ಪುಟ್ಟ ಕಂದಮ್ಮನನ್ನು ಪಕ್ಕದಲ್ಲಿ ಕೂರಿಸಿಕೊಂಡು ಆಟೋ ಓಡಿಸುವ ಮಹಿಳೆ!

 

ತಾಯಿಯ ಪ್ರೀತಿ, ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಒಬ್ಬ ಮಹಿಳೆ ತಾಯಿ ಹಾಗೂ ತಂದೆ ಎರಡು ಆಗಿ ಮಕ್ಕಳಿಗೆ ಭದ್ರ ಭವಿಷ್ಯ ಕಟ್ಟಿಕೊಡುತ್ತಾಳೆ. ಈ ದೃಶ್ಯ ನೋಡಿದ್ರೆ ನಿಮಗೂ ಹಾಗೆಯೇ ಅನಿಸಬಹುದು. ಇದೀಗ ತನ್ನ ಪುಟ್ಟ ಪ್ರಪಂಚವಾಗಿರುವ ಮಗಳ ಭವಿಷ್ಯಕ್ಕಾಗಿ ಆಟೋ ಓಡಿಸುವ ಮಹಿಳೆಯ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ಈ ದೃಶ್ಯ ನೋಡಿ ಈ ಮಹಿಳೆಯ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ತಾಯಿ ಅಂದ್ರೇನೆ ಹಾಗೆ, ತಮ್ಮ ಮಕ್ಕಳಿಗಾಗಿ ಇಡೀ ಜಗತ್ತನ್ನೇ ಎದುರು ಹಾಕಿಕೊಳ್ಳುತ್ತಾಳೆ. ಇದಕ್ಕೆ ಈ ವಿಡಿಯೋನೇ ಸಾಕ್ಷಿ. ಹೌದು ಇಲ್ಲೊಬ್ಬಳು ತಾಯಿ ಪುಟ್ಟ ಮಗುವನ್ನು ಮಡಿಲಲ್ಲಿ ಕೂರಿಸಿ ಆಟೋ ಓಡಿಸುತ್ತಾ ಬದುಕಿಗಾಗಿ ಹೋರಾಟ ನಡೆಸುತ್ತಿದ್ದಾಳೆ. ಈ ಆಟೋ ಚಾಲಕಿ ಹೆಸರು ಕೋಮಲ್ ಗಾಯಕ್ವಾಡ್ . ಪತಿ ಬಿಟ್ಟು ಹೋದ ಬಳಿಕ ಈ ಮಹಿಳೆಗೆ ಮಗಳೇ ಪ್ರಪಂಚವಾಗಿದ್ದಾಳೆ. ಈ ತಾಯಿಯೊಬ್ಬಳ ಹೋರಾಟದ ಬದುಕಿನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ದೃಶ್ಯ ನೋಡಿ ನೆಟ್ಟಿಗರು ಕಣ್ಣೀರು ಸುರಿಸಿದ್ದಾರೆ.

ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿಈ ಆಟೋ ಚಾಲಕಿ ತನ್ನ ಬದುಕಿನ ಕಥೆಯನ್ನು ತೆರೆದಿಟ್ಟಿದ್ದಾರೆ. ಈ ವಿಡಿಯೋದ ಶೀರ್ಷಿಕೆಯಲ್ಲಿ, ಮಕ್ಕಳು ಬೆಳಿಗ್ಗೆ 6.30ಕ್ಕೆ ಗಾಢ ನಿದ್ರೆಯಲ್ಲಿದ್ರೆ ತೇಜು ನನ್ನ ಜತೆಗೆ ಆಟೋ ಹತ್ತಿರ್ತಾಳೆ. ಇಡೀ ದಿನ ಆಟೋದಲ್ಲಿ ಕುಳಿತುಕೊಳ್ಳುತ್ತಾಳೆ. ತಿಂಡಿ, ಊಟ ನಿದ್ರೆ ಎಲ್ಲವೂ ಆಟೋದಲ್ಲೇ. ಪರ್ಭಾನಿಯಲ್ಲಿ ಜನಿಸಿದ ನಾನು ಆರ್ಥಿಕ ಸಮಸ್ಯೆ ಕಾರಣಕ್ಕೆ 10ನೇ ತರಗತಿ ಪೂರ್ಣಗೊಳಿಸಿ ಮನೆಯಲ್ಲೇ ಉಳಿದೆ. ಮನೆಯವರ ಮಾತಿನಂತೆ ಮದುವೆಯಾದೆ. ಮದುವೆ ಆದ್ಮೇಲೆ 2018ರಲ್ಲಿ ಕಲ್ಯಾಣ್ ಗೆ ಬಂದೆ. 2022ರಲ್ಲಿ ನಮ್ಮ ಮಡಿಲಿಗೆ ಮಗಳು ಬಂದಳು. ನಮ್ಮ ಪುಟ್ಟ ಪ್ರಪಂಚಕ್ಕೆ ತೇಜು ಎಂದು ಕೋಮಲ್ ನಾಮಕರಣ ಮಾಡಿದೆವು. ಮಗಳಿಗೆ 18 ತಿಂಗಳಾಗ್ತಿದ್ದಂತೆ ಎಲ್ಲ ಬದಲಾಗಿ ಹೋಯ್ತು.

ಪರ್ಭಾನಿಗೆ ಹೋಗಿ ಬರ್ತೇನೆ ಎಂದಿದ್ದ ನನ್ನ ಪತಿ, ತಿಂಗಳಾದ್ರೂ ಮನೆಗೆ ಬರಲಿಲ್ಲ. ನೆಪ ಹೇಳಿಕೊಂಡು ಮನೆಗೆ ಬರೋದನ್ನೇ ಬಿಟ್ಟ. ಹೀಗಾಗಿ ಮಗಳ ಜವಾಬ್ದಾರಿ ಹೆಗಲ ಮೇಲೆ ಬಿತ್ತು. ದುಡಿಯುವುದು ಅನಿವಾರ್ಯವಾಯ್ತು, ಹೀಗಾಗಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲ್ಸಕ್ಕೆ ಸೇರಿಕೊಂಡೆ. ಮಗಳನ್ನು ಮನೆಯಲ್ಲೇ ಬಿಟ್ಟು ಬರಬೇಕಾಗಿತ್ತು. ಆಗ ಆಟೋ ಓಡಿಸುವ ನಿರ್ಧಾರ ಮಾಡಿಕೊಂಡೆ. ದಿನಕ್ಕೆ 400- 500 ರೂಪಾಯಿ ಸಂಪಾದನೆ ಮಾಡುತ್ತೇನೆ. ತಿಂಗಳ ಬಾಡಿಗೆ, ದಿನಸಿಗೆ ದುಡಿದ ಹಣವೆಲ್ಲವು ಖರ್ಚು ಆಗ್ತಿದೆ . ಮಗಳಿಗೆ ಸುಂದರ ಭವಿಷ್ಯ ಕಟ್ಟುವ ಭರವಸೆಯಲ್ಲಿ ದಿನನಿತ್ಯ ಹೋರಾಟ ಎಂದು ಬರೆದುಕೊಂಡಿದ್ದಾರೆ.ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಆಟೋ ಓಡಿಸುತ್ತಿದ್ದರೆ ಪುಟ್ಟ ಕಂದಮ್ಮ ಆಟೋದ ಸೀಟ್‌ನ ಪಕ್ಕ ಮಗಳಿಗಾಗಿ ಸೀಟ್‌ ಮಾಡಿಕೊಟ್ಟಿದ್ದಾಳೆ. ಪುಟ್ಟ ಹುಡುಗಿಯೂ ಆಟೋದಲ್ಲಿ ತನ್ನ ತಾಯಿ ಪಕ್ಕ ಕುಳಿತುಕೊಂಡಿರುವುದನ್ನು ಕಾಣಬಹುದು. ಈ ಪುಟಾಣಿಗೆ ಅಮ್ಮ ಕೈ ತುತ್ತು, ಪ್ರೀತಿ ಎಲ್ಲವೂ ಈ ಆಟೋದಲ್ಲೇ ಸಿಗುವುದನ್ನು ನೋಡಬಹುದು.

Related Posts

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ (SC) ದಶಕಗಳ ಕಾಲದ ಬೇಡಿಕೆಯಾದ ಒಳ ಮೀಸಲಾತಿಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಆಗಸ್ಟ್ 19ರಂದು ಕೈಗೊಂಡ ನಿರ್ಧಾರದಂತೆ, ಶಿಕ್ಷಣ ಮತ್ತು ಉದ್ಯೋಗದ ನೇಮಕಾತಿ ಪ್ರಕ್ರಿಯೆಗಳಲ್ಲಿ ಈ ಮೀಸಲಾತಿ…

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

You Missed

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.