ಕನ್ನಡದ ಖ್ಯಾತ ನಟನಿಂದ ‘TEDDY BEAR’ ಅವತಾರದಲ್ಲಿ ಸಿನಿಮಾ ಪ್ರಚಾರ!

ಸಿನಿಮಾ ಯಶಸ್ಸಿಗೆ ಪ್ರಚಾರ ಅತ್ಯಗತ್ಯ. ಅದರಂತೆ, ಚಿತ್ರತಂಡಗಳು ವಿಭಿನ್ನವಾಗಿ ಪ್ರಮೋಶನ್ ಈವೆಂಟ್ಗಳನ್ನು ಆಯೋಜಿಸಿ ಪ್ರೇಕ್ಷಕರನ್ನು ತಲುಪುವ ಪ್ರಯತ್ನ ನಡೆಸುತ್ತವೆ. ಅದರಂತೆ, ಇದೀಗ ಕನ್ನಡದ ಖ್ಯಾತ ನಟರೋರ್ವರು ಟೆಡ್ಡಿಬೇರ್ ವೇಷ ಧರಿಸಿ ತಮ್ಮ ಸಿನಿಮಾವನ್ನು ವಿಭಿನ್ನವಾಗಿ ಪ್ರಚಾರ ಮಾಡಿ ಜನಮನ ಸೆಳೆದಿದ್ದಾರೆ. ಶೀರ್ಷಿಕೆಯಿಂದಲೇ ಕನ್ನಡ ಚಿತ್ರರಂಗದಲ್ಲಿ ಟಾಕ್ ಆಗುತ್ತಿರುವ ಸಿನಿಮಾ ”ಎಡಗೈಯೇ ಅಪಘಾತಕ್ಕೆ ಕಾರಣ”. ಸ್ಯಾಂಡಲ್ವುಡ್ನ ದೂದ್ ಪೇಡಾ ಖ್ಯಾತಿಯ ದಿಗಂತ್ ಮಂಚಾಲೆ ಮುಖ್ಯಭೂಮಿಕೆಯಲ್ಲಿರೋ ಈ ಬಹುನಿರೀಕ್ಷಿತ ಚಿತ್ರ ವಿಭಿನ್ನ ಕಾನ್ಸೆಪ್ಟ್ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿದೆ.


”ಎಡಗೈಯೇ ಅಪಘಾತಕ್ಕೆ ಕಾರಣ” ಚಿತ್ರತಂಡವು ಮೊದಲಿನಿಂದಲೂ ಬಹಳ ಡಿಫ್ರೆಂಟ್ ಆಗಿ ಪ್ರಮೋಶನ್ ಮಾಡುತ್ತಾ ಬಂದಿದೆ. ಈ ಹಿಂದೆ ಎಡಗೈ ಬಳಸುವವರಿಗೆ ಹೆಲ್ಮೆಟ್ ನೀಡಲಾಗಿತ್ತು. ನಂತರ ಮಾಡಿಸಲಾದ ಫೋಟೋಶೂಟ್ ಆನ್ಲೈನ್ನಲ್ಲಿ ಸದ್ದು ಮಾಡಿತ್ತು. ಇದೀಗ ಮತ್ತೊಂದು ಯೂನಿಕ್ ಕಾನ್ಸೆಪ್ಟ್ನೊಂದಿಗೆ ಚಿತ್ರತಂಡ ಸಾರ್ವಜನಿಕರೆದುರು ಬಂದಿದೆ.

ಹೌದು, ಬೆಂಗಳೂರಿನ ಮಾಲ್ ಒಂದರಲ್ಲಿ, ಟೆಡ್ಡಿಬೇರ್ ವೇಷ ಧರಿಸಿ, ಶೇಕ್ ಹ್ಯಾಂಡ್ ವಿತ್ ಲೆಫ್ಟ್ ಹ್ಯಾಂಡ್ ಆ್ಯಂಡ್ ಗೆಟ್ ಸರ್ಪೈಸ್ ಎಂಬ ನಾಮಫಲಕವನ್ನಿಡಿದು ವ್ಯಕ್ತಿಯೋರ್ವರು ಓಡಾಡುತ್ತಿದ್ದರು. ಪ್ರೇಕ್ಷಕರು ಥಿಯೇಟರ್ಗೆ ಬರುತ್ತಿಲ್ಲವೆಂಬ ಮಾತುಗಳು ಕೇಳಿಬರುತ್ತಿರೋ ಹೊತ್ತಲ್ಲಿ, ತಮ್ಮ ಸಿನಿಮಾ ಗೆಲ್ಲಿಸಲು ತಂಡ ಎಷ್ಟು ಶ್ರಮ ವಹಿಸುತ್ತದೆ ಎಂಬುದಕ್ಕಿದು ಬೆಸ್ಟ್ ಉದಾಹರಣೆಯಾಗಿದೆ.


ಅಷ್ಟಕ್ಕೂ ಹೀಗೆ ಟೆಡ್ಡಿ ಬೇರ್ ವೇಷ ಹಾಕಿ ಬೋರ್ಡ್ ಹಿಡಿದು ಆ ಕಡೆ ಈ ಕಡೆ ಓಡಾಡುತ್ತಿದ್ದ ವ್ಯಕ್ತಿ ಬೇರೆ ಯಾರೂ ಅಲ್ಲ. ನಟ ದಿಗಂತ್. ಯೆಸ್, ತಮ್ಮ ಸಿನಿಮಾವನ್ನು ಸಖತ್ ಯೂನಿಕ್ ಆಗಿ ಪ್ರಚಾರ ಮಾಡುತ್ತಿರೋ ದಿಗಂತ್ ಅವರನ್ನು ಕಣ್ತುಂಬಿಕೊಂಡ ಜನರಿಗಿದು ಸರ್ಪೈಸ್ ಅಂತಲೇ ಹೇಳಬಹುದು. ಸಮರ್ಥ್ ಬಿ.ಕಡಕೊಳ್ ಆ್ಯಕ್ಷನ್ ಕಟ್ ಹೇಳಿರುವ ಚಿತ್ರದಲ್ಲಿ ದಿಗಂತ್ ಮಂಚಾಲೆ ಜೋಡಿಯಾಗಿ ನಟಿ ಧನು ಹರ್ಷ ಅಭಿನಯಿಸಿದ್ದಾರೆ. ಇನ್ನುಳಿದಂತೆ, ಖ್ಯಾತ ನಟಿಯರಾದ ರಾಧಿಕಾ ನಾರಾಯಣ್ ಮತ್ತು ನಿಧಿ ಸುಬ್ಬಯ್ಯ ಕೂಡಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಪಾತ್ರದಲ್ಲಿ ನಿರೂಪ್ ಭಂಡಾರಿ ಅಭಿನಯಿಸಿದ್ದಾರೆ. ಸಮರ್ಥ್ ಅವರಿಗಿದು ಮೊದಲ ನಿರ್ದೇಶನದ ಚಿತ್ರ ಅಂತಲೇ ಹೇಳಬಹುದು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!