ಬಿಗ್​​ಬಾಸ್ ಮನೆಯಲ್ಲಿ ಅರಳುತ್ತಿದೆ ಹೊಸ ಪ್ರೇಮಕತೆ; ನಾ ಬಂದಿದ್ದು ನಿನಗಾಗಿಯೇ ?

Bigg Boss Kannada season 12: ಬಿಗ್​​ಬಾಸ್ ಮನೆಯಲ್ಲಿ ಪ್ರೇಮ ಪ್ರಕರಣಗಳು ಸಾಮಾನ್ಯ. ಬಿಗ್​​ಬಾಸ್​​ನಲ್ಲಿ ಜೊತೆಯಾದವರು ಹೊರಗೂ ಒಟ್ಟಿಗೆ ಬಾಳಿದ ಉದಾಹರಣೆಗಳೂ ಸಹ ಇವೆ. ಈ ಸೀಸನ್​​ನಲ್ಲಿ ಗಿಲ್ಲಿ ಆರಂಭದಿಂದಲೂ ಕಾವ್ಯಾ ಹಿಂದೆ ಓಡಾಡುತ್ತಲೇ ಇದ್ದಾರೆ. ಕಾವ್ಯಾ, ಗಿಲ್ಲಿಗೆ ಸರಿಯಾಗಿ ಸೊಪ್ಪು ಹಾಕುತ್ತಿಲ್ಲ. ಇದರ ಮಧ್ಯೆ ಇದೀಗ ಬಿಗ್​​ಬಾಸ್ ಮನೆಯಲ್ಲಿ ಹೊಸ ಪ್ರೇಮಕತೆಯೊಂದು ಶುರುವಾಗುವ ಲಕ್ಷಣ ಕಂಡು ಬಂದಿದೆ.

ಬಿಗ್​​ಬಾಸ್ (Bigg Boss) ಮನೆಯಲ್ಲಿ ಪ್ರೇಮ ಪ್ರಕರಣಗಳು ಸಾಮಾನ್ಯ. ಪ್ರತಿ ಸೀಸನ್​​ನಲ್ಲೂ ಒಂದಲ್ಲ ಒಂದು ಜೋಡಿಗಳು ಸಿಕ್ಕೇ ಸಿಗುತ್ತವೆ. ಬಿಗ್​​ಬಾಸ್​​ನಲ್ಲಿ ಜೊತೆಯಾದವರು ಹೊರಗೂ ಒಟ್ಟಿಗೆ ಬಾಳಿದ ಉದಾಹರಣೆಗಳೂ ಸಹ ಇವೆ. ಈ ಸೀಸನ್​​ನಲ್ಲಿ ಗಿಲ್ಲಿ ಆರಂಭದಿಂದಲೂ ಕಾವ್ಯಾ ಹಿಂದೆ ಓಡಾಡುತ್ತಲೇ ಇದ್ದಾರೆ. ಕಾವ್ಯಾ, ಗಿಲ್ಲಿಗೆ ಸರಿಯಾಗಿ ಸೊಪ್ಪು ಹಾಕುತ್ತಿಲ್ಲ. ಇದರ ಮಧ್ಯೆ ಇದೀಗ ಬಿಗ್​​ಬಾಸ್ ಮನೆಯಲ್ಲಿ ಹೊಸ ಪ್ರೇಮಕತೆಯೊಂದು ಶುರುವಾಗುವ ಲಕ್ಷಣ ಕಂಡು ಬಂದಿದೆ.

ವೈಲ್ಡ್ ಕಾರ್ಡ್ ಮೂಲಕ ಮೂವರು ಹೊಸ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಅವರಲ್ಲಿ ಸೂರಜ್ ಸಿಂಗ್ ಸಹ ಒಬ್ಬರು. ಕೆನಡಾನಲ್ಲಿ ಕೆಲಸ ಮಾಡುತ್ತಿದ್ದ ಸೂರಜ್, ಇನ್​​ಸ್ಟಾಗ್ರಾಂನಲ್ಲಿ ಫ್ಯಾಷನ್ ಮತ್ತು ಫಿಟ್​​ನೆಸ್ ಬಗ್ಗೆ ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ. ಜೊತೆಗೆ ಶೆಫ್ ಸಹ ಆಗಿದ್ದಾರೆ. ಸಖತ್ ಫಿಟ್ ಆಗಿರುವ ಜೊತೆಗೆ ಅಷ್ಟೇ ಹ್ಯಾಂಡ್ಸಮ್ ಆಗಿಯೂ ಇರುವ ಸೂರಜ್ ಬಿಗ್​​ಬಾಸ್ ಮನೆಗೆ ಬಲು ಹಾಟ್ ಆಗಿಯೇ ಎಂಟ್ರಿ ಕೊಟ್ಟು, ಬಿಗ್​​ಬಾಸ್ ಮನೆಯ ಹೆಂಗೆಳೆಯರ ಮನಸ್ಸು ಕದ್ದಿದ್ದರು.

ಇದೀಗ ನಿನ್ನೆ ನಡೆದ ಟಾಸ್ಕ್​​ನಲ್ಲಿ ಇತರೆ ಇಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳಂತೆ ಸ್ವಾರ್ಥಿಗಳಾಗದೆ ತಮ್ಮ ತಂಡದ ಪರವಾಗಿ ನಿಂತು ಹೀರೋ ಎನಿಸಿಕೊಂಡಿದ್ದು, ಇದು ಇನ್ನಷ್ಟು ಸ್ಪರ್ಧಿಗಳ ಮನಸ್ಸು ಗೆದ್ದಿದೆ. ಅದರಲ್ಲೂ ರಾಶಿಕಾ ಅಂತೂ ಸೂರಜ್ ಬಗ್ಗೆ ಬಹಳ ಇಂಪ್ರೆಸ್ ಆಗಿದ್ದಾರೆ. ನಿನ್ನೆ ಸೂರಜ್, ತಮ್ಮ ಪರವಾಗಿ ಅಲ್ಲದೆ ತಂಡದ ಪರವಾಗಿ ತೆಗೆದುಕೊಂಡ ನಿರ್ಣಯದ ಬಗ್ಗೆ ರಾಶಿಕಾ, ಸೂರಜ್ ಜೊತೆಗೆ ಮಾತನಾಡುತ್ತಾ, ‘ನೀವು ನಿಮಗಾಗಿ ಆಡಲು ಬಂದಿದ್ದೀರ’ ಎಂದರು ಅದಕ್ಕೆ ಸೂರಜ್ ಫ್ಲರ್ಟ್ ಮಾಡುವ ರೀತಿ, ‘ನಾನು ನಿಮಗಾಗಿ ಬಂದಿದ್ದೀನಿ’ ಎಂದರು. ಸೂರಜ್ ಮಾತಿಗೆ ನಾಚಿ ನೀರಾದರು ರಾಶಿಕಾ.

ಸೂರಜ್, ಬಿಗ್​​ಬಾಸ್ ಮನೆಗೆ ಬಂದಾಗಲೇ ರಾಶಿಕಾ, ಸೂರಜ್ ಬಗ್ಗೆ ಆಸಕ್ತಿ ತೋರಿಸಿದ್ದರು. ಸೂರಜ್ ಅವರ ಇನ್​​ಸ್ಟಾಗ್ರಾಂ ವಿಡಿಯೋಗಳನ್ನು ನೋಡಿದ್ದೆ, ಹಾಟ್ ಆಗಿದ್ದಾನೆ ಎಂದುಕೊಂಡಿದ್ದೆ, ನೋಡಿದರೆ ಈಗ ಬಿಗ್​ಬಾಸ್ ಮನೆಗೆ ಬಂದಿದ್ದಾನೆ ಎಂದಿದ್ದರು. ರಾತ್ರಿ ಸಮಯ ಎಲ್ಲರೂ ಮಲಗಿರುವಾಗ ಅಶ್ವಿನಿ, ಜಾನ್ವಿ ಬಳಿ ಮಾತನಾಡುತ್ತಾ, ಸೂರಜ್ ಬಲು ಹಾಟ್ ಆಗಿದ್ದಾನೆ ಎಂದು ಹೇಳಿದ್ದರು.

ಸೂರಜ್ ಜೊತೆಗೆ ರಾಶಿಕಾ ಬಲು ಕ್ಲೋಸ್ ಆಗಿದ್ದಾರೆ. ಸೂರಜ್ ಸಹ ಆಗಾಗ್ಗೆ ರಾಶಿಕಾ ಜೊತೆಗೆ ಫ್ಲರ್ಟ್ ಮಾಡುತ್ತಿದ್ದಾರೆ. ನೋಡಬೇಕು ಇವರಿಬ್ಬರ ಪ್ರೇಮಕತೆ ಎಲ್ಲಿ ಹೋಗಿ ಮುಟ್ಟುತ್ತದೆ ಎಂದು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!