಗಿ ಪ್ರಚಾರ ಮಾಡುತ್ತಿರೋ ದಿಗಂತ್ ಅವರನ್ನು ಕಣ್ತುಂಬಿಕೊಂಡ ಜನರಿಗಿದು ಸರ್ಪೈಸ್ ಅಂತಲೇ ಹೇಳಬಹುದು. ಸಮರ್ಥ್ ಬಿ.ಕಡಕೊಳ್ ಆ್ಯಕ್ಷನ್ ಕಟ್ ಹೇಳಿರುವ ಚಿತ್ರದಲ್ಲಿ ದಿಗಂತ್ ಮಂಚಾಲೆ ಜೋಡಿಯಾಗಿ ನಟಿ ಧನು ಹರ್ಷ ಅಭಿನಯಿಸಿದ್ದಾರೆ. ಇನ್ನುಳಿದಂತೆ, ಖ್ಯಾತ ನಟಿಯರಾದ ರಾಧಿಕಾ ನಾರಾಯಣ್ ಮತ್ತು ನಿಧಿ ಸುಬ್ಬಯ್ಯ ಕೂಡಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಪಾತ್ರದಲ್ಲಿ ನಿರೂಪ್ ಭಂಡಾರಿ ಅಭಿನಯಿಸಿದ್ದಾರೆ. ಸಮರ್ಥ್ ಅವರಿಗಿದು ಮೊದಲ ನಿರ್ದೇಶನದ ಚಿತ್ರ ಅಂತಲೇ ಹೇಳಬಹುದು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!