ಕನ್ನಡದ ಖ್ಯಾತ ನಟನಿಂದ ‘TEDDY BEAR’ ಅವತಾರದಲ್ಲಿ ಸಿನಿಮಾ ಪ್ರಚಾರ!

ಸಿನಿಮಾ ಯಶಸ್ಸಿಗೆ ಪ್ರಚಾರ ಅತ್ಯಗತ್ಯ. ಅದರಂತೆ, ಚಿತ್ರತಂಡಗಳು ವಿಭಿನ್ನವಾಗಿ ಪ್ರಮೋಶನ್ ಈವೆಂಟ್ಗಳನ್ನು ಆಯೋಜಿಸಿ ಪ್ರೇಕ್ಷಕರನ್ನು ತಲುಪುವ ಪ್ರಯತ್ನ ನಡೆಸುತ್ತವೆ. ಅದರಂತೆ, ಇದೀಗ ಕನ್ನಡದ ಖ್ಯಾತ ನಟರೋರ್ವರು ಟೆಡ್ಡಿಬೇರ್ ವೇಷ ಧರಿಸಿ ತಮ್ಮ ಸಿನಿಮಾವನ್ನು ವಿಭಿನ್ನವಾಗಿ ಪ್ರಚಾರ ಮಾಡಿ ಜನಮನ ಸೆಳೆದಿದ್ದಾರೆ. ಶೀರ್ಷಿಕೆಯಿಂದಲೇ ಕನ್ನಡ ಚಿತ್ರರಂಗದಲ್ಲಿ ಟಾಕ್ ಆಗುತ್ತಿರುವ ಸಿನಿಮಾ ”ಎಡಗೈಯೇ ಅಪಘಾತಕ್ಕೆ ಕಾರಣ”. ಸ್ಯಾಂಡಲ್ವುಡ್ನ ದೂದ್ ಪೇಡಾ ಖ್ಯಾತಿಯ ದಿಗಂತ್ ಮಂಚಾಲೆ ಮುಖ್ಯಭೂಮಿಕೆಯಲ್ಲಿರೋ ಈ ಬಹುನಿರೀಕ್ಷಿತ ಚಿತ್ರ ವಿಭಿನ್ನ ಕಾನ್ಸೆಪ್ಟ್ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿದೆ.


”ಎಡಗೈಯೇ ಅಪಘಾತಕ್ಕೆ ಕಾರಣ” ಚಿತ್ರತಂಡವು ಮೊದಲಿನಿಂದಲೂ ಬಹಳ ಡಿಫ್ರೆಂಟ್ ಆಗಿ ಪ್ರಮೋಶನ್ ಮಾಡುತ್ತಾ ಬಂದಿದೆ. ಈ ಹಿಂದೆ ಎಡಗೈ ಬಳಸುವವರಿಗೆ ಹೆಲ್ಮೆಟ್ ನೀಡಲಾಗಿತ್ತು. ನಂತರ ಮಾಡಿಸಲಾದ ಫೋಟೋಶೂಟ್ ಆನ್ಲೈನ್ನಲ್ಲಿ ಸದ್ದು ಮಾಡಿತ್ತು. ಇದೀಗ ಮತ್ತೊಂದು ಯೂನಿಕ್ ಕಾನ್ಸೆಪ್ಟ್ನೊಂದಿಗೆ ಚಿತ್ರತಂಡ ಸಾರ್ವಜನಿಕರೆದುರು ಬಂದಿದೆ.

ಹೌದು, ಬೆಂಗಳೂರಿನ ಮಾಲ್ ಒಂದರಲ್ಲಿ, ಟೆಡ್ಡಿಬೇರ್ ವೇಷ ಧರಿಸಿ, ಶೇಕ್ ಹ್ಯಾಂಡ್ ವಿತ್ ಲೆಫ್ಟ್ ಹ್ಯಾಂಡ್ ಆ್ಯಂಡ್ ಗೆಟ್ ಸರ್ಪೈಸ್ ಎಂಬ ನಾಮಫಲಕವನ್ನಿಡಿದು ವ್ಯಕ್ತಿಯೋರ್ವರು ಓಡಾಡುತ್ತಿದ್ದರು. ಪ್ರೇಕ್ಷಕರು ಥಿಯೇಟರ್ಗೆ ಬರುತ್ತಿಲ್ಲವೆಂಬ ಮಾತುಗಳು ಕೇಳಿಬರುತ್ತಿರೋ ಹೊತ್ತಲ್ಲಿ, ತಮ್ಮ ಸಿನಿಮಾ ಗೆಲ್ಲಿಸಲು ತಂಡ ಎಷ್ಟು ಶ್ರಮ ವಹಿಸುತ್ತದೆ ಎಂಬುದಕ್ಕಿದು ಬೆಸ್ಟ್ ಉದಾಹರಣೆಯಾಗಿದೆ.


ಅಷ್ಟಕ್ಕೂ ಹೀಗೆ ಟೆಡ್ಡಿ ಬೇರ್ ವೇಷ ಹಾಕಿ ಬೋರ್ಡ್ ಹಿಡಿದು ಆ ಕಡೆ ಈ ಕಡೆ ಓಡಾಡುತ್ತಿದ್ದ ವ್ಯಕ್ತಿ ಬೇರೆ ಯಾರೂ ಅಲ್ಲ. ನಟ ದಿಗಂತ್. ಯೆಸ್, ತಮ್ಮ ಸಿನಿಮಾವನ್ನು ಸಖತ್ ಯೂನಿಕ್ ಆಗಿ ಪ್ರಚಾರ ಮಾಡುತ್ತಿರೋ ದಿಗಂತ್ ಅವರನ್ನು ಕಣ್ತುಂಬಿಕೊಂಡ ಜನರಿಗಿದು ಸರ್ಪೈಸ್ ಅಂತಲೇ ಹೇಳಬಹುದು. ಸಮರ್ಥ್ ಬಿ.ಕಡಕೊಳ್ ಆ್ಯಕ್ಷನ್ ಕಟ್ ಹೇಳಿರುವ ಚಿತ್ರದಲ್ಲಿ ದಿಗಂತ್ ಮಂಚಾಲೆ ಜೋಡಿಯಾಗಿ ನಟಿ ಧನು ಹರ್ಷ ಅಭಿನಯಿಸಿದ್ದಾರೆ. ಇನ್ನುಳಿದಂತೆ, ಖ್ಯಾತ ನಟಿಯರಾದ ರಾಧಿಕಾ ನಾರಾಯಣ್ ಮತ್ತು ನಿಧಿ ಸುಬ್ಬಯ್ಯ ಕೂಡಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಪಾತ್ರದಲ್ಲಿ ನಿರೂಪ್ ಭಂಡಾರಿ ಅಭಿನಯಿಸಿದ್ದಾರೆ. ಸಮರ್ಥ್ ಅವರಿಗಿದು ಮೊದಲ ನಿರ್ದೇಶನದ ಚಿತ್ರ ಅಂತಲೇ ಹೇಳಬಹುದು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು