ಕನ್ನಡದ ಖ್ಯಾತ ನಟನಿಂದ ‘TEDDY BEAR’ ಅವತಾರದಲ್ಲಿ ಸಿನಿಮಾ ಪ್ರಚಾರ!

ಸಿನಿಮಾ ಯಶಸ್ಸಿಗೆ ಪ್ರಚಾರ ಅತ್ಯಗತ್ಯ. ಅದರಂತೆ, ಚಿತ್ರತಂಡಗಳು ವಿಭಿನ್ನವಾಗಿ ಪ್ರಮೋಶನ್ ಈವೆಂಟ್ಗಳನ್ನು ಆಯೋಜಿಸಿ ಪ್ರೇಕ್ಷಕರನ್ನು ತಲುಪುವ ಪ್ರಯತ್ನ ನಡೆಸುತ್ತವೆ. ಅದರಂತೆ, ಇದೀಗ ಕನ್ನಡದ ಖ್ಯಾತ ನಟರೋರ್ವರು ಟೆಡ್ಡಿಬೇರ್ ವೇಷ ಧರಿಸಿ ತಮ್ಮ ಸಿನಿಮಾವನ್ನು ವಿಭಿನ್ನವಾಗಿ ಪ್ರಚಾರ ಮಾಡಿ ಜನಮನ ಸೆಳೆದಿದ್ದಾರೆ. ಶೀರ್ಷಿಕೆಯಿಂದಲೇ ಕನ್ನಡ ಚಿತ್ರರಂಗದಲ್ಲಿ ಟಾಕ್ ಆಗುತ್ತಿರುವ ಸಿನಿಮಾ ”ಎಡಗೈಯೇ ಅಪಘಾತಕ್ಕೆ ಕಾರಣ”. ಸ್ಯಾಂಡಲ್ವುಡ್ನ ದೂದ್ ಪೇಡಾ ಖ್ಯಾತಿಯ ದಿಗಂತ್ ಮಂಚಾಲೆ ಮುಖ್ಯಭೂಮಿಕೆಯಲ್ಲಿರೋ ಈ ಬಹುನಿರೀಕ್ಷಿತ ಚಿತ್ರ ವಿಭಿನ್ನ ಕಾನ್ಸೆಪ್ಟ್ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿದೆ.


”ಎಡಗೈಯೇ ಅಪಘಾತಕ್ಕೆ ಕಾರಣ” ಚಿತ್ರತಂಡವು ಮೊದಲಿನಿಂದಲೂ ಬಹಳ ಡಿಫ್ರೆಂಟ್ ಆಗಿ ಪ್ರಮೋಶನ್ ಮಾಡುತ್ತಾ ಬಂದಿದೆ. ಈ ಹಿಂದೆ ಎಡಗೈ ಬಳಸುವವರಿಗೆ ಹೆಲ್ಮೆಟ್ ನೀಡಲಾಗಿತ್ತು. ನಂತರ ಮಾಡಿಸಲಾದ ಫೋಟೋಶೂಟ್ ಆನ್ಲೈನ್ನಲ್ಲಿ ಸದ್ದು ಮಾಡಿತ್ತು. ಇದೀಗ ಮತ್ತೊಂದು ಯೂನಿಕ್ ಕಾನ್ಸೆಪ್ಟ್ನೊಂದಿಗೆ ಚಿತ್ರತಂಡ ಸಾರ್ವಜನಿಕರೆದುರು ಬಂದಿದೆ.

ಹೌದು, ಬೆಂಗಳೂರಿನ ಮಾಲ್ ಒಂದರಲ್ಲಿ, ಟೆಡ್ಡಿಬೇರ್ ವೇಷ ಧರಿಸಿ, ಶೇಕ್ ಹ್ಯಾಂಡ್ ವಿತ್ ಲೆಫ್ಟ್ ಹ್ಯಾಂಡ್ ಆ್ಯಂಡ್ ಗೆಟ್ ಸರ್ಪೈಸ್ ಎಂಬ ನಾಮಫಲಕವನ್ನಿಡಿದು ವ್ಯಕ್ತಿಯೋರ್ವರು ಓಡಾಡುತ್ತಿದ್ದರು. ಪ್ರೇಕ್ಷಕರು ಥಿಯೇಟರ್ಗೆ ಬರುತ್ತಿಲ್ಲವೆಂಬ ಮಾತುಗಳು ಕೇಳಿಬರುತ್ತಿರೋ ಹೊತ್ತಲ್ಲಿ, ತಮ್ಮ ಸಿನಿಮಾ ಗೆಲ್ಲಿಸಲು ತಂಡ ಎಷ್ಟು ಶ್ರಮ ವಹಿಸುತ್ತದೆ ಎಂಬುದಕ್ಕಿದು ಬೆಸ್ಟ್ ಉದಾಹರಣೆಯಾಗಿದೆ.


ಅಷ್ಟಕ್ಕೂ ಹೀಗೆ ಟೆಡ್ಡಿ ಬೇರ್ ವೇಷ ಹಾಕಿ ಬೋರ್ಡ್ ಹಿಡಿದು ಆ ಕಡೆ ಈ ಕಡೆ ಓಡಾಡುತ್ತಿದ್ದ ವ್ಯಕ್ತಿ ಬೇರೆ ಯಾರೂ ಅಲ್ಲ. ನಟ ದಿಗಂತ್. ಯೆಸ್, ತಮ್ಮ ಸಿನಿಮಾವನ್ನು ಸಖತ್ ಯೂನಿಕ್ ಆಗಿ ಪ್ರಚಾರ ಮಾಡುತ್ತಿರೋ ದಿಗಂತ್ ಅವರನ್ನು ಕಣ್ತುಂಬಿಕೊಂಡ ಜನರಿಗಿದು ಸರ್ಪೈಸ್ ಅಂತಲೇ ಹೇಳಬಹುದು. ಸಮರ್ಥ್ ಬಿ.ಕಡಕೊಳ್ ಆ್ಯಕ್ಷನ್ ಕಟ್ ಹೇಳಿರುವ ಚಿತ್ರದಲ್ಲಿ ದಿಗಂತ್ ಮಂಚಾಲೆ ಜೋಡಿಯಾಗಿ ನಟಿ ಧನು ಹರ್ಷ ಅಭಿನಯಿಸಿದ್ದಾರೆ. ಇನ್ನುಳಿದಂತೆ, ಖ್ಯಾತ ನಟಿಯರಾದ ರಾಧಿಕಾ ನಾರಾಯಣ್ ಮತ್ತು ನಿಧಿ ಸುಬ್ಬಯ್ಯ ಕೂಡಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಪಾತ್ರದಲ್ಲಿ ನಿರೂಪ್ ಭಂಡಾರಿ ಅಭಿನಯಿಸಿದ್ದಾರೆ. ಸಮರ್ಥ್ ಅವರಿಗಿದು ಮೊದಲ ನಿರ್ದೇಶನದ ಚಿತ್ರ ಅಂತಲೇ ಹೇಳಬಹುದು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!