ಪ್ರೇಯಸಿಯ ಕಾಲಿಗೆ ಬಿದ್ದು ನಮಸ್ಕರಿಸಿದ ಯುವಕ, ಕುಣಿದು ಕುಪ್ಪಳಿಸಿದ ಯುವತಿ.

ಪ್ರೀತಿ ಯೇ ಹಾಗೆ, ಒಮ್ಮೆ ಪ್ರೀತಿಯಲ್ಲಿ ಬಿದ್ದರೆ ಈ ಜಗತ್ತೇ ಕಾಣುವುದಿಲ್ಲ. ಪ್ರೇಮಿಗಳು ತನ್ನನ್ನು ಪ್ರೀತಿಸುವ ಜೀವದ ಖುಷಿಗಾಗಿ ಏನು ಬೇಕಾದರೂ ಕೂಡ ಮಾಡಿಬಿಡುತ್ತಾರೆ. ಅದರಲ್ಲಿಯೂ ಈ ಹುಡುಗ ಪ್ರಾಮಾಣಿಕವಾಗಿ ಪ್ರೀತಿಸುತ್ತಿದ್ದರೆ ತನ್ನವಳಿಗಾಗಿ ಏನನ್ನು ಬೇಕಾದರೂ ಮಾಡಲು ಸಿದ್ಧವಿರುತ್ತಾನೆ. ಇದೀಗ ಪ್ರೇಮಿಯೊಬ್ಬನು ಮೆಟ್ರೋ ನಿಲ್ದಾಣದಲ್ಲಿ ತನ್ನ ಪ್ರೇಯಸಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದು, ಈ ಬಗೆಗಿನ ವಿಡಿಯೋವೊಂದು ಸೋಶಿಯಲ್ ಮೀಡಿಯಾ ದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.


Satendra prathap ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ‘ಅಖಿಲ ಭಾರತ ಖಾಂತಿ ಮರ್ದ್ ಅಸೋಸಿಯೇಶನ್ನ ರಾಷ್ಟ್ರೀಯ ಅಧ್ಯಕ್ಷನಾಗಿರುವ ನಾನುಈ ಯುವಕನ ಪುರುಷ ಪ್ರಮಾಣಪತ್ರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸುತ್ತೇನೆ. ಈ ಯುವಕನು ಗಂಡಸು ಜಾತಿಗೆ ಅವಮಾನ. ಈ ಪುರುಷರ ಸಂಘದಿಂದ ಈತನನ್ನು ಅಮಾನತ್ತುಗೊಳಿಸಬೇಕೆಂದು ಅಗ್ರಹಿಸುತ್ತೇನೆ. ಇಂತಹ ಯುವಕರು ನಮ್ಮ ಪುರುಷ ಸಮಾಜಕ್ಕೆ ಕಳಂಕ. ಇಂದು ಆಕೆಯ ಕಾಲಿಗೆ ನಮಸ್ಕರಿಸಿದ್ದಾನೆ. ನಾಳೆ ಆಕೆಯ ಕೈ-ಕಾಲುಗಳನ್ನು ಒತ್ತುತ್ತಾನೆ’ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲಿ ಮೆಟ್ರೋ ನಿಲ್ದಾಣದ ಫ್ಲಾಟ್ ಫಾರ್ಮ್ ನಲ್ಲಿರುವ ಕಟ್ಟೆಯಲ್ಲಿ ಯುವಕನು ಕುಳಿತುಕೊಂಡಿರುವುದನ್ನು ಕಾಣಬಹುದು. ಎದುರಿಗೆ ಆತನ ಪ್ರೇಯಸಿಯೂ ನಿಂತುಕೊಂಡಿದ್ದು ಆತನು ಆಕೆಯ ಪಾದಗಳನ್ನು ಮೂರು ಸಲ ಮುಟ್ಟಿ ಕಣ್ಣಿಗೆ ಒತ್ತಿಕೊಳ್ಳುತ್ತಿರುವುದನ್ನು ಕಾಣಬಹುದು. ಆ ಬಳಿಕ ಕೆಲ ನಿಮಿಷಗಳ ಕಾಲ ಇಬ್ಬರೂ ಮಾತುಕತೆ ನಡೆಸಿದ್ದಾರೆ. ವಿಡಿಯೋದಲ್ಲಿ ಯುವತಿ ಕೈಯಲ್ಲಿ ಕ್ಯಾಂಡಿ ಹಿಡಿದುಕೊಂಡಿರುವ ಈ ಯುವತಿಯೂ ಕುಣಿಯುತ್ತಿರುವುದನ್ನು ಕಾಣಬಹುದು.

https://www.facebook.com/share/r/16QjyDmRij/

ಈ ವಿಡಿಯೋ ಈಗಾಗಲೇ 283.2 ಕೆ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ವಿಡಿಯೋ ನೋಡಿದ ಬಳಕೆದಾರrರು ಮಿಶ್ರ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಬಳಕೆದಾರರೊಬ್ಬರು, ‘ಈಗಲೇ ಈ ಯುವಕನ ಪರಿಸ್ಥಿತಿ ನೋಡಲಾಗುತ್ತಿಲ್ಲ, ಮದುವೆಯಾದ ಮೇಲೆ ಈ ಯುವಕನಿಗೆ ದೇವರೇ ಗತಿ’ ಎಂದಿದ್ದಾರೆ. ಇನ್ನೊಬ್ಬರು, ‘ಹೆಣ್ಣು ಗಂಡು ಸಮಾನರು ಎಂದ ಮೇಲೆ ಪಾದ ಮುಟ್ಟಿ ಸ್ಪರ್ಶಿಸುವುದರಲ್ಲಿ ಏನು ತಪ್ಪಿಲ್ಲ. ಪ್ರೀತಿಯಲ್ಲಿ ಇಬ್ಬರೂ ಸೋಲಬೇಕು. ಆಗ ಮಾತ್ರ ಈ ಪ್ರೀತಿಯೂ ಉಳಿಯಲು ಸಾಧ್ಯ’ ಎಂದಿದ್ದಾರೆ. ಮತ್ತೊರ್ವ ಬಳಕೆದಾರ, ‘ಅಣ್ಣ ಅವನು ಅವಳಿಗೆ ಸಂಪೂರ್ಣವಾಗಿ ಶರಣಾಗಿದ್ದಾನೆ. ಆಗಿದ್ದಾಗ ಮಾತ್ರ ಬದುಕು ಸುಂದರವಾಗಲು ಸಾಧ್ಯ. ಇಲ್ಲದಿದ್ದರೆ ದಿನಾಲೂ ಆಕೆಯೊಂದಿಗೆ ಕಿತ್ತಾಡಿ ಸಾಯಬೇಕಾಗುತ್ತದೆ’ ಎಂದು ಕಾಮೆಂಟ್ ಮಾಡಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!