ಪುಟ್ಟ ಕಂದಮ್ಮನನ್ನು ಪಕ್ಕದಲ್ಲಿ ಕೂರಿಸಿಕೊಂಡು ಆಟೋ ಓಡಿಸುವ ಮಹಿಳೆ!

 

ತಾಯಿಯ ಪ್ರೀತಿ, ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಒಬ್ಬ ಮಹಿಳೆ ತಾಯಿ ಹಾಗೂ ತಂದೆ ಎರಡು ಆಗಿ ಮಕ್ಕಳಿಗೆ ಭದ್ರ ಭವಿಷ್ಯ ಕಟ್ಟಿಕೊಡುತ್ತಾಳೆ. ಈ ದೃಶ್ಯ ನೋಡಿದ್ರೆ ನಿಮಗೂ ಹಾಗೆಯೇ ಅನಿಸಬಹುದು. ಇದೀಗ ತನ್ನ ಪುಟ್ಟ ಪ್ರಪಂಚವಾಗಿರುವ ಮಗಳ ಭವಿಷ್ಯಕ್ಕಾಗಿ ಆಟೋ ಓಡಿಸುವ ಮಹಿಳೆಯ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ಈ ದೃಶ್ಯ ನೋಡಿ ಈ ಮಹಿಳೆಯ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ತಾಯಿ ಅಂದ್ರೇನೆ ಹಾಗೆ, ತಮ್ಮ ಮಕ್ಕಳಿಗಾಗಿ ಇಡೀ ಜಗತ್ತನ್ನೇ ಎದುರು ಹಾಕಿಕೊಳ್ಳುತ್ತಾಳೆ. ಇದಕ್ಕೆ ಈ ವಿಡಿಯೋನೇ ಸಾಕ್ಷಿ. ಹೌದು ಇಲ್ಲೊಬ್ಬಳು ತಾಯಿ ಪುಟ್ಟ ಮಗುವನ್ನು ಮಡಿಲಲ್ಲಿ ಕೂರಿಸಿ ಆಟೋ ಓಡಿಸುತ್ತಾ ಬದುಕಿಗಾಗಿ ಹೋರಾಟ ನಡೆಸುತ್ತಿದ್ದಾಳೆ. ಈ ಆಟೋ ಚಾಲಕಿ ಹೆಸರು ಕೋಮಲ್ ಗಾಯಕ್ವಾಡ್ . ಪತಿ ಬಿಟ್ಟು ಹೋದ ಬಳಿಕ ಈ ಮಹಿಳೆಗೆ ಮಗಳೇ ಪ್ರಪಂಚವಾಗಿದ್ದಾಳೆ. ಈ ತಾಯಿಯೊಬ್ಬಳ ಹೋರಾಟದ ಬದುಕಿನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ದೃಶ್ಯ ನೋಡಿ ನೆಟ್ಟಿಗರು ಕಣ್ಣೀರು ಸುರಿಸಿದ್ದಾರೆ.

ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿಈ ಆಟೋ ಚಾಲಕಿ ತನ್ನ ಬದುಕಿನ ಕಥೆಯನ್ನು ತೆರೆದಿಟ್ಟಿದ್ದಾರೆ. ಈ ವಿಡಿಯೋದ ಶೀರ್ಷಿಕೆಯಲ್ಲಿ, ಮಕ್ಕಳು ಬೆಳಿಗ್ಗೆ 6.30ಕ್ಕೆ ಗಾಢ ನಿದ್ರೆಯಲ್ಲಿದ್ರೆ ತೇಜು ನನ್ನ ಜತೆಗೆ ಆಟೋ ಹತ್ತಿರ್ತಾಳೆ. ಇಡೀ ದಿನ ಆಟೋದಲ್ಲಿ ಕುಳಿತುಕೊಳ್ಳುತ್ತಾಳೆ. ತಿಂಡಿ, ಊಟ ನಿದ್ರೆ ಎಲ್ಲವೂ ಆಟೋದಲ್ಲೇ. ಪರ್ಭಾನಿಯಲ್ಲಿ ಜನಿಸಿದ ನಾನು ಆರ್ಥಿಕ ಸಮಸ್ಯೆ ಕಾರಣಕ್ಕೆ 10ನೇ ತರಗತಿ ಪೂರ್ಣಗೊಳಿಸಿ ಮನೆಯಲ್ಲೇ ಉಳಿದೆ. ಮನೆಯವರ ಮಾತಿನಂತೆ ಮದುವೆಯಾದೆ. ಮದುವೆ ಆದ್ಮೇಲೆ 2018ರಲ್ಲಿ ಕಲ್ಯಾಣ್ ಗೆ ಬಂದೆ. 2022ರಲ್ಲಿ ನಮ್ಮ ಮಡಿಲಿಗೆ ಮಗಳು ಬಂದಳು. ನಮ್ಮ ಪುಟ್ಟ ಪ್ರಪಂಚಕ್ಕೆ ತೇಜು ಎಂದು ಕೋಮಲ್ ನಾಮಕರಣ ಮಾಡಿದೆವು. ಮಗಳಿಗೆ 18 ತಿಂಗಳಾಗ್ತಿದ್ದಂತೆ ಎಲ್ಲ ಬದಲಾಗಿ ಹೋಯ್ತು.

ಪರ್ಭಾನಿಗೆ ಹೋಗಿ ಬರ್ತೇನೆ ಎಂದಿದ್ದ ನನ್ನ ಪತಿ, ತಿಂಗಳಾದ್ರೂ ಮನೆಗೆ ಬರಲಿಲ್ಲ. ನೆಪ ಹೇಳಿಕೊಂಡು ಮನೆಗೆ ಬರೋದನ್ನೇ ಬಿಟ್ಟ. ಹೀಗಾಗಿ ಮಗಳ ಜವಾಬ್ದಾರಿ ಹೆಗಲ ಮೇಲೆ ಬಿತ್ತು. ದುಡಿಯುವುದು ಅನಿವಾರ್ಯವಾಯ್ತು, ಹೀಗಾಗಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲ್ಸಕ್ಕೆ ಸೇರಿಕೊಂಡೆ. ಮಗಳನ್ನು ಮನೆಯಲ್ಲೇ ಬಿಟ್ಟು ಬರಬೇಕಾಗಿತ್ತು. ಆಗ ಆಟೋ ಓಡಿಸುವ ನಿರ್ಧಾರ ಮಾಡಿಕೊಂಡೆ. ದಿನಕ್ಕೆ 400- 500 ರೂಪಾಯಿ ಸಂಪಾದನೆ ಮಾಡುತ್ತೇನೆ. ತಿಂಗಳ ಬಾಡಿಗೆ, ದಿನಸಿಗೆ ದುಡಿದ ಹಣವೆಲ್ಲವು ಖರ್ಚು ಆಗ್ತಿದೆ . ಮಗಳಿಗೆ ಸುಂದರ ಭವಿಷ್ಯ ಕಟ್ಟುವ ಭರವಸೆಯಲ್ಲಿ ದಿನನಿತ್ಯ ಹೋರಾಟ ಎಂದು ಬರೆದುಕೊಂಡಿದ್ದಾರೆ.ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಆಟೋ ಓಡಿಸುತ್ತಿದ್ದರೆ ಪುಟ್ಟ ಕಂದಮ್ಮ ಆಟೋದ ಸೀಟ್‌ನ ಪಕ್ಕ ಮಗಳಿಗಾಗಿ ಸೀಟ್‌ ಮಾಡಿಕೊಟ್ಟಿದ್ದಾಳೆ. ಪುಟ್ಟ ಹುಡುಗಿಯೂ ಆಟೋದಲ್ಲಿ ತನ್ನ ತಾಯಿ ಪಕ್ಕ ಕುಳಿತುಕೊಂಡಿರುವುದನ್ನು ಕಾಣಬಹುದು. ಈ ಪುಟಾಣಿಗೆ ಅಮ್ಮ ಕೈ ತುತ್ತು, ಪ್ರೀತಿ ಎಲ್ಲವೂ ಈ ಆಟೋದಲ್ಲೇ ಸಿಗುವುದನ್ನು ನೋಡಬಹುದು.

Related Posts

ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಮಾದರಿಯ ರೋಗದ ಸೋಂಕು!

  ಕರ್ನಾಟಕದಲ್ಲಿ ಲೆಪ್ಟೋಸ್ಪೈರೋಸಿಸ್ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ಆತಂಕಕಾರಿ ರೀತಿಯಲ್ಲಿ ಹೆಚ್ಚಾಗಿವೆ. ಇದು ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಬ್ಯಾಕ್ಟೀರಿಯಾ ಸೋಂಕು. ಜ್ವರ, ತಲೆನೋವು ಇದರ ಸಾಮಾನ್ಯ ಲಕ್ಷಣಗಳು. ಕಲುಷಿತ ನೀರು ಮತ್ತು ಮಣ್ಣಿನ ಸಂಪರ್ಕದಿಂದ ಹರಡುತ್ತದೆ. ರೋಗ ತಡೆಗಟ್ಟಲು ನೈರ್ಮಲ್ಯ…

ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ!

  ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನಭವನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದ್ದು, ತಕ್ಷಣದ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿವೆ. ಇಂದು ಬೆಳಗ್ಗೆ ಬಿಎಸ್‌ಇ, ವಿಧಾನ ಭವನ…

You Missed

ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಮಾದರಿಯ ರೋಗದ ಸೋಂಕು!

ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಮಾದರಿಯ ರೋಗದ ಸೋಂಕು!

ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ!

ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ!

ಪುಟ್ಟ ಕಂದಮ್ಮನನ್ನು ಪಕ್ಕದಲ್ಲಿ ಕೂರಿಸಿಕೊಂಡು ಆಟೋ ಓಡಿಸುವ ಮಹಿಳೆ!

ಪುಟ್ಟ ಕಂದಮ್ಮನನ್ನು ಪಕ್ಕದಲ್ಲಿ ಕೂರಿಸಿಕೊಂಡು ಆಟೋ ಓಡಿಸುವ ಮಹಿಳೆ!

ಎಲ್‌ಪಿಜಿ ಸಿಲಿಂಡರ್​ ಸಿಗದೆ ಪರದಾಟ!

ಎಲ್‌ಪಿಜಿ ಸಿಲಿಂಡರ್​ ಸಿಗದೆ ಪರದಾಟ!

ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ ಕೋರ್ಟ್ ’ ಅಸ್ತು

ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ ಕೋರ್ಟ್ ’ ಅಸ್ತು

ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ.

ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ.